newskadaba

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP)ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷದ ಒಳಗಿರಬೇಕು. ಅರ್ಜಿಯನ್ನು SSP ಪೋರ್ಟಲ್ https://ssp.postmatric.karnataka.gov.in ನಲ್ಲಿ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ […]

ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 02. ರಾಷ್ಟ್ರಪತಿಗಳ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠರಾದ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗ್ರಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ, ಕರ್ನಾಟಕ

ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31. ಭಾರತ ಕ್ರಿಕೆಟ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರು ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಮುನ್ನವೇ ಸೂರ್ಯಕುಮಾರ್ ಯಾದವ್ ಅವರ ಕೈಗೆ ಗಾಯವಾಗಿದೆ. ಜೊತೆಗೆ ಸೆ. 05 ರಿಂದ ನಡೆಯಲಿರುವ ದುಲೀಪ್ ಟ್ರೋಫಿಯಲ್ಲೂ ಅವರ ಹೆಸರಿದೆ. ಇನ್ನು ಸೂರ್ಯಕುಮಾರ್ ಯಾದವ್ ಅವರ ಕೈ ಗಾಯವಾಗಿರುವ ಬಗ್ಗೆ ಈವರೆಗೂ ಬಿಸಿಸಿಐ ಯಾವುದೇ ಮಾಹಿತಿಯನ್ನೂ ನೀಡಿಲ್ಲ.

ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಯಾದವ್ ಕೈಗೆ ಗಾಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಳ್ಳಲಾಗಿದೆ- ಆರ್. ಅಶೋಕ್ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಕಾಂಗ್ರೆಸ್ ಸರ್ಕಾರವು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಈ

ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಳ್ಳಲಾಗಿದೆ- ಆರ್. ಅಶೋಕ್ ಆರೋಪ Read More »

ಕರ್ನಾಟಕ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 31. ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ Read More »

ಕರಾವಳಿ

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಶಂಕಿತ ಉಗ್ರನನ್ನು ಅಝೀಝ್ ಅಹ್ಮದ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಎಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದುಬಂದಿದೆ.

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಗಣಪತಿ ದೇವರನ್ನು ಪೂಜಿಸುವ ನಾವು ಪ್ರಕೃತಿ ಹಾಗೂ ಪರಿಸರವನ್ನೂ ಉಳಿಸಬೇಕು. ಹಾಗಾಗಿ ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಈ ವರ್ಷ ದೇಶದಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಹಾಗೂ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ Read More »

ಕರ್ನಾಟಕ

‘X’ ನಿರ್ಬಂಧಿಸಿದ ಭ್ರೆಝಿಲ್..?

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 31. ಎಲಾನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ ‘ಎಕ್ಸ್’ ಅನ್ನು ಬ್ರೇಜಿಲ್‌ ಸರಕಾರವು ನಿರ್ಬಂಧಿಸಲು ಪ್ರಾರಂಭಿಸಿದೆ. ಈ ತಿಂಗಳ ಮೊದಲಿನಿಂದಲೂ ಕಂಪನಿಯು ದಕ್ಷಿಣ ಅಮೆರಿಕಾದ ರಾಷ್ಟ್ರದಲ್ಲಿ ಕಾನೂನು ಪ್ರತಿನಿಧಿಯನ್ನು ಹೊಂದಿಲ್ಲ. ಬ್ರೆಜಿಲ್‌ ನಲ್ಲಿ ಕಾರ್ಯನಿರ್ವಹಿಸುವ ವಿದೇಶಿ ಕಂಪನಿಗಳು ಕಾನೂನು ನಿರ್ಧಾರಗಳ ಕುರಿತು ಯಾರಿಗಾದರೂ ಸೂಚನೆ ನೀಡಬಹುದೆಂದು ಖಚಿತಪಡಿಸಿಕೊಳ್ಳಲು ಸ್ಥಳೀಯ ಪ್ರಾತಿನಿಧ್ಯವನ್ನು ಹೊಂದಿರಬೇಕು ಮತ್ತು ಯಾವುದೇ ಅಗತ್ಯ ಕ್ರಮವನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಅದನ್ನು ಅನುಸರಿಸಲು ವಿಫಲವಾದರೆ ಬ್ರೆಜಿಲ್‌ನಲ್ಲಿ ಎಕ್ಸ್ ಸೇವೆಗಳನ್ನು

‘X’ ನಿರ್ಬಂಧಿಸಿದ ಭ್ರೆಝಿಲ್..? Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ
Scroll to Top