newskadaba

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಈ ಮೇಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ವೆಬ್ ಸೈಟ್ https://udyoga.skillconnet.kaushalkar.com ಮೂಲಕ ನೋಂದಾವಣಿ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾತಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್‍.ಎಸ್‍.ಎಚ್‍.ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 29ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ತಾಲೂಕು ಹಂತದಲ್ಲಿ ವಿದ್ಯಾರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಆನ್‍ ಲೈನ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡುಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆಯು ಫೆಬ್ರವರಿ 19 ರಿಂದ ಆರಂಭಗೊಂಡಿದ್ದು, ಆನ್‍ಲೈನ್ ತಂತ್ರಾಂಶದ ಮೂಲಕ ಹೊಸ /ನವೀಕರಣ ಉದ್ದಿಮೆ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಬಹುದು. 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಾದ ನಂತರ ಉದ್ದಿಮೆ ಪರವಾನಿಗೆ ತಂತ್ರಾಂಶದಲ್ಲಿ ಉದ್ಯಮಿದಾರರಿಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ. ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ

ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ Read More »

ಕರಾವಳಿ, ಕರ್ನಾಟಕ

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ. 16 ಪಿ 1 ರಲ್ಲಿ 600 ಮನೆಗಳನ್ನು ಜಿ+3 ಮಾದರಿಯಲ್ಲಿ ನಿರ್ಮಿಸಿ ವಿತರಿಸುವ ಯೋಜನೆಗೆ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳಿಂದ ವಂತಿಕೆ ಕ್ರೋಡೀಕರಿಸುವ ಬಗ್ಗೆ ಈಗಾಗಲೇ 600 ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿದ್ದು 390 ಫಲಾನುಭವಿಗಳು ವಂತಿಕೆಯನ್ನು ನೀಡಿದ್ದು ಉಳಿಕೆ 210 ಫಲಾನುಭವಿಗಳು ವಂತಿಕೆ ಪಾವತಿಸಬೇಕಾಗಿರುತ್ತದೆ. ಸದರಿ ಯೋಜನೆಗೆ ರೂ. 40 ಕೋಟಿ

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ Read More »

ಕರಾವಳಿ

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ Read More »

ಕರಾವಳಿ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಕ.ಸಾ.ಪ ಇದರ  ರಾಜ್ಯ ಅಧ್ಯಕ್ಷರಾದ ಶ್ರೀ ನಾಡೋಜ ಡಾ ಮಹೇಶ್ ಜೋಷಿಯವರು  ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ  ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಕನ್ನಡ  ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕಸಾಪ ಇದರ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..!

(ನ್ಯೂಸ್ ಕಡಬ) newskadaba.com ‌ಬೆಂಗಳೂರು, ಫೆ. 22. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುವುದರ ಬಗ್ಗೆ ಸಮೀಕ್ಷೆ ನಡೆಸಲು ಸ್ವಯಂ ಸೇವಕರ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..! Read More »

ಕರ್ನಾಟಕ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಯಾವುದೇ ವ್ಯಕ್ತಿ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು. ವಿಧಾನ ಸಭೆ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌ ಆದೇಶವೇ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ Read More »

ಕರ್ನಾಟಕ

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್
Scroll to Top