newskadaba

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹೇಶ್ ಪೈ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜಪಡಿಸಲಾಗಿದ್ದು, ಮಂಗಳೂರು ನ್ಯಾಯಾಲಯವು ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 5000 ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಖ್ಯಾತ ಪತ್ರಕರ್ತ, ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು, ಮೊದಲು ನವಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿ, ಬಳಿಕ ಉದಯವಾಣಿಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಹೃದಯಾಘಾತದಿಂದಾಗಿ ಪತ್ನಿ ಮೃತಪಟ್ಟ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಗ್ರಾಮಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಹಾಗೂ ಪತಿ ಶೇಷಪ್ಪ ಪೂಜಾರಿ(63) ಎದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೀನಾಕ್ಷಿಯವರು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರದಂದು ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್‍ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ Read More »

ಕರಾವಳಿ

ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು,

ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ Read More »

ಕರಾವಳಿ

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಮೂಲಕ 250ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ – ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಬಳಸಿ ಸುಮಾರು 250ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬೆಂಗಳೂರು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಜಸ್ಥಾನ ಮೂಲದ ನರೇಶ್ ಪೂಜಾರಿ ಗೋಸ್ವಾಮಿ(45) ಎಂದು ಗುರುತಿಸಲಾಗಿದೆ. ಈತ ಮ್ಯಾಟ್ರಿಮೋನಿಯಲ್ ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ಸೃಷ್ಟಿಸಿ ಮಹಿಳೆಯರು ಹಾಗೂ ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡ್ಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನ ವಿರುದ್ಧ ಕೊಯಮತ್ತೂರಿನ

ನಕಲಿ ಮ್ಯಾಟ್ರಿಮೋನಿಯಲ್ ಖಾತೆ ಮೂಲಕ 250ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ – ಓರ್ವನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 29. ಮೀನುಗಾರಿಕೆಯಿಂದ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡೀಸೆಲ್ ಅನ್ನು ಅಪರಿಚಿತರು ದೋಚಿರುವುದಾಗಿ ಮಲ್ಪೆ ಕೊಡವೂರು ಗ್ರಾಮ ನಿವಾಸಿ ಚೇತನ್‌ ಸಾಲಿಯಾನ್‌ ಅವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಫೆಬ್ರವರಿ 19ರಂದು ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ, ಅಶೋಕ ಕುಮುಟ, ಕಾರ್ತಿಕ್‌

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಡ ಹೆಚ್ಚಾಗಿದ್ದು, ಅದಕ್ಕಾಗಿ ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿತ್ತು. ಈ

ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್ Read More »

ಕರ್ನಾಟಕ

ಬಿದ್ದು ಸಿಕ್ಕಿದ 14 ಸಾವಿರ ರೂ ಹಣವನ್ನು ದೇವಸ್ಥಾನದ ಅರ್ಚಕರಿಗೊಪ್ಪಿಸಿದ ಪತ್ರಕರ್ತ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಫೆ. 29. ಶಿರ್ತಾಡಿ- ವಾಲ್ಪಾಡಿಯ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಸಿಕ್ಕಿದ 14,010 ರೂ. ಹಣವನ್ನು ಶ್ರೀ ಕ್ಷೇತ್ರದ ಅರ್ಚಕರಿಗೊಪ್ಪಿಸಿದ ಕುರಿತು ವರದಿಯಾಗಿದೆ. ಪತ್ರಕರ್ತ ಆರ್.ಬಿ.ಜಗದೀಶ್ ರವರು ಇಂದು (ಗುರುವಾರ) ಬೆಳಿಗ್ಗೆ 8.30ರ ವೇಳೆಗೆ ಶಿರ್ತಾಡಿ- ವಾಲ್ಪಾಡಿಯ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಿಂತಿರುಗುತ್ತಿದ್ದ ವೇಳೆ ಮೆಟ್ಟಲಿನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿರುವುದನ್ನು ಗಮನಿಸಿದ್ದರು. ಅದರಲ್ಲಿ ಒಟ್ಟು 14,010 ರೂ. ಹಣವಿದ್ದು, ಅದನ್ನು

ಬಿದ್ದು ಸಿಕ್ಕಿದ 14 ಸಾವಿರ ರೂ ಹಣವನ್ನು ದೇವಸ್ಥಾನದ ಅರ್ಚಕರಿಗೊಪ್ಪಿಸಿದ ಪತ್ರಕರ್ತ Read More »

ಕರಾವಳಿ

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ನಾಳೆಯಿಂದ (ಮಾ.01) ಆರಂಭಗೊಳ್ಳಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 36,147 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿದ್ದಾರೆ ಎಂದು ಡಿಡಿಪಿಯು ಮಾಹಿತಿ ನೀಡಿದ್ದಾರೆ. ಈ ಪೈಕಿ ರೆಗ್ಯುಲರ್ ಆಗಿ 34,125, ಖಾಸಗಿಯಾಗಿ 1,635, ಪುನರಾವರ್ತಿತರಾಗಿ 387 ವಿದ್ಯಾರ್ಥಿಗಳ ಸಹಿತ 36,147 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಸರಕಾರಿ, 21 ಅನುದಾನಿತ, 17 ಅನುದಾನ ರಹಿತ ಒಟ್ಟು 53

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ Read More »

ಕರಾವಳಿ
Scroll to Top