newskadaba

ಅಲೆಯ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..!

(ನ್ಯೂಸ್‌ ಕಡಬ) newskadaba.com ಉಡುಪಿ, ಫೆ. 19. ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನವರೆನ್ನಲಾದ ಇಬ್ಬರು ಯುವಕರು ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಯುವಕರಿಬ್ಬರು ನೀರಿನಲ್ಲಿ ಈಜಲು ಮುಂದಾಗಿದ್ದರು. ಹೀಗೆ ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ […]

ಅಲೆಯ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..! Read More »

ಕರಾವಳಿ, ಕರ್ನಾಟಕ

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿನ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆಯಲಿರುವ ಡಿವೈಎಫ್‌ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ನ್ನು ತೆರವುಗೊಳಿಸಬೇಕು ಎಂದು ಕೊಣಾಜೆ ಪೊಲೀಸ್ ಇನ್‌ಸ್ಟೆಕ್ಟರ್ ನೋಟಿಸ್ ನೀಡಿದ್ದಾರೆ. ಕಾರ್ಡ್‌ ಬೋರ್ಡ್‌ನಿಂದ ನಿರ್ಮಿಸಲಾದ 6 ಅಡಿ ಉದ್ದದ ಟಿಪ್ಪು ಸುಲ್ತಾನ್ ಕಟೌಟನ್ನು ಅನುಮತಿಯಿಲ್ಲದೇ ಅಳವಡಿಸಲಾಗಿದ್ದು, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕಟೌಟ್ ತೆರವುಗೊಳಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್ Read More »

ಕರಾವಳಿ, ಕರ್ನಾಟಕ

ಏರ್ಪೋರ್ಟ್ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 45,44,600 ರೂಪಾಯಿ ಮೌಲ್ಯದ 733 ಗ್ರಾಂ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಕುರಿತು ವರದಿಯಾಗಿದೆ. ಇಮಿಗ್ರೇಷನ್ ಆಗಮನದ ಪ್ರದೇಶದಲ್ಲಿನ ವಾಶ್‌ರೂಮ್‌ನ ಡ್ರೈನೇಜ್ ಚೇಂಬರ್‌ನಲ್ಲಿ ಕಪ್ಪು ಬಣ್ಣದ ಚೀಲದೊಳಗೆ ಬಚ್ಚಿಟ್ಟಿದ್ದ ಪೇಸ್ಟ್ ರೂಪದಲ್ಲಿರುವ ಚಿನ್ನ ಕಂಡುಬಂದಿದ್ದು, ವಿಮಾನ ನಿಲ್ದಾಣ ಅಧಿಕಾರಿಗಳ ಗಮನಕ್ಕೆ ಬಂದಿದೆ. ಟಾಯ್ಲೆಟ್ ನಲ್ಲಿ ಚಿನ್ನವಿಟ್ಟ ವ್ಯಕ್ತಿ ಇನ್ನು ಪತ್ತೆಯಾಗಿಲ್ಲ ಎಂದು ತಿಳಿದಿದ್ದು,  ಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಣೆ ಮಾಡಿದ

ಏರ್ಪೋರ್ಟ್ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

40 ಅಡಿ ಎತ್ತರದ ಮರವೇರಿ ಕಾರ್ಮಿಕ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ವಿಟ್ಲ, ಫೆ. 19. 40 ಅಡಿ ಎತ್ತರದ ಮರವೇರಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೂಲಿ ಕಾರ್ಮಿಕನನ್ನು ಜಾರಪ್ಪನಾಯ್ಕ (60) ಎಂದು ಗುರುತಿಸಲಾಗಿದೆ. ಜಾರಪ್ಪನಾಯ್ಕ ಅವರು ಎಂದಿನಂತೆ ಮನೆಯಿಂದ ರಘುರಾಮ ತಂತ್ರಿ ಎಂಬವರ ತೋಟದ ಕೆಲಸಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದರು. ಆದರೆ ಅಲ್ಲಿಗೆ ತಲುಪದೇ ಇದ್ದ ಕಾರಣ, ಜಾರಪ್ಪನಾಯ್ಕರ ಮನೆಯಲ್ಲಿ ವಿಚಾರಿಸಿದಾಗ ಬೆಳಿಗ್ಗೆಯೇ ಹೋಗಿದ್ದಾರೆ ಎಂದು ತಿಳಿಸಿದ್ದರು. ಇದರಿಂದ

40 ಅಡಿ ಎತ್ತರದ ಮರವೇರಿ ಕಾರ್ಮಿಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com ಚಾರ್ಮಾಡಿ, ಫೆ. 19. ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 20 ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಸೋಮವಾರದಂದು ನಡೆದಿದೆ. ನಾಲ್ವರು ಪ್ರವಾಸಿಗರಿದ್ದ ಕಾರು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಹೊರಟಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹೊಳೆಗೆ ಬಿದ್ದಿದೆನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 19. ನಾಲ್ಕು ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್‌ ಶರೀಫ್‌ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳಿಂದ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಆತನನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಬೆಳ್ಳಾರೆ

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಉತ್ತರ ಪ್ರದೇಶ, ಫೆ. 19. ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ತೊಡಗಿದ್ದ ಪೊಲೀಸರ ವಾಹನವನ್ನು ಬಳಸಿ ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.   ಉತ್ತರ ಪ್ರದೇಶದ ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಖಾಲಿ ವಾಃನವನ್ನು ಗಮನಿಸಿ ಮೊಯಿನ್ ಖಾನ್ ಎಂಬಾತ ಪೊಲೀಸ್ ವಾಹನ ಬಳಸಿ ರೀಲ್ಸ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಅಧಿಕಾರಿಗಳು ಸೂಕ್ತ ಕ್ರಮ

ಪೊಲೀಸ್ ವಾಹನದಲ್ಲಿ ಇನ್ಸ್ಟಾಗ್ರಾಂ ರೀಲ್ಸ್- ಯುವಕ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯದ ಮೋಕ್ಷಿತ್ ಬಿ ಇನ್ ಸ್ಪೇರ್ ಅವಾರ್ಡ್ ಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com ಕಡಬ, ಫೆ. 19. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ಬಿ ಎಂಬಾತ ಇನ್‌ಸ್ಪೇರ್ ಅವರ್ಡ್ ಗೆ  ಆಯ್ಕೆಯಾಗಿದ್ದಾನೆ. ಇವನಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಕುಮಾರಿ ಕಾವ್ಯಶ್ರೀ ಡಿ ಮಾರ್ಗದರ್ಶನ ನೀಡಿರುತ್ತಾರೆ. ಈತ ಪಂಜದ ಬೊಳ್ಳಾಜೆ ಸತೀಶ್ ಬಿ ಹಾಗೂ ಕಲಾವತಿ ದಂಪತಿಗಳ ಪುತ್ರ.

ಕಡಬ: ಸರಸ್ವತೀ ವಿದ್ಯಾಲಯದ ಮೋಕ್ಷಿತ್ ಬಿ ಇನ್ ಸ್ಪೇರ್ ಅವಾರ್ಡ್ ಗೆ ಆಯ್ಕೆ Read More »

ಕರಾವಳಿ

ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದವರು, ಸಾಂಸ್ಕೃತಿಕ ನಾಯಕ ಎಂಬ ಬಿರುದನ್ನು ಹೊಂದಿರುವ ಅವರು

ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ
Scroll to Top