newskadaba

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಯೋಧನನ್ನು ರಕ್ಷಣೆ ಮಾಡಿದ 6 ವರ್ಷದ ಸೇನಾ ಶ್ವಾನ ಕೆಂಟ್, ಉಗ್ರರ ಗುಂಡೇಟಿಗೆ ಸಾವನ್ನಪ್ಪಿದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಬುಧವಾರದಂದು ನಡೆದಿದೆ. ರಜೌರಿಯ ನರ್ಲಾ ಗ್ರಾಮದಲ್ಲಿ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ವೇಳೆ ಸೇನಾ ತುಕ್ಕಡಿಯೊಂದನ್ನು ಮುನ್ನಡೆಸುತ್ತಿದ್ದ ಕೆಂಟ್​, ಉಗ್ರರ ಗುಂಡೇಟಿಗೆ ಬಲಿಯಾಗಿದೆ ಎನ್ನಲಾಗಿದೆ. ಕೆಂಟ್​ ಎಂಬ ಲ್ಯಾಬ್ರಡಾರ್ ತಳಿಯ ಹೆಣ್ಣು ನಾಯಿಯೊಂದು 21ನೇ ಸೇನಾ ಶ್ವಾನ ಘಟಕದಲ್ಲಿ ಸೇವೆ […]

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಡೆದುಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್‌ ಸವಾಜ್‌ ಆಲಿಯಾಸ್‌ ಚವ್ವಾ(30) ಎಂದು ಗುರುತಿಸಲಾಗಿದೆ. ಆರೋಪಿ ಸವಾದ್ ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿ

ನಿಷೇಧಿತ ಎಂಡಿಎಂಎ ಮಾರಾಟ – ಮಾದಕ ವಸ್ತು ಸಹಿತ ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 13. ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುವಾಯಿ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಶಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಜೈಪುರ, ಸೆ. 13. ದ್ವೇಷಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಅಕ್ಟೋಬರ್ 5 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಯೋಗಗುರು ರಾಮ್ ದೇವ್ ಗೆ ರಾಜಸ್ಥಾನ ಹೈಕೋರ್ಟ್ ಸೂಚನೆ ನೀಡಿದೆ. ಇದರ ಜೊತೆಗೆ ಅವರ ಬಂಧನಕ್ಕೆ ಏಪ್ರಿಲ್ 13ರಂದು ವಿಧಿಸಿದ್ದ ತಡೆಯಾಜ್ಞೆಯನ್ನು ಅಕ್ಟೋಬರ್ 16ರವರೆಗೆ ವಿಸ್ತರಿಸಿದೆ ಎನ್ನಲಾಗಿದೆ. ತನಿಖಾಧಿಕಾರಿಗಳು ರಾಮ್ ದೇವ್ ಅವರನ್ನು ವಿಚಾರಣೆಗಾಗಿ ಕರೆದಾಗಲೆಲ್ಲ ಅವರು ಹಾಜರಾಗಬೇಕು ಎಂದು ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರಿದ್ದ ನ್ಯಾಯಪೀಠವು ಸೂಚನೆ ನೀಡಿದೆ. ಮುಂದಿನ ವಿಚಾರಣೆ

ದ್ವೇಷಭಾಷಣ ಪ್ರಕರಣ – ತನಿಖೆಗೆ ಹಾಜರಾಗಲು ಬಾಬಾ ರಾಮ್ ದೇವ್ ಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಸೆ.11. ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳದವರನ್ನು ನಿಸಾರ್ ಎಂದು ಗುರುತಿಸಲಾಗಿದೆ. ನಿಸಾರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದು, ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ

ಯುವಕನೋರ್ವನಿಗೆ ಅಪರಿಚಿತ ತಂಡದಿಂದ ಹಲ್ಲೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 07. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಈವರೆಗೆ 44.52 ಲಕ್ಷ ಫಲಾನುಭವಿಗಳ ಖಾತೆಗೆ ಮಾತ್ರ 2,000 ರೂ.ಹಣ ಜಮಾ ಆಗಿದ್ದು, 69.05 ಲಕ್ಷ ಫಲಾನುಭವಿಗಳ ಖಾತೆಗೆ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ Read More »

ಕರ್ನಾಟಕ

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 30. ಹಾವಿನ ದ್ವೇಷ ಹನ್ನೆರಡು ವರುಷ ಅನ್ನೋ ಮಾತು. ಅದರ ಪ್ರಕಾರ ನಾಗರಹಾವು ತನ್ನ ಸೇಡು ತೀರೋವರೆಗೂ ಬಿಡೋದಿಲ್ಲ ಅಂತಾರೆ. ಇದೇ ರೀತಿಯ ಘಟನೆಯೊಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಹಲಕರ್ಟಿ ಗ್ರಾಮದ ವಿಜಯ್‌ ಕುಮಾರ್ ಹಾಗೂ ಉಷಾ ದಂಪತಿಯ ಪುತ್ರ 15 ವರ್ಷದ ಪ್ರಜ್ವಲ್‌ 9ನೇ ತರಗತಿಯಲ್ಲಿ ಓದುತ್ತಿದ್ದು, ಈತನಿಗೆ 2 ತಿಂಗಳ ಅವಧಿಯಲ್ಲಿ 9 ಬಾರಿ ನಾಗರಹಾವು ಕಚ್ಚಿದೆ. ಹಾವಿನ ಕಾಟದಿಂದ ಬೇಸತ್ತಿರುವ

15ರ ಬಾಲಕನಿಗೆ ಸರ್ಪಕಾಟ – ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಆ. 30. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಹಮ್ಮದ್‌ ಕುಂಜ್ಞಾ (78) ಎಂದು ಗುರುತಿಸಲಾಗಿದೆ. ಅಸ್ತಮಾ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೊಸಾಡು ಗ್ರಾಮದ ಮೊವಾಡಿ ಗಾಣದಮಕ್ಕಿಯಲ್ಲಿರುವ ಬಂಧುಗಳ ಮನೆಗೆ ಬಂದಿದ್ದರು. ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಆಸ್ತಿ ವಿಚಾರವಾಗಿ ಸಹೋದರನೋರ್ವ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ಎಂದು ಗುರುತಿಸಲಾಗಿದೆ. ಆರೋಪಿ ಸಹೋದರ ಹನುಮಂತೇಗೌಡ ಎಂಬಾತ ಕೊಲೆ ಕೃತ್ಯವೆಸಗಿದ್ದಾನೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಶಿವಲಿಂಗೇಗೌಡ ಮತ್ತು ಭಾರತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನುಮಂತೇಗೌಡ, ಅಣ್ಣ ಅತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top