newskadaba

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಒಟ್ಟು 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 2 ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ ಮೊದಲ ಬಾರಿಗೆ 35 ಡಿವೈಎಸ್ಪಿ ಮತ್ತು 88 ಇನ್ಸ್ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಇನ್ಸ್ಪೆಕ್ಟರ್ ಮೇಲ್ಪಟ್ಟ ಅಧಿಕಾರಿಗಳ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ 2 ವರ್ಷಗಳ ಕಾಲಾವಧಿ ನಿಗದಿಗೊಳಿಸಿ ನಿಯಮ ಜಾರಿ ಮಾಡಿದೆ. […]

35 ಡಿವೈಎಸ್ಪಿ, 88 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ – ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ, ಹಲವರನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ.   ಪೊಲೀಸರು ಇಂದು ಮುಂಜಾನೆ ಐದು ಗಂಟೆಯಿಂದ ಬೆಂಗಳೂರಿನ ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ದಾಳಿ ನಡೆಸಿರುವುದಾಗಿ ಹಲವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ದಾಳಿ ವೇಳೆ ರೌಡಿಶೀಟರ್ ಗಳ ಮನೆಯಲ್ಲಿ ಲಾಂಗ್ ಪತ್ತೆಯಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ – ಹಲವರು ವಶಕ್ಕೆ Read More »

ಕರ್ನಾಟಕ

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಭಾರೀ ಗಾಳಿ, ಮಳೆಯ ನಡುವೆ ಸಿಂಧುದುರ್ಗ ಜಿಲ್ಲೆಯ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪ್ರತಿಮೆ ಕುಸಿದು ಬಿದ್ದಿದ್ದು, ಇದಾದ ಕೆಲವೇ ಗಂಟೆಗಳ ಬಳಿಕ ಭಾರತೀಯ ನೌಕಾಪಡೆಗೆ ತನಿಖೆಗೆ ಆದೇಶಿಸಲಾಗಿದೆ. ಈ ನಡುವೆ ಗುತ್ತಿಗೆದಾರ ಮತ್ತು ರಚನಾತ್ಮಕ ಸಲಹೆಗಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಕಾಏಕಿ ಸುಮಾರು 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪತನಗೊಂಡಿದ್ದು, ಭಾರೀ ಆತಂಕ ಮೂಡಿಸಿತ್ತು. ಇದೀಗ ಗುತ್ತಿಗೆದಾರ ಜಯದೀಪ್‌ ಆಪ್ಟೆ ಮತ್ತು

ಕುಸಿದುಬಿದ್ದ ಛತ್ರಪತಿ ಮಹಾರಾಜರ ಬೃಹತ್ ಪ್ರತಿಮೆ- ತನಿಖೆಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಶಾಲಾ- ಕಾಲೇಜಿಗೆ ಪ್ರವೇಶ ಪಡೆಯುವುದರಿಂದ ಹಿಡಿದು ಪಾನ್ ಕಾರ್ಡ್ ಪಡೆಯುವವರೆಗೆ ಮತ್ತು ಸರ್ಕಾರದ ಯೋಜನೆಗಳಲ್ಲಿ ಆಧಾರ್ ಕಾರ್ಡಿನ ಉಪಯೋಗ ಬಹಳಷ್ಟಿದೆ. ಜನರು ಬಯಸದೆಯೂ ಸಹ ಈ ಪ್ರಮುಖ ದಾಖಲೆಯನ್ನು ಮಾಡುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ. ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಕೆಲವು ತಪ್ಪುಗಳಿದ್ದರೆ, ಅದನ್ನು ಉಚಿತವಾಗಿ ನವೀಕರಿಸಲು ನಿಮಗೆ ಇದೀಗ ಅವಕಾಶವಿದೆ. ಹತ್ತು ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದ ಜನರು ಅದನ್ನು ಸೆಪ್ಟೆಂಬರ್ 14 ರವರೆಗೆ ಉಚಿತವಾಗಿ ನವೀಕರಿಸಬಹುದು.

ಆಧಾರ್ ಉಚಿತ ಅಪ್ಡೇಟ್ ಗೆ ಸೆ. 14 ಕೊನೆಯ ದಿನ…! Read More »

ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com ಆ. 27. ಆಹಾರ ಅರಸಿಕೊಂಡು ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಯು ಬೇಲಿ ದಾಟುವ ವೇಳೆ ತೋಟಕ್ಕೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 39 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ 2024ರ ಕಾರ್ಯಕ್ರಮವು ವೆನ್‍ ಲಾಕ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಮಾತನಾಡಿ, ಮಾನವನ ಸಾವಿನ

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ -66 ರಲ್ಲಿ ಹೆದ್ದಾರಿ ಪ್ರಾಧಿಕಾರದವರು ಭೂಸ್ವಾಧೀನಪಡಿಸಿದ ಕೆ.ಪಿ.ಟಿ ಯಿಂದ ನಂತೂರು ವರೆಗಿನ ಪದವು, ಕದ್ರಿ ಬಿ ಮತ್ತು ಮರೋಳಿ  ಗ್ರಾಮ ವ್ಯಾಪ್ತಿಯಲ್ಲಿನ ಚೈನೇಜ್ 1+900 ರಿಂದ 2.500 ರಲ್ಲಿ 0.350 ಕಿ.ಮೀ ವ್ಯಾಪ್ತಿಯಲ್ಲಿ ನಡೆಯಲಿರುವ ರಸ್ತೆ ಅಗಲೀಕರಣ ಕಾಮಗಾರಿಗೆ ಅಡಚಣೆಯಾಗುವ 99 ಮರಗಳನ್ನು ಕಡಿಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅರ್ಜಿ ಸಲ್ಲಿಸಿದ್ದಾರೆ.   ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯನ್ವಯ

ಹೆದ್ದಾರಿ ಅಗಲೀಕರಣ- ಮರಗಳ ತೆರವು; ಸೆಪ್ಟೆಂಬರ್ 2ರಂದು ಅಹವಾಲು ಸಭೆ Read More »

ಕರಾವಳಿ, ಕರ್ನಾಟಕ

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಯಾವುದೇ ಜಾತಿ, ಮತದ ಭೇದವಿಲ್ಲದೆ  ಅನ್ಯ ಜಾತಿಯವರು  ತಮ್ಮ ಮಕ್ಕಳಿಗೆ ಕೃಷ್ಣವೇಶವನ್ನು  ಹಾಕುವ ಸನ್ನಿವೇಶವನ್ನು  ಕಾಣುತ್ತೇವೆ. ಶ್ರೀಕೃಷ್ಣ ಪರಮಾತ್ಮನ ಆದರ್ಶಗಳು  ಜಾತಿ ಮತವನ್ನು ಮೀರಿರುವಂಥದ್ದು. ಎಲ್ಲಾ ಜಾತಿ ಧರ್ಮದವರಿಗೂ ಪ್ರೇರಣೆಯಾಗುವಂತದ್ದು ಎಂದು ಮಂಗಳೂರು ದಕ್ಷಿಣ ಶಾಸಕ ವೇದ ವ್ಯಾಸ್ ಕಾಮತ್  ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ನೌಕರರ ಸಂಘ ನಂದಿನಿ ಸಭಾಭವನದಲ್ಲಿ

ಶ್ರೀ ಕೃಷ್ಣನ ಆದರ್ಶಗಳು ಎಲ್ಲರಿಗೂ ಪ್ರೇರಣೆ – ಶಾಸಕ ಕಾಮತ್ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮಂಗಳೂರಿನ ಸರ್ಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಗಸ್ಟ್ 31ರವರೆಗೆ ಪ್ರವೇಶಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರ– ಎಲೆಕ್ಟ್ರಾನಿಕ್ ಮೆಕ್ಯಾನಿಕ್ ತರಬೇತಿ ಅವಧಿ 2 ವರ್ಷ, ಖಾಲಿ ಇರುವ ಸೀಟುಗಳು 18 ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ತರಬೇತಿ ಅವಧಿ ಎರಡು ವರ್ಷ,  ಖಾಲಿ ಇರುವ ಸೀಟುಗಳು 10. ಎಲೆಕ್ಟ್ರಿಷಿಯನ್

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top