newskadaba

ಸಿಲಿಂಡರ್ ಸ್ಫೋಟ- 8 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 8 ಮನೆಗಳು ಹಾನಿಯಾಗಿರುವ ಘಟನೆ ಚಾಮರಾಜಪೇಟೆಯ ಅನಂತಪುರದ ಬಳಿ ನಡೆದಿದೆ. ಸಿಲಿಂಡರ್‌ ಸ್ಫೋಟದ ತೀವ್ರತೆಗೆ 8 ಶೀಟ್ ಮನೆಗಳು ಹಾನಿಗೊಳಗಾಗಿದ್ದು, ಈ ವೇಳೆ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟ- 8 ಮನೆಗಳಿಗೆ ಹಾನಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ. 20ರ ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರ ಬುಧವಾರ ಬೆಳಿಗ್ಗೆ 8.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9 ಗಂಟೆಗೆ ಸರ್ಕ್ಯೂಟ್ ಹೌಸ್ ಗೆ ತೆರಳುವರು. 9.30ಕ್ಕೆ  ನಗರದ ದಿ ಓಶಿಯನ್ ಪರ್ಲ್ ಹೋಟೆಲ್‍ನಲ್ಲಿ ಮಂಗಳೂರು ಟ್ರೇಯತ್ಲಾನ್ ಕಾರ್ಯಕ್ರಮದ ಪೂರ್ವಭಾವಿ ಚರ್ಚೆ

ಸೆ. 20ರಂದು ಉಸ್ತುವಾರಿ ಸಚಿವರ ಪ್ರವಾಸ ಜಿಲ್ಲಾ ಪ್ರವಾಸ Read More »

ಕರಾವಳಿ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ಸೆ. 20ರ ಬುಧವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಪಿವಿಎಸ್ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ತಾಲೂಕಿನ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ವಿದ್ಯುತ್ ತಂತಿ ಸ್ಪರ್ಶ- 10ರ ಬಾಲಕನ ದುರಂತ ಅಂತ್ಯ..!

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 18. ಆಟವಾಡುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕನೋರ್ವ ಮೃತಪಟ್ಟ ಘಟನೆ ಕುಣಿಗಲ್ ಪಟ್ಟಣದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಋತ್ವಿಕ್‌ (10) ಎಂದು ಗುರುತಿಸಲಾಗಿದೆ.ರವಿವಾರದಂದು ಮನೆ ಸಮೀಪದ ನಿವೇಶನ ಒಂದರಲ್ಲಿ ಆಟವಾಡುತ್ತಿದ್ದ ಋತ್ವಿಕ್ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ಮೆಟ್ಟಿದ್ದ. ಆಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿದ್ಯುತ್ ತಂತಿ ಸ್ಪರ್ಶ- 10ರ ಬಾಲಕನ ದುರಂತ ಅಂತ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಸೆ. 18. ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ಗೈಬುಸಾಬ್ ಮುಲ್ಲಾ (34) ಎಂದು ಗುರುತಿಸಲಾಗಿದೆ. ಮುಸ್ತಾಕ್ ಜಂಗಿ  (20) ಕೊಲೆ ಆರೋಪಿ. ಕೃತ್ಯ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಸ್ ನಿಲ್ದಾಣದ ಬಳಿ ಎಗ್‌ರೈಸ್‌ ಅಂಗಡಿ ಇಟ್ಟುಕೊಂಡಿದ್ದ ಗೈಬುಸಾಬ್

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಆಕ್ಷನ್ ಪ್ರಿನ್ಸ್ ಎಂದು ಖ್ಯಾತರಾಗಿರುವ ನಟ ಧ್ರುವ ಸರ್ಜಾರ ಪತ್ನಿ ಪ್ರೇರಣಾ ಗಂಡು ಮಗುವಿಗೆ ಗೌರಿ ಗಣೇಶ ಹಬ್ಬದ ಶುಭದಿನದಂದೇ ಬೆಂಗಳೂರಿನ ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ಪ್ರೇರಣಾ ಅವರ ಸೀಮಂತ ಕಾರ್ಯಕ್ರಮವನ್ನು ಧ್ರುವ ಸರ್ಜಾ, ಅಣ್ಣ ಚಿರು ಸರ್ಜಾ ಸಮಾಧಿಯಿರುವ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ನೆರವೇರಿಸಿದ್ದರು. ಧ್ರುವ ಸರ್ಜಾ ಹಾಗೂ ಪ್ರೇರಣಾ 2019ರಲ್ಲಿ ಮದುವೆ ಆಗಿದ್ದು,

ಹಬ್ಬದ ದಿನದಂದೇ ಜೂನಿಯರ್ ಪ್ರಿನ್ಸ್ ನ ಬರಮಾಡಿಕೊಂಡ ಧ್ರುವ ಸರ್ಜಾ ದಂಪತಿ..! Read More »

ಕರ್ನಾಟಕ, ಸಿನಿಮಾ

ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಸೆ. 18. ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು, ಪ್ರಯಾಣಿಕರಿಂದ ಇ-ಸಿಗರೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಲೇಶಿಯಾದ ಕೌಲಾಂಪುರದಿಂದ ಎಂಎಚ್ 192ನ ಮಲೇಶಿಯಾ ಏರ್​ಲೈನ್ಸ್​ನಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 15.9 ಲಕ್ಷ ರೂ. ಮೌಲ್ಯದ 1,590 ಸಿಗರೇಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹೆಚ್ಚಿನ ತನಿಖೆ

ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 18. ಆರ್ಮಿ ಕ್ಯಾಂಪಿಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ಸಾವಿರಾರು ರೂಪಾಯಿ ವಂಚನೆ ಎಸಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ತೆಳ್ಳಾರು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಯದರ್ಶಿನಿ ಗ್ಯಾಸ್ ಏಜೆನ್ಸಿ ಮಾಲಕ ಕೃಷ್ಣಮೂರ್ತಿ ಎಂಬವರಿಗೆ ಸೆ. 9ರಂದು ಅಪರಿಚಿತನೋರ್ವ ಕರೆ ಮಾಡಿ, ನಾನು ಇಂಡಿಯರ್ ಆರ್ಮಿಯ ಆಫೀಸರ್. ನಾವು ಕಾರ್ಕಳದ ಶಾಲೆಯೊಂದರಲ್ಲಿ ಆರ್ಮಿ ಕ್ಯಾಂಪ್ ಮಾಡಿದ್ದು ಈ ಕ್ಯಾಂಪ್‌ಗೆ 4 ಗ್ಯಾಸ್

ಆರ್ಮಿ ಆಫೀಸರ್ ಹೆಸರಿನಲ್ಲಿ ಗ್ಯಾಸ್ ಏಜೆನ್ಸಿಗೆ ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಭಾರತೀಯ ಸೇನೆಯಲ್ಲಿ ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಇಂದಿನಿಂದ (ಸೆ.18) ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 8ರಂದು ಕೊನೆಯ ದಿನವಾಗಿದೆ. ಅರ್ಜಿಯನ್ನು ಅಧಿಕೃತ ವೆಬ್ಸೈಟ್ www.hqscrecruitment.in ನಲ್ಲಿ ಅರ್ಜಿ ಸಲ್ಲಿಸಬೇಕು. ಸೇನೆಯ ಸದರ್ನ್ ಕಮಾಂಡ್ ಪ್ರಧಾನ ಕಚೇರಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, 13 ಎಂಟಿಎಸ್ (ಮೆಸೆಂಜರ್), 3 ಎಂಟಿಎಸ್ (ಕಚೇರಿ), 2 ಕುಕ್ ಹುದ್ದೆಗಳು, 2 ಬಟ್ಟೆ ಒಗೆಯುವವರು, 3 ಕಾರ್ಮಿಕರು ಮತ್ತು 1 ತೋಟಗಾರ ಹುದ್ದೆಗಳು

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಎಂದು ಗುರುತಿಸಲಾಗಿದೆ. ಸೆ. 16ರಂದು ದಾಖಲಾಗಿದ್ದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು

ಸುಳ್ಯ: ಬೈಕ್ ಕಳ್ಳತನ- ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top