newskadaba

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಡಿ. 20. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ನ ಸಹಯೋಗದೊಂದಿಗೆ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರದಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ […]

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19. ನೆರೆರಾಜ್ಯವಾದ ಕೇರಳದಲ್ಲಿ ಕೊರೋನಾ ವೈರಸ್​​ನ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಕಾರ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ತೀವ್ರ

ದೇಶದಲ್ಲಿ ಕೊರೋನಾ ಆತಂಕ – ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಕರ್ನಾಟಕ ಸರಕಾರ Read More »

ಕರಾವಳಿ

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸಿನ ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರದಂದು ದ.ಕ.

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ Read More »

ಕರಾವಳಿ, ಕರ್ನಾಟಕ

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮಂಗಳೂರು, ನ. 25. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 21.50 ಲಕ್ಷ ರೂ. ಪಡೆದು ವಂಚಿಸಿದ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡಿನ ಕಣ್ಣನ್‌ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರು ಅ. 03ರಂದು ಫೇಸ್‌ಬುಕ್‌ ಖಾತೆಗೆ ಬಂದಿದ್ದ ಲಿಂಕ್‌ ತೆರೆದು ನೋಡಿದಾಗ ಅದರಲ್ಲಿದ್ದ ಮಾಹಿತಿಯನ್ನು ನಂಬಿ ಟ್ರೇಡಿಂಗ್‌ ಖಾತೆ ತೆರೆದಿದ್ದರು. ಇದೀಗ ಅವರ ಖಾತೆಯಿಂದ ಮೂರು ಬಾರಿ ಹಣ ವರ್ಗಾಯಿಸಿಕೊಳ್ಳಲಾಗಿದ್ದು, ಆದರೆ ಯಾವುದೇ

ಸೈಬರ್ ಕ್ರೈಂ- ಹೂಡಿಕೆ ಹೆಸರಿನಲ್ಲಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಿಸಬೇಕೆನ್ನುವ ಕಾತರದಿಂದ ಇದ್ದವರಿಗೆ ಗುಡ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 5,280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಸಕ್ತ ಪದವೀಧರರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್‌ 22ರಿಂದ ಡಿಸೆಂಬರ್‌ 12ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಹತೆ- ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್‌ 24) ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌- 7877 ಪುರುಷರು

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 24. ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿರುವಂತಹ, ಭಾರತದ ಎರಡನೇ ಅತೀ ದೊಡ್ಡ ಯುಪಿಐ ಪಾವತಿ ಅಪ್ಲಿಕೇಶನ್ ಆಗಿರುವ ಗೂಗಲ್‌ ಪೇಯು ತನ್ನ ಬಳಕೆದಾರರಿಗೆ ಬಿಗ್‌ ಶಾಕ್‌ ನೀಡಿದೆ. ಈ ಹಿಂದೆ ಮೊಬೈಲ್ ರೀಚಾರ್ಜ್ ಮಾಡಬೇಕಿದ್ದಲ್ಲಿ ಫೋನ್ ಪೇ ಮತ್ತು ಪೇಟಿಎಂ ಅಪ್ಲಿಕೇಶನ್ ಗಳು ಪ್ರತೀ ರೀಚಾರ್ಜ್ ಗೆ 2 ರೂ. ಹೆಚ್ಚುವರಿ ಶುಲ್ಕವನ್ನು ವಿಧಿಸುತ್ತಿತ್ತು. ಆ ಸಮಯದಲ್ಲಿ ಗೂಗಲ್ ಪೇ ತನ್ನ ಗ್ರಾಹಕರನ್ನು ಸೆಳೆದಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಮೊಬೈಲ್ ರೀಚಾರ್ಜ್

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಹೈದರಾಬಾದ್, ನ. 24. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಭವಿಸಿದೆ. ಪ್ರಯಾಣಿಕ ಮೃತಪಟ್ಟ ಹಿನ್ನೆಲೆ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಅಗತ್ಯವಿಲ್ಲದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎಂದು ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್ ರವರು ಹೇಳಿದರು. ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಸುಮಾರು ಒಂದು ವರ್ಷಗಳ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರದಂದು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಮನವಿ ಮಾಡಿದರು. ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ Read More »

ಕರಾವಳಿ, ಕರ್ನಾಟಕ
Scroll to Top