newskadaba

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ […]

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ.

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 01. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಣದುಬ್ಬರದ ಆಘಾತ ಎದುರಾಗಿದ್ದು, ಎಲ್.ಪಿಜಿ ಸಿಲಿಂಡರ್‌ ಬೆಲೆಯು ಇಂದಿನಿಂದ(ಅ. 01) ಹೆಚ್ಚಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಇದರಡಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆ ಕಂಡಿದೆ. 209 ರೂಪಾಯಿಗಳ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ ಆಗಲಿದೆ ಎಂದು ಹೇಳಲಾಗಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ

(ನ್ಯೂಸ್ ಕಡಬ) newskadaba.com ಮಾಣಿ, ಸೆ. 29. ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮದಿನಾಚರಣೆ ಪ್ರಯುಕ್ತ ಮೀಲಾದುನ್ನಬಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಎರಡು ದಿನಗಳ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮತ ಪ್ರಭಾಷಣ, ಬುರ್ದಾ ಮಜ್ಲಿಸ್, ಮೌಲಿದ್ ಮತ್ತು ಆಕರ್ಷಕ ಮೀಲಾದ್ ರ‌್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ ಹನೀಫ್ ಸ‌ಅದಿ ಕುಂತೂರು, ಸದರ್ ಇಬ್ರಾಹಿಂ ರಝಾ ಅಲ್ ಫುರ್ಖಾನಿ ವಿಟ್ಲ, ಅಧ್ಯಾಪಕರಾದ ನವಾಝ್ ಹನೀಫಿ ಅಲ್ ಅಶ್‌ಹರಿ

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ Read More »

ಕರಾವಳಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 29. ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಮತ್ತು ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇವುಗಳ ಜಂಟಿ ಆಶ್ರಯದಲ್ಲಿ ಪ್ರವಾದಿ ಮಹಮ್ಮದ್(ಸ.ಅ) ಪೈಗಂಬರರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು ಮತ್ತು ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು. ಮದರಸ ವಿದ್ಯಾರ್ಥಿಗಳಿಂದ ಪ್ರವಾದಿ ಕುರಿತ ಕೀರ್ತನೆಗಳು, ಆಲಾಪನೆ, ಪ್ಲವರ್ ಶೋ, ದಫ್ ಸ್ಪರ್ದೆ, ಬುರ್ಧಾ ಮಜ್ಲೀಸ್ ಕಾರ್ಯಕ್ರಮವು ಮರ್ ಹೂಮ್ ಡಾ|ಕೆ.ಎಂ. ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ

ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ Read More »

ಕರಾವಳಿ

ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಅದರಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್

ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 26. ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ. ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫ (43) ಎಂದು ಗುರುತಿಸಲಾಗಿದೆ. ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದ ಬಸ್ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕೆಎಸ್ಸಾರ್ಟಿಸಿ ಬಸ್ ಹಾಗೂ ಪಿಕಪ್ ನಡುವೆ ಢಿಕ್ಕಿ – ಪಿಕಪ್ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 26. ಪ್ರತಿ ವರ್ಷ ವಿಶ್ವಸಂಸ್ಥೆಯು ಸೆಪ್ಟೆಂಬರ್ 26 ರಂದು ‘ವಿಶ್ವ ಸಂತಾನ ನಿಯಂತ್ರಣ ಜಾಗ್ರತಿ ದಿನ’ ಎಂದು ಆಚರಿಸಿ ಜನರಲ್ಲಿ ಜನ ಸಂಖ್ಯೆ ನಿಯಂತ್ರಣ, ಮಹಿಳೆಯರ ಆರೋಗ್ಯ ಮತ್ತು ಸಂತಾನ ನಿಯಂತ್ರಣದ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ, ಯುವಜನರಲ್ಲಿ ಆರೋಗ್ಯದ ಜಾಗೃತಿ ಮೂಡಿಸಿ ಅವರ ದೈಹಿಕ ಮತ್ತು ಲೈಂಗಿಕ ಜೀವನದ ಬಗ್ಗೆ ಪರಿಪೂರ್ಣ ಮಾಹಿತಿ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಈ ಆಚರಣೆ ಆರಂಭವಾಗಿ 15 ವರ್ಷ ಕಳೆದರೂ ಜನರಲ್ಲಿ ಸಂತಾನ

ಸೆ. 26: ವಿಶ್ವ ಸಂತಾನ ನಿಯಂತ್ರಣ ಜಾಗೃತಿ ದಿನ – ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top