newskadaba

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜು. 20. ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ. ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ […]

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜು. 18. ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿಯ ಕೈಗಾರಿಕಾ ವಲಯದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದ್ದು, ಹಲವು ಕೈಗಾರಿಕಾ ಘಟಕಗಳು ಜಲಾವೃತಗೊಂಡಿವೆ. ಕೈಗಾರಿಕಾ ಘಟಕಗಳೊಳಗೆ ನೀರು ನುಗ್ಗಿದ ಪರಿಣಾಮ ಯಂತ್ರೋಪಕರಣಗಳು ಹಾಗೂ ಕಚ್ಚಾ ವಸ್ತುಗಳು ಹಾನಿಗೊಳಗಾಗಿದ್ದು, ಉದ್ಯಮಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಕೈಗಾರಿಕಾ ಪ್ರದೇಶದ ಸುತ್ತಮುತ್ತಲಿರುವ ಮಳೆನೀರು ಹರಿವಿನ ಚರಂಡಿಗಳ ಅವೈಜ್ಞಾನಿಕ ನಿರ್ಮಾಣ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯೇ ಈ ಕೃತಕ

ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಜು. 18. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಬಿಎಂಡಬ್ಲ್ಯು ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು. 18. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಂಟ್ವಾಳ ಸೇರಿದಂತೆ ರಾಷ್ಟ್ರದ 75 ರೈಲ್ವೇ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಬಂಟ್ವಾಳ ರೈಲ್ವೇ ನಿಲ್ದಾಣದ ಬೃಹತ್ ಎಲ್.ಇ.ಡಿ ಪರದೆಯ ಮೂಲಕ ನೇರ ಪ್ರಸಾರ ಮಾಡಲಾಯಿತು. ​ ​ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ 26.18 ಕೋಟಿ ರೂ.

ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಆಗಸ್ಟ್ 15ರ ವರೆಗೆ ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

(ನ್ಯೂಸ್ ಕಡಬ) newskadaba.com ಜು. 17. ರಾಷ್ಟ್ರರಾಜಧಾನಿ ಹೊಸದಿಲ್ಲಿಯ ಐತಿಹಾಸಿಕ ಕೆಂಪುಕೋಟೆ ಸಂಕೀರ್ಣವನ್ನು ಆಗಸ್ಟ್ 15ರ ವರೆಗೆ ಸಾರ್ವಜನಿಕರಿಗೆ ಮುಚ್ಚಲಾಗಿದೆ. ಕೆಂಪುಕೋಟೆ ಸಂಕೀರ್ಣದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಸಿದ್ದತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಪುರಾತನ ಸ್ಮಾರಕಗಳು ಹಾಗೂ ಪುರಾತತ್ವ ತಾಣಗಳು ಮತ್ತು ಪಳೆಯುಳಿಕೆಗಳ ಕಾನೂನುಗಳು, 1959ರ ನಿಯಮ 5ರಡಿ ಪ್ರದತ್ತವಾದ ಅಧಿಕಾರಗಳನ್ನು ಬಳಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ ಎಂದು ASI ಪ್ರಕಟಣೆ ತಿಳಿಸಿದೆ.

ಆಗಸ್ಟ್ 15ರ ವರೆಗೆ ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ

(ನ್ಯೂಸ್ ಕಡಬ) newskadaba.com ಜು. 17. ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಬಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದ ಇವರು, ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕ ಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರಲ್ಲಿ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಅವರು, ಪ್ರಸ್ತುತ

ಸುಳ್ಯ: ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಉಪತಹಶೀಲ್ದಾರ್ ಆಗಿ ಬಡ್ತಿ Read More »

ಕರಾವಳಿ

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ

(ನ್ಯೂಸ್ ಕಡಬ) newskadaba.com ಕಡಬ, ಜು. 17. ಜುಲೈ 16ರ ಗುರುವಾರದಂದು ಸಂಜೆ 4:30ಕ್ಕೆ ಕಡಬದಿಂದ ಪಂಜ ಮಾರ್ಗವಾಗಿ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಸುಮಾರು ನಾಲ್ಕು ಪವನ್ ಚಿನ್ನದ ಕರಿಮಣಿ ಸರ ಕಳೆದುಹೋಗಿರುತ್ತದೆ.                                               ​   ಬಸ್ಸಿನಲ್ಲಿ ಅಥವಾ ಬಸ್ ನಿಲ್ದಾಣದ ಪರಿಸರದಲ್ಲಿ ಈ ಸರವು ಯಾರಿಗಾದರೂ ದೊರೆತಿದ್ದಲ್ಲಿ, ದಯವಿಟ್ಟು ಮಾನವೀಯತೆಯ ದೃಷ್ಟಿಯಿಂದ ಈ ಕೆಳಗಿನ 7349319974, 9164192010 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿ. ಸರವನ್ನು ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನವನ್ನು

ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ರಾಜ್ಯ ಅರಣ್ಯ ಇಲಾಖೆಯಲ್ಲಿ ನಡೆದ  40 ವಲಯ ಅರಣ್ಯಾಧಿಕಾರಿಗಳ (RFO) ವರ್ಗಾವಣೆಗೆ ಸಂಬಂಧಿಸಿದ ಆದೇಶ ಹೊರಡಿಸಲಾಗಿದೆ.   ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಸುಳ್ಯ ಹಾಗೂ ಪಂಜ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರು ದಕ್ಷ ಹಾಗು ಜನಪ್ರಿಯ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರನ್ನು ಕುಶಾಲನಗರದ ವಲಯ ಅರಣ್ಯ

ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ Read More »

ಕರಾವಳಿ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಎಸ್.ಐ.ಆರ್‍ ನಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರು ಹಕ್ಕನ್ನು ಚಲಾಯಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತಿ ಸ್ವೀಪ್ ಸಂಯೋಜಕಿ ಸುಮಂಗಲ ನಾಯಕ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ 2026 (SIR) ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ಮತದಾರರು ಹಿಂದುಳಿಯದಂತೆ ನೋಡಿಕೊಳ್ಳುವುದು ನಮ್ಮ

ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ Read More »

ಕರಾವಳಿ

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ತಾಲೂಕಿನ  ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ  ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ  ಗ್ರಾಮ ಪಂಚಾಯತ್ ಪಿಡಿಒ  ದೂರು ನೀಡಿದ್ದಾರೆ.

ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು Read More »

ಕರಾವಳಿ
Scroll to Top