newskadaba

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ಲಾಹೋರ್, ಫೆ. 27. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕಿಯಾಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ. 2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು.

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಮೈಸೂರು ಸಂಸದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ತನ್ನ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಮೈಸೂರು ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದು

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಮೈಸೂರು ಸಂಸದ Read More »

ಕರ್ನಾಟಕ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತ ಆರೋಪಿಯನ್ನು ಟಿ.ಇ.ಜೋಸೆಫ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನು 16 ವರ್ಷಗಳಿಂದ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು, ಈತನ ವಿರುದ್ದ ನ್ಯಾಯಾಲಯವು ದಸ್ತಗಿರಿ

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಲೋಕೋಪಯೋಗಿ ಇಲಾಖೆಯಿಂದ  2024 ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯ ಮುಖ್ಯ ಉದ್ದೇಶವೇನೆಂದರೆ, ವಾಹನ ಸಂಚಾರದ ಬೆಳವಣಿಗೆ

ಲೋಕೋಪಯೋಗಿ ಇಲಾಖೆಯಿಂದ ಫೆಬ್ರವರಿ 29 ರಿಂದ ರಸ್ತೆ ಸಂಚಾರ ಸಮೀಕ್ಷೆ Read More »

ಕರ್ನಾಟಕ

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮವು ಪಣಂಬೂರು ಬೀಚ್‍ ನಲ್ಲಿ ಮಾರ್ಚ್ 1ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮಾರ್ಚ್ 1ರಿಂದ ಜಾನಪದ ಕಡಲೋತ್ಸವ Read More »

ಕರಾವಳಿ

ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಯೋಜನಾ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮ್ಸ್- ರಾಯಚೂರು ಇವರ ಸಹಯೋಗದಲ್ಲಿ ಫೆ. 26 ರಂದು ಜಲಜೀವನ್ ಮಿಷನ್ ಯೋಜನೆಯ ಪ್ರಚಾರ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಚಾಲನೆ ನೀಡಿದರು. ನೀರಿನ ಸದ್ಬಳಕೆ, ಮಳೆ ನೀರಿನ ಕೊಯ್ಲು, ಬೂದು ನೀರಿನ ನಿರ್ವಹಣೆ

ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ದ.ಕ ಜಿಲ್ಲೆ, ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಪಾಲಕರ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಫೆ. 28 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಮನೋವೈದ್ಯ ಡಾ. ಸಿ.ಆರ್ ಚಂದ್ರಶೇಖರ್

ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »

ಕರಾವಳಿ

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅನ್ವೇಷಣೆ 2024 ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಫೆಬ್ರವರಿ 23ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಆಧುನಿಕ ಯುಗದಲ್ಲಿ ವಿಜ್ಞಾನ ಅಗತ್ಯ, ಆದರೆ ಅದರ ಒಳಿತು ಕೆಡುಕುಗಳನ್ನು ಅರಿತುಕೊಂಡು ಎಷ್ಟು ಬೇಕೋ ಅಷ್ಟೇ ಬಳಸಿಕೊಳ್ಳಬೇಕು. ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ ಎಂದು ಶಶಿಧರ ಪಿ ನಿವೃತ್ತ ಮುಖ್ಯ ಗುರುಗಳು ಜಿ.ಎಚ್.ಎಸ್ ದೋಳ್ಪಾಡಿ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ Read More »

ಕರಾವಳಿ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮದಲ್ಲಿ ಸಭಾ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ Read More »

ಕರಾವಳಿ
Scroll to Top