newskadaba

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಆ. 26.  ಟೆಲಿಗ್ರಾಮ್ ಪ್ಲಾಟ್‌ ಫಾರ್ಮ್ ಗೆ ಸಂಬಂಧಪಟ್ಟ ಅಪರಾಧಗಳಿಗೆ ಸಂಬಂಧಿಸಿದ ವಾರಂಟ್ ಅಡಿಯಲ್ಲಿ ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅವರನ್ನು ಫ್ರೆಂಚ್ ಅಧಿಕಾರಿಗಳು ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ಮೂಲಗಳು ಮಾಹಿತಿ ನೀಡಿದ್ದಾರೆ. ದುರೋವ್ ಅವರ ಬಂಧನದ ಸುದ್ದಿ ಕೇಳಿ ಕೆಲವು ರಷ್ಯಾದ ರಾಜಕಾರಣಿಗಳು ಮತ್ತು ರಾಜತಾಂತ್ರಿಕರು ಫ್ರಾನ್ಸ್ ನ ಕ್ರಮವನ್ನು ಖಂಡಿಸಿದ್ದಾರೆ. ವಿಶ್ವಾದ್ಯಂತ ಫ್ರೆಂಚ್ ರಾಯಭಾರ ಕಚೇರಿಗಳಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸುಮಾರು 900 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ […]

ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್ ಅರೆಸ್ಟ್..! Read More »

ಅಂತರ್ರಾಷ್ಟ್ರೀಯ ನ್ಯೂಸ್

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಈ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು

ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ Read More »

ಕರಾವಳಿ, ಕರ್ನಾಟಕ

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ

 (ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನ ನವಾದಿಯಾ ಮುಖೇಶ್ ಭಾಯಿ ಗಣೇಶ್‌ಬಾಯಿ(44) ಹಾಗೂ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯ ಧರಮ್ಮಿತ್ ಕಮಲೇಶ್ ಚೌಹಾನ್(28) ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಮೊಬೈಲ್  ಗಳು ಹಾಗೂ 13,95,000ರೂ.

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 26. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನವು ಅರಂತೋಡು ಪೇಟೆಯಲ್ಲಿ ನಡೆಯಿತು.   ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

ಅರಂತೋಡು: ಸ್ವಚ್ಚತಾ ಅಭಿಯಾನ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ
Theft, crime, Robbery

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋದವರು, ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮರುದಿನ ಮನೆಗೆ ಮರಳಿಬಂದಾಗ ಮನೆಯಲ್ಲಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರಿಗೆ ಅದು ಅಸಾಧ್ಯವಾದಾಗ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿದ ಕಳ್ಳರು ಮನೆಯ ಕೋಣೆಯಲ್ಲಿದ್ದ

ಸರ್ವೆ: ಮನೆಯ ಕಿಟಕಿ ಮುರಿದು ನಗ-ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಮ ಉಲ್ಲಂಘಿಸುವ ಚಾಲಕರ ಲೈಸೆನ್ಸ್ ಅಮಾನತು..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಆ. 24. ಪದೇ ಪದೇ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ಲೈಸನ್ಸ್ ಅಮಾನತ್ತುಗೊಳಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊಸದಾಗಿ ಚಾಲನಾ ಪತ್ರ ಪಡೆಯಲು ಬರುವ ಚಾಲಕರಿಗೆ ಒಂದು ಗಂಟೆಗಳ ಕಾಲ ತರಬೇತಿ ನೀಡಲಾಗುತ್ತಿದೆ. ಚಾಲನಾ ಪತ್ರದ ಮಹತ್ವ, ಹೆಲ್ಮೆಟ್ ಧರಿಸಿ ಚಾಲನೆ ಮಾಡುವುದು, ವಾಹನವನ್ನು ವಿಮೆಗೆ ಒಳಪಡಿಸುವುದು

ನಿಯಮ ಉಲ್ಲಂಘಿಸುವ ಚಾಲಕರ ಲೈಸೆನ್ಸ್ ಅಮಾನತು..! Read More »

ಕರ್ನಾಟಕ

ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 24. ಪತಿ- ಪತ್ನಿ ಸಾವಿನಲ್ಲಿ ಒಂದಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶೇಖರ್​ (70) ಹಾಗೂ ಸುಮಿತ್ರಮ್ಮ (65) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಕೃಷಿಕರಾಗಿದ್ದು, ಗ್ರಾಮ ಸಮೀಪದ ರಾಮನಗುಡ್ಡ ಬಳಿಯ ಜಮೀನಿನಲ್ಲಿ ವಾಸವಿದ್ದರು. ಮೊದಲಿಗೆ ಪತ್ನಿ ಸುಮಿತ್ರಮ್ಮರವರಿಗೆ ಹೃದಯಘಾತವಾಗಿ ಮೃತಪಟ್ಟರೆ, ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶೇಖರ್ ರವರು ಸಹ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top