newskadaba

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು

ಸ್ಕೌಟ್ಸ್-ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ- ಡಾ. ಆನಂದ್ Read More »

ಕರಾವಳಿ

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಕಡಬ ಹಾಗೂ ಸವಣೂರು ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 24ರಂದು ಬೆಳಿಗ್ಗೆ 9 ಗಂಟೆಗೆ  ಸವಣೂರು  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ

ಇಂದು (ಸೆ. 24) ಕಡಬ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.comಸುಳ್ಯ, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ಹಾಗೂ ಪಂಜ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 9 ಗಂಟೆಗೆ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ

ಇಂದು (ಸೆ. 24) ಸುಳ್ಯ ತಾಲೂಕು ದಸರಾ ಕ್ರೀಡಾಕೂಟ Read More »

ಕರಾವಳಿ

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ ಟಾಪ್ ಮತ್ತು ಕ್ರೆಡಿಟ್ ಕಾರ್ಡ್ ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕುರಿತು ಸೆ. 17ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್ ನಿಂದ ಲಗೇಜ್ ನ್ನು

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್‌, ಹಣ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಕ್ಟೋಬರ್‌ ತಿಂಗಳಿನಲ್ಲಿ ಸೌರ ಗ್ರಹಣ ಮತ್ತು ಚಂದ್ರ ಗ್ರಹಣಗಳು ಸಂಭವಿಸಲಿದೆ. ಈ ವರ್ಷದಲ್ಲಿ ಒಟ್ಟು 4 ಗ್ರಹಣವಿದ್ದು ಮೊದಲ ಸೂರ್ಯಗ್ರಹಣ ಏಪ್ರಿಲ್ 20 ರಂದು ಸಂಭವಿಸಿತು, ನಂತರ ಎರಡನೇ ಚಂದ್ರಗ್ರಹಣವು ಮೇ 5 ರಂದು ಸಂಭವಿಸಿತು. ಈಗ ಉಳಿದ ಎರಡು ಗ್ರಹಣಗಳು ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಲಿದೆ. ಬರುವ ಅ. 14 ರಂದು ವೃತ್ತಾಕಾರದ ಸೂರ್ಯಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸುವುದಿಲ್ಲ. ಟೆಕ್ಸಾಸ್, ಮೆಕ್ಸಿಕೊ, ಮಧ್ಯ ಅಮೆರಿಕ, ಕೊಲಂಬಿಯಾ ಹಾಗೂ ಬ್ರೆಜಿಲ್‍ನ ಕೆಲವು

ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ Read More »

ಕರ್ನಾಟಕ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೇವರ ಆಶೀರ್ವಾದ ಇರುವುದರಿಂದ ತಮ್ಮ ಸರಕಾರ ದಿನದ 24 ಗಂಟೆಯೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜ್ವಾಸನ್ ಅಸೆಂಬ್ಲಿ ವಿಭಾಗದ ಮಹಿಪಾಲ್‍ಪುರ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಎಪಿ ಆಡಳಿತವಿರುವ ದೆಹಲಿ ಮತ್ತು ಪಂಜಾಬ್ ಎರಡು ರಾಜ್ಯಗಳು ಮಾತ್ರ ಉಚಿತ ವಿದ್ಯುತ್ ನೀಡುತ್ತಿವೆ ಎಂದು ಹೇಳಿದರು. ಆದರೆ ಇತರ ರಾಜ್ಯಗಳಲ್ಲಿ ಜನರು ಹೆಚ್ಚಿನ ಬಿಲ್ ಪಾವತಿಸುತ್ತಿದ್ದಾರೆ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್ Read More »

ರಾಷ್ಟ್ರೀಯ ನ್ಯೂಸ್

ಕನ್ನಡ ಬಿಗ್ ಬಾಸ್ ಸೀಸನ್- 10 ಪ್ರಸಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್..! – ಯಾವಾಗ ಅಂತೀರಾ…? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ದೇಶದಲ್ಲಿ ಯಶಸ್ಸನ್ನು ಸಾಧಿಸಿದ ಬಿಗ್ ಬಾಸ್ ರಿಯಾಲಿಟಿ ಶೋ ಬಹುಬಾಷೆಯಲ್ಲಿಯೂ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಕನ್ನಡದ ಕಿರುತೆರೆ ಪ್ರೇಕ್ಷಕರು ಕಳೆದ 9 ಸೀಸನ್‌ಗಳಿಗೂ ಉತ್ತಮ ಪ್ರತಿಕ್ರಿಯೆ ನೀಡಿದ್ದರು. ಇದೇ ಭರವಸೆಯೊಂದಿಗೆ ಮತ್ತೊಂದು ಸೀಸನ್‌ ಪ್ರಾರಂಭವಾಗುತ್ತಿದ್ದು, ಅಕ್ಟೋಬರ್ 8 ರಿಂದ ಭರ್ಜರಿಯಾಗಿ “ಬಿಗ್ ಬಾಸ್ ಕನ್ನಡ ಸೀಸನ್ 10” ಆಂಭವಾಗಲಿದೆ. ಸದ್ಯಕ್ಕೆ ಸೀಸನ್ 10ರ ಪ್ರೋಮೊ ಪ್ರಸಾರವಾಗುತ್ತಿದ್ದು, ರಿಯಾಲಿಟಿ ಶೋ ಆರಂಭವಾಗುವ ದಿನವನ್ನು ರಿವೀಲ್‌ ಮಾಡಲಾಗಿದೆ. ಇನ್ನು ಎಂದಿನಂತೆ

ಕನ್ನಡ ಬಿಗ್ ಬಾಸ್ ಸೀಸನ್- 10 ಪ್ರಸಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್..! – ಯಾವಾಗ ಅಂತೀರಾ…? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ Read More »

ಕರ್ನಾಟಕ
Scroll to Top