newskadaba

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಪ್ರಕಟಿಸಿದೆ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ ಮೂಲಕ ಸರಬರಾಜು ಮಾಡಲಾಗುತ್ತದೆ.

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೀದರ್, ಫೆ. 23.  ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14.26 ಲಕ್ಷ ರೂಪಾಯಿ ನಗದು ಸಹಿತ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್ ನ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭೆ ಚುನಾವಣೆ ಸುಮೀಪಿಸುತ್ತಿರುವುದರಿಂದ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಸವಕಲ್ಯಾಣದಿಂದ ಮಹಾರಾಷ್ಟ್ರದ ಲಾತೂರ್ ಗೆ ತೆರಳುತ್ತಿದ್ದ ಈಚರ್ ಗೂಡ್ಸ್ ವಾಹನವನ್ನು ತಪಾಸಣೆ ನಡೆಸಿದಾಗ 5.26 ಲಕ್ಷ

ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅನಾರೊಗ್ಯದ ಹಿನ್ನೆಲೆ ಇಂದು (ಶುಕ್ರವಾರ) ಮುಕ್ತಾಯವಾಗಬೇಕಿದ್ದ ವಿಧಾನಸಭೆ ಬಜೆಟ್ ಅಧಿವೇಶನವನ್ನು ಸೋಮವಾರಕ್ಕೆ ವಿಸ್ತರಿಸಲಾಗಿದೆ. ಬಜೆಟ್ ಮೇಲಿನ ಕೆಲವು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಅಂಗೀಕಾರ ಬಾಕಿಯಿದ್ದು ಸಿಎಂ ಸಿದ್ದರಾಮಯ್ಯರವರಿಗೆ ಅನಾರೋಗ್ಯವಿರುವುದರಿಂದ ಕಲಾಪದಲ್ಲಿ ಸರಿಯಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಸೋಮವಾರ ಸದನದಲ್ಲಿ ಕಲಾಪಕ್ಕೆ ಹಾಜರಾಗಲಿದ್ದಾರೆ. ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಡೆದ ತೀರ್ಮಾನದ ಬಳಿಕ ಅಧಿವೇಶನ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ Read More »

ಕರ್ನಾಟಕ

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಾಯಂಡಹಳ್ಳಿ ಸಮೀಪದ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಫೆ. 23. ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಲ್ಲದೇ, ಮನೆಯೊಳಗೆ ಹೋಗಿ ಮಹಿಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..! Read More »

ಕರಾವಳಿ, ಕರ್ನಾಟಕ

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com ಕೋಝಿಕ್ಕೋಡ್, ಫೆ. 23. ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಪಿಎಂ ನಾಯಕರೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪೆರುವತ್ತೂರ್‌ ನ ಚೆರಿಯಾಪುರಂ ದೇವಾಲಯದ ಆವರಣದಲ್ಲಿ ಗುರುವಾರದಂದು ರಾತ್ರಿ ನಡೆದಿದೆ. ಕೊಲೆಯಾದವರನ್ನು ಕೊಯಿಲಾಂಡಿ ಸಿಪಿಎಂ ಕೇಂದ್ರೀಯ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಪಿ.ವಿ.ಸತ್ಯನಾಥನ್ (62) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಗುರುವಾರದಂದು ರಾತ್ರಿ 10 ಗಂಟೆಗೆ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ಯನಾಥನ್ ಮೇಲೆ ಈ ದಾಳಿ ನಡೆದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮೂರು ದಿನಗಳ ಹಿಂದೆ ಹೊನ್ನಾವರದಿಂದ ಆಳಸಮುದ್ರದ ಮೀನುಗಾರಿಕೆಗೆಂದು ತೆರಳಿದ್ದ ರಾಜ್ಯದ ಬೋಟ್‌ನಲ್ಲಿದ್ದ ಮೀನುಗಾರರಿಗೆ ಸುಮಾರು 200 ನಾಟಿಕಲ್ ಮೈಲು ದೂರದಲ್ಲಿ ಬೇರೆ ದೇಶದ ಬೋಟ್‌ ಒಂದು ಕಂಡುಬಂದಿದ್ದು, ಮಾಹಿತಿ ತಿಳಿದ ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಕೋಸ್ಟ್‌ ಗಾರ್ಡ್‌ ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಕುಮಟಾ ಪೊಲೀಸರು, ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ನವರಿಗೆ ಮಾಹಿತಿ ನೀಡಿದ್ದರು. ಬೋಟ್ ಕುರಿತಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದಾಗ

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಫೇಸ್ ಬುಕ್‌ ನಲ್ಲಿ ಕಾಣಿಸಿಕೊಂಡ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿಯೋರ್ವರು 18.53 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾರ್ ಎಂಬವರು ಫೇಸ್‌ ಬುಕ್‌ ನಲ್ಲಿ ಸ್ಟಾಕ್ ಟ್ರೇಡಿಂಗ್ ಬಗೆಗಿನ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು ಎಂದೆನ್ನಲಾಗಿದೆ. ಗ್ರೂಪ್‌ ನಲ್ಲಿ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತಿ ದಿನ ಆನ್‌ ಲೈನ್ ವೀಡಿಯೋ ಕ್ಲಾಸ್ ಮೂಲಕ

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top