newskadaba

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಆಲಂಕಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಘಟಕ ಹಾಗೂ ಆಲಂಕಾರು ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಟಾಷ್ಟಮಿ ಅಟ್ಟಿ ಮಡಿಕೆ ಒಡೆಯುವ ಉತ್ಸವವು ಆಲಂಕಾರಿನಲ್ಲಿ ಸೆಪ್ಟೆಂಬರ್ 1ರಂದು ನಡೆಯಿತು. ಆಲಂಕಾರು ಪೇಟೆಯಲ್ಲಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಉದ್ಟಾಟಿಸಿದರು. ಬಳಿಕ  ಆಲಂಕಾರು ಪೇಟೆಯ ವಿವಿದೆಡೆ  ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಮಾರು 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ […]

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ Read More »

ಕರಾವಳಿ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ವಾಹನಗಳಲ್ಲಿ ಇಷ್ಟಬಂದಂತೆ ಸ್ಟಿಕ್ಕರ್‌ ಗಳನ್ನ ಹಾಕಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಿ. ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ. ಈ ಮೊದಲೇ ಸಾರಿಗೆ ಇಲಾಖೆಯ ಸಂಚಾರಿ ನಿಯಮಗಳ ಪ್ರಕಾರ ಈ ರೀತಿಯ ಸ್ಟಿಕ್ಕರ್ ಅಳವಡಿಕೆಗೆ ನಿಷೇಧವಿತ್ತಾದರೂ, ವಾಹನಗ ಮೇಲೆ, ಮನೆಯರ ಹೆಸರು, ದೇವರ ಹೆಸರು, ಸಿನಮಾ ನಟ ನಟಿಯರ ಹೆಸರು ಸ್ಟಿಕ್ಕರ್ ಮಾಡಿಸುವುದು ಸಾಮಾನ್ಯವಾಗಿತ್ತು. ಆದರೆ ಪ್ರಸ್ರುತ ದಿನಗಳಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…! Read More »

ಕರ್ನಾಟಕ

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ Read More »

ಕರ್ನಾಟಕ

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕ-ಮಾಲಕರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಸೆ. 05 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ Read More »

ಕರಾವಳಿ, ಕರ್ನಾಟಕ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರತೀ ವರ್ಷ ಪರಿಶಿಷ್ಟ ವರ್ಗದ (ST) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ. ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ರಂದು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯೋಜನಾ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೆ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ, ಕರ್ನಾಟಕ

ಪಿಲಿಕುಳ ಕಂಬಳ – ಕೆರೆ ಮುಹೂರ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕೆರೆಗೆ ಮುಹೂರ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ ನಿರ್ದೇಶಕಿ ನೂರ್ ಜಹಾನ್, ಕಂಬಳ ಸಂಘಟನೆಗಳ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,

ಪಿಲಿಕುಳ ಕಂಬಳ – ಕೆರೆ ಮುಹೂರ್ತ Read More »

ಕರಾವಳಿ

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು.   ಪ್ರಶಸ್ತಿ ವಿಜೇತ ಶಿಕ್ಷಕರ ವಿವರ ಇಂತಿವೆ- ಕಿರಿಯ ಪ್ರಾಥಮಿಕ 1)

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ
Scroll to Top