newskadaba

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಭಾರತ ತಂಡದ ಮಾಜಿ ನಾಯಕ ಹಾಗೂ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಅವರನ್ನು ಆಸ್ಟ್ರೇಲಿಯ ವಿರುದ್ಧದ ಬಹುರೂಪಿ ಸರಣಿಗೆ ಭಾರತ ಅಂಡರ್‌-19 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಪೇಸ್‌‍ ಬೌಲಿಂಗ್‌ ಆಲ್‌ ರೌಂಡರ್‌ ಸಮಿತ್‌, ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾರಾಜ ಟಿ-20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ಪರ ಆಡುತ್ತಿದ್ದಾರೆ. 18ರ ಹರೆಯದ ಅವರು ಎಂಟು ಪಂದ್ಯಗಳಿಂದ 362 ರನ್‌ ಗಳಿಸಿದರು. ಸೆಪ್ಟೆಂಬರ್‌ 21, 23 ಮತ್ತು 26 […]

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು- ಮಧುರೈ (ರೈಲು ನಂ. 20671/20672) ಮೀರತ್- ಲಖನೌ (ರೈಲು ನಂ. 22490/22489) ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ಸಂದರ್ಭ ರಾಜ್ಯಪಾಲರು, ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ

ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು Read More »

ಕರ್ನಾಟಕ

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ Read More »

ಕರ್ನಾಟಕ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ಎಂಟ್ರಿಕೊಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನಹರಿಸಿ ಎಂದು

ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ Read More »

ಕರ್ನಾಟಕ

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಲಿಡ್‍ ಕರ್ ಮಾರಾಟ ಮಳಿಗೆಯಲ್ಲಿ 2024ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಚರ್ಮ ಉತ್ಪನ್ನಗಳ ಮೇಲೆ ಶೇಕಡಾ 20 ರಿಂದ ಶೇಕಡ 40ರ ವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಳಿಗೆಯು ಕೊಡಿಯಾಲ್‍ ಬೈಲ್ ಕೆಎಸ್‍ ಆರ್ ರಾವ್ ರಸ್ತೆ ಅಂಬೇಡ್ಕರ್ ವಾಣಿಜ್ಯ ಸಂಕೀರ್ಣದಲ್ಲಿದ್ದು (ಪಿ.ವಿ.ಎಸ್ ಸರ್ಕಲ್ ಸಮೀಪ) ಮಳಿಗೆಯಲ್ಲಿ ಚರ್ಮದಿಂದಲೇ ತಯಾರಿಸಿದ ಶೂ, ಚಪ್ಪಲ್,

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2024-2025ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಪಂಜ ವಲಯ ಕಾಂಗ್ರೆಸ್ ಮತ್ತು ದಾನಿಗಳಿಂದ ಸಂಗ್ರಹಿಸಿದ ಹಣ ಹಸ್ತಾಂತರ

(ನ್ಯೂಸ್ ಕಡಬ) newskadaba.com ಪಂಜ, ಆ. 31. ಪಂಜ ಐವತ್ತೋಕ್ಲು ಗ್ರಾಮದ ಬೊಳ್ಳಾಜೆ ತಿಮ್ಮಪ್ಪ ಗೌಡರ ಪತ್ನಿಯ ಅಕಾಲಿಕ ಮರಣದಿಂದಾಗಿ ಕಂಗೆಟ್ಟ ತಿಮ್ಮಪ್ಪ ಗೌಡರಿಗೆ  ಬೊಳ್ಳಾಜೆ ಲಕ್ಷ್ಮಣ ಗೌಡರ ನೇತೃತ್ವದಲ್ಲಿ ಪಂಜ ವಲಯ ಕಾಂಗ್ರೆಸ್ ಮತ್ತು ಊರಿನ ದಾನಿಗಳಿಂದ ಸಂಗ್ರಹಿಸಿದ ಹಣವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಪಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಬೊಳ್ಳಾಜೆ, ಚಿನ್ನಪ್ಪ  ಸಂಕಡ್ಕ, ದಿನೇಶ್ ಪುಂಡಿಮನೆ,

ಪಂಜ ವಲಯ ಕಾಂಗ್ರೆಸ್ ಮತ್ತು ದಾನಿಗಳಿಂದ ಸಂಗ್ರಹಿಸಿದ ಹಣ ಹಸ್ತಾಂತರ Read More »

ಕರಾವಳಿ
Scroll to Top