newskadaba

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 06. ಇಯರ್‌ಫೋನ್‌ ಹಾಕಿಕೊಂಡು ಹಳಿದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇವರು ಶಹಜಹಾನ್‌ ಪುರದ ಇಂದಿರಾನಗರ ರೈಲ್ವೇ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದೇ ರೈಲು ಢಿಕ್ಕಿಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…! Read More »

ಕರಾವಳಿ

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 06. ಇಲ್ಲಿನ ಆರ್ಜಿಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದ್ದು, ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳ ಆರೋಪವೇ ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಗಿದೆ. ಸಂದೀಪ್‌ ಘೋಷ್‌ ಅವರು ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

ಆರ್.ಜಿಕರ್ ಮಾಜಿ ಪ್ರಿನ್ಸಿಪಾಲ್ ಸಂದೀಪ್ ಮನೆ ಮೇಲೆ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಹಳಿಗಳ ಮೇಲೆ ಕಲ್ಲು ಇಡುವುದು ದಂಡಾರ್ಹ ಅಪರಾಧ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 06. ಚಲಿಸುವ ರೈಲಿಗೆ ಕಲ್ಲು ಎಸೆಯುವುದು, ರೈಲು ಹಳಿಗಳ ಮೇಲೆ ಕಲ್ಲು ಇಡುವುದು ಅಥವಾ ಮಣ್ಣು ಸುರಿಯುವುದು ದಂಡಾರ್ಹ ಅಪರಾಧವಾಗಿದೆ ಎಂದು ಮಂಡ್ಯ ರೈಲ್ವೇ ರಕ್ಷಣಾ ದಳದ ನಿರೀಕ್ಷಕ ಎಸ್.ಗೋವಿಂದರಾಜು ತಿಳಿಸಿದ್ದಾರೆ. ತಾಲೂಕಿನ ಯಲಿಯೂರು ಗ್ರಾಮದ ಶ್ರೀಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರೈಲ್ವೆ ಸುರಕ್ಷಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈಲ್ವೇ ನಿಯಮಗಳಿಗೆ ವಿರುದ್ಧವಾಗಿ ಕೃತ್ಯಗಳನ್ನೆಸಗುವುದು ರೈಲ್ವೇ ಅಧಿನಿಯಮ-2003ರ ಪ್ರಕಾರ ದಂಡನೀಯ ಅಪರಾಧವಾಗಿರುತ್ತವೆ. ಎಲ್ಲೆಂದರಲ್ಲಿ ರೈಲು ಹಳಿಗಳನ್ನು ಸಹ ದಾಟುವಂತಿಲ್ಲ.

ರೈಲು ಹಳಿಗಳ ಮೇಲೆ ಕಲ್ಲು ಇಡುವುದು ದಂಡಾರ್ಹ ಅಪರಾಧ Read More »

ಕರ್ನಾಟಕ

ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧಾರ್ ಜೋಡಣೆಯು ಅವಶ್ಯಕವಾಗಿರುತ್ತದೆ. ಆದ್ದರಿಂದ, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿರುವ ಭೂಮಾಲೀಕರು, ಅವರ ಕುಟುಂಬಸ್ಥರು/ಸಂಬಂಧಿಕರು

ಪಹಣಿಗೆ ಆಧಾರ್ ಜೋಡಣೆ – ರೈತರಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಬೆಳೆಹಾನಿ- ರೈತರ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಉಪ ವಿಭಾಗ ಅಧಿಕಾರಿಗಳು, ತಹಶೀಲ್ದಾರ್, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ವೆಬ್‍ ಸೈಟ್ www.dk.nic.in ನಲ್ಲಿ ಸೆಪ್ಟೆಂಬರ್ 4 ರಂದು ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ ಅಥವಾ ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ

ಬೆಳೆಹಾನಿ- ರೈತರ ಪಟ್ಟಿ ಪ್ರಕಟ Read More »

ಕರಾವಳಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ

ಮಂಗಳೂರು ವಿ.ವಿ.ಯಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸಲು 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ಸದರಿ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ. ಅಸಂಘಟಿತ ವಲಯದ ಕಾರ್ಮಿಕರು: ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕ್ಯಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು,

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಯಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 2024ನೇ ಸಾಲಿನ ಪ್ರವೇಶ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣ, ಅನ್ನುತ್ತೀರ್ಣ ಅಭ್ಯರ್ಥಿಗಳು ಸೆಪ್ಟೆಂಬರ್ 30ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಐಟಿಐ ಕದ್ರಿ ಹೀಲ್ಸ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ 0824- 2211285

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top