newskadaba

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚಿಸಿದೆ.   ಕೊರೋ‌ನಾ ಸಾಂಕ್ರಾಮಿಕ ರೋಗದಿಂದ ನಿಗಮದ ಸಾರಿಗೆ ಆದಾಯ ಕುಂಠಿತವಾಗಿದ್ದ ಹಿನ್ನೆಲೆ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ್ದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು. ನಂತರ ಜನಸಂದಣಿ ಹೆಚ್ಚಿರುವ ಸಂದರ್ಭದಲ್ಲಿ ವಾಹನಗಳ ಕಾರ್ಯಾಚರಣೆಗೆ […]

ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ Read More »

ಕರ್ನಾಟಕ

ಏನೇ ಆದರೂ RSS ಕಛೇರಿ ತೆರೆಯಲು ಬಿಡುವುದಿಲ್ಲ- ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 18. ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದ ನಾನಾ ಶಿಕ್ಷಣ ಸಂಸ್ಥೆಗಳು ಹಾಗೂ ಪೊಲೀಸ್‌ ಠಾಣೆಗಳಲ್ಲಿ ಆರ್‌ಎಸ್‌ಎಸ್‌ ಶಾಖೆಗಳು ನಡೆಯುತ್ತಿವೆ. ಇನ್ನು ಮುಂದೆ ಅವುಗಳನ್ನು ಬಂದ್‌ ಮಾಡಿಸಲಾಗುವುದು ಎಂದು ಆರ್‌ಡಿಪಿಆರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಖಡಕ್‌ ಎಚ್ಚರಿಕೆ ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಶಿಕ್ಷಣ ಸಂಸ್ಥೆಗಳು ಹಾಗೂ ಪೊಲೀಸ್‌ ಠಾಣೆಯಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದು ಕಂಡು ಬಂದಿದೆ. ಇನ್ನು ಮುಂದೆ ಅವೆಲ್ಲವೂ ಬಂದ್‌

ಏನೇ ಆದರೂ RSS ಕಛೇರಿ ತೆರೆಯಲು ಬಿಡುವುದಿಲ್ಲ- ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ನಾಲ್ಕರಲ್ಲಿ ನಡೆದಿದೆ. ಸ್ವಿಫ್ಟ್ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೀಕರ ರಸ್ತೆ ಅಪಘಾತ – ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಇಲ್ಲಿನ ಮಲ್ಲಮಾರ್‌ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರದಂದು ಸಂಜೆ ನಡೆದಿದೆ. ಸಮುದ್ರಪಾಲಾದ ವ್ಯಕ್ತಿಯನ್ನು ಬಾಗಲಕೋಟೆ ನಿವಾಸಿ ಮಹಂತೇಶ್‌(29) ಎಂದು ಗುರುತಿಸಲಾಗಿದೆ. ಈತ ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದ ಎನ್ನಲಾಗಿದೆ. ಮಹಂತೇಶ್‌ ನನ್ನು ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಕುರಿತು

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 18. ವಿದೇಶದಲ್ಲಿರುವ ಪತಿಯೋರ್ವ ಸುಳ್ಯದಲ್ಲಿರುವ ತನ್ನ ಪತ್ನಿಗೆ ವಾಟ್ಸಪ್‌ ಸಂದೇಶದ ಮೂಲಕ ತ್ರಿವಳಿ ತಲಾಖ್‌ ನೀಡಿರುವ ಘಟನೆ ವರದಿಯಾಗಿದೆ. ಈ ಬಗ್ಗೆ ಮಹಿಳೆ ಪತಿ ವಿರುದ್ದ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇರಳ ತ್ರಿಶೂರ್‌ ಮೂಲದ ಅಬ್ದುಲ್‌ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಆಕೆಯನ್ನು ಚೆನ್ನಾಗಿ ನೋಡಿಕೊಂಡಿದ್ದು, ಅವರಿಗೆ ಇಬ್ಬರು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು

ಸುಳ್ಯ: ವಿದೇಶದಲ್ಲಿರುವ ಪತಿಯಿಂದ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ಸಂದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 18. ಹಣವಾಗಿಟ್ಟು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಸ್ಥಳದಿಂದ ಎಂಟು ಮಂದಿಯ ಸಹಿತ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು SBI ಅಧಿಸೂಚನೆಯನ್ನು ಹೊರಡಿಸಿದೆ. ಈ ಪೈಕಿ 442 ಮ್ಯಾನೇಜರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು BTech/BE ಅಥವಾ MCA ವಿದ್ಯಾಭ್ಯಾಸ ಹೊಂದಿರಬೇಕು. ಅರ್ಜಿ ಶುಲ್ಕ 7750. SC, ST, PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಂಪೂರ್ಣ ವಿವರಗಳಿಗಾಗಿ https://sbi.co.in/ ನ್ನು ಕ್ಲಿಕ್ ಮಾಡಿ.

SBI ನಲ್ಲಿ 442 ಹುದ್ದೆಗಳು – ಕೂಡಲೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಜಪೆ, ಸೆ. 18. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ(37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ನೀವು ತೂಕ ಇಳಿಸಿಕೊಳ್ಳಲು ಚಿಂತಿಸುತ್ತಿದ್ದೀರಾ..? – ಹಾಗಾದರೆ ಅನ್ನ’ದಿಂದ ದೂರವಿರಿ

(ನ್ಯೂಸ್ ಕಡಬ) newskadaba.com ಸೆ. 17. ರಾತ್ರಿಯಲ್ಲಿ ಅನ್ನ ತಿನ್ನುವುದರಿಂದ ತೂಕ ಹೆಚ್ಚುತ್ತದೆ ಎಂಬುದು ಕೆಲವರ ಅಭಿಪ್ರಾಯ. ಆದರೆ, ಭಾರತೀಯ ಸಂಸ್ಕೃತಿಯ ಪಾಕಪದ್ಧತಿಯಲ್ಲಿ ಅಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ನಾವಿರುವ ಪ್ರಸ್ತುತ ಕಾಲಘಟ್ಟದಲ್ಲಿ ಅನ್ನ ತಿನ್ನುವುದು ಎಷ್ಟು ಸರಿ, ಎಷ್ಟು ತಪ್ಪು ಎನ್ನುವುದನ್ನು ತಿಳಿದುಕೊಳ್ಳುವುದು ಉತ್ತಮ. ಹಾಗಾದರೆ ರಾತ್ರಿ ಅನ್ನವನ್ನು ತಿನ್ನುವುದರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳೇನು ಎಂಬುದನ್ನು ತಿಳಿದುಕೊಳ್ಳೋಣ. ರಾತ್ರಿ ಅನ್ನ ತಿನ್ನುವುದರಿಂದ ಪ್ರಯೋಜನಗಳು:- ರಾತ್ರಿಯಲ್ಲಿ ಅನ್ನ ಸೇವಿಸುವುದರಿಂದ, ಜೀರ್ಣಕ್ರಿಯೆ ಆರೋಗ್ಯಕರವಾಗುವುದು ಮಾತ್ರವಲ್ಲದೇ, ಹೊಟ್ಟೆಗೆ

ನೀವು ತೂಕ ಇಳಿಸಿಕೊಳ್ಳಲು ಚಿಂತಿಸುತ್ತಿದ್ದೀರಾ..? – ಹಾಗಾದರೆ ಅನ್ನ’ದಿಂದ ದೂರವಿರಿ Read More »

ಆರೋಗ್ಯ ಮಾಹಿತಿ
Scroll to Top