newskadaba

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.11. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಕಡಬದ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS and Vedhik IAS Academy ಸಂಸ್ಥೆಗೆ Admission Manager (ಮಹಿಳೆ), Student Counsellor (ಮಹಿಳೆ) ಮತ್ತು Telecaller ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ

(ನ್ಯೂಸ್‌ ಕಡಬ) newskadaba ಬೆಂಗಳೂರು, ಮಾ.09: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. https://kaveri.karnataka.gov.in/ ಭೇಟಿ ನೀಡಿ

ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಇನ್ನಷ್ಟು ಸುಲಭ Read More »

ಕರ್ನಾಟಕ

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 05. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ 120ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ಪ್ರಕರಣದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ – ಈಡಿ ದಾಖಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 05. ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ. 20ರಷ್ಟು, ಮತ್ತೊಬ್ಬಳಿಗೆ ಶೇ. 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ.

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ Read More »

ಕರಾವಳಿ, ಕರ್ನಾಟಕ

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು

(ನ್ಯೂಸ್ ಕಡಬ) newskadaba.com ಮಾ. 05. ಕಳೆದ ಒಂದು ವಾರಗಳಿಂದ ನಮ್ಮ ಪುತ್ತೂರು ಹಲವಾರು ಅಪಘಾತಗಳ ಸುದ್ದಿಗಳನ್ನೇ ಹೊತ್ತು ತರುತ್ತಿದ್ದು, ಇನ್ನೂ ಚಿಗುರು ಮೀಸೆ ಚಿಗುರೊಡೆಯದ ಹಲವಾರು ಎಳೆ ಪ್ರಾಯದ ಮಕ್ಕಳು ಈ ಅಪಘಾತಗಳಲ್ಲಿ ಬಲಿಯಾಗುತ್ತಿರುವುದು ಖೇದಕರ ಸಂಗತಿ. ಒಂದು ಕಡೆ ತನ್ನ ಮಕ್ಕಳ ಆಗಮನಕ್ಕಾಗಿ ಕಾಯುತ್ತಿರುವ ಮನೆಗಳಲ್ಲಿ ತನ್ನ ಮಗನನ್ನು ಹೊತ್ತು ಬರುತ್ತಿರುವುದು ಆಂಬುಲೆನ್ಸ್ ಗಳಾಗಿವೆ ಎಂಬ ದುಃಖಕರ ಸನ್ನಿವೇಷಕ್ಕೆ ನಮ್ಮೂರು ಸಾಕ್ಷಿಯಾಗುತ್ತಿದೆ. ಹಲವಾರು ಮರಣಗಳನ್ನು ನೋಡಿರುವ ನಾವುಗಳು ಇನ್ನೂ ಕೂಡ ಎಚ್ಚತ್ತಿಲ್ಲ ಎಂಬುವುದು ಖೇದಕರ.

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು Read More »

ಕರಾವಳಿ, ವಿಶೇಷ ಲೇಖನಗಳು

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಮಾ. 01. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಲತ: ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿಳ್ಳೆ ಪೂಜಾರಿ(32) ಎಂದು ಗುರುತಿಸಲಾಗಿದೆ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬ ಮನೆ ನವೀಕರಣ ಹಿನ್ನೆಲೆ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತನಾಗಿದ್ದ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕ್ ನಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದು, ನಿನ್ನೆ ಸಂಜೆ

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top