newskadaba

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಆ. 27ರಂದು ನಗರದ ಬಾವುಟಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇತ್ತೀಚಿಗೆ ಸೈನ್ಯದಿಂದ ಸೇವಾ ನಿವೃತ್ತಿ ಪಡೆದವರು ಹಾಗೂ ಇದುವರೆಗೆ ಸದಸ್ಯತ್ವವನ್ನು ಪಡೆಯದ ಇತರೆ ಮಾಜಿ ಸೈನಿಕರು ಈ ಸಂದರ್ಭದಲ್ಲಿ ಸದಸ್ಯತ್ವ ಪಡೆಯಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್: 9739875269, 9844611608 ಸಂಪರ್ಕಿಸುವಂತೆ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 27ರಂದು ಜಿಲ್ಲಾ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ. 24. ಆಲಂಕಾರು ಗ್ರಾಮದ ನೆಕ್ಕರೆ ಅಂಗನವಾಡಿ ಕೇಂದ್ರದಲ್ಲಿ 9 ವರ್ಷ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿ ಇದೀಗ ಕಡಬ ಪಿಜಕ್ಕಳ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆಯಾಗಿರುವ ಶ್ರೀಮತಿ ನಯನಾಕ್ಷಿ ಅವರನ್ನು ನೆಕ್ಕರೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪಿನ ಸದಸ್ಯರ ಸಹಯೋಗದಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅನಿತಾ ಇವರು ವಹಿಸಿದ್ದರು ಮತ್ತು ಅಲಂಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ

ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ Read More »

ಕರಾವಳಿ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 24. ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಮತ್ತು ಸ್ನೇಹಿತರ ಕಲಾ ಸಂಘ(ರಿ.) ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 1837ರಲ್ಲಿ ನಡೆದ ಅಮರ ಸುಳ್ಯದ ರೈತಾಪಿ ಜನರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಅಮರ ಕ್ರಾಂತಿಯ ನೆನಪು ಕಾರ್ಯಕ್ರಮವು ಬುಧವಾರದಂದು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆ ಬೆಳ್ಳಾರೆಯಲ್ಲಿ ನಡೆಯಿತು. ಐತಿಹಾಸಿಕ ಸ್ಥಳ ಮತ್ತು ಮುಂದಿನ ಯೋಜನೆ ಬಗ್ಗೆ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ

ಬೆಳ್ಳಾರೆ: ಐತಿಹಾಸಿಕ ಬಂಗ್ಲೆಗುಡ್ಡೆಯಲ್ಲಿ ಬುಶ್ರಾ ವಿದ್ಯಾಸಂಸ್ಥೆ ಕಾವು ಹಾಗೂ ಸ್ನೇಹಿತರ ಕಲಾ ಸಂಘದ ವತಿಯಿಂದ ಅಮರಕ್ರಾಂತಿಯ ನೆನಪು ಕಾರ್ಯಕ್ರಮ Read More »

ಕರಾವಳಿ

2023 ರ ಏಷ್ಯಾಕಪ್‌- ತಂಡದ ಲಿಸ್ಟ್ ಪ್ರಕಟಿಸಿದ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23.  2023ರ ಏಷ್ಯಾಕಪ್‌ ಟೂರ್ನಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ರೋಹಿತ್‌ ಶರ್ಮಾ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಟೀಮ್‌ ಇಂಡಿಯಾ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿಧ್‌ ಕೃಷ್ಣ ರಿಸರ್ವ್‌ ಆಟಗಾರ:

2023 ರ ಏಷ್ಯಾಕಪ್‌- ತಂಡದ ಲಿಸ್ಟ್ ಪ್ರಕಟಿಸಿದ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೆಸ್ ವಿಶ್ವಕಪ್ ಫೈನಲ್ – 2ನೇ ಗೇಮ್ ಡ್ರಾ; ನಾಳೆ ಟೈಬ್ರೇಕರ್ ಪಂದ್ಯ

(ನ್ಯೂಸ್ ಕಡಬ) newskadaba.com ಬಾಕು, ಆ. 23. ಆರ್​. ಪ್ರಜ್ಞಾನಂದ  ಹಾಗೂ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವೆ ಅಝರ್ ​ಬೈಜಾನ್​ನಲ್ಲಿ ನಡೆದ ಚೆಸ್ ವಿಶ್ವಕಪ್​ ಫೈನಲ್​ನ 2ನೇ ಗೇಮ್ ಕೂಡಾ ಡ್ರಾ’ನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯದ ಮೊದಲ ಗೇಮ್​ ಕೂಡ ಡ್ರಾ ಆಗಿತ್ತು. ಇದೀಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಗೇಮ್ ಕೂಡಾ ಸಮಬಲದೊಂದಿಗೆ ಅಂತ್ಯವಾಗಿದ್ದು, ಹೀಗಾಗಿ ಮುಂದೆ ನಡೆಯಲಿರುವ ಟೈ ಬ್ರೇಕರ್ ಪಂದ್ಯದ​ ಮೂಲಕ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಬುಧವಾರ ನಡೆದ 2ನೇ ಗೇಮ್​ನಲ್ಲಿ ಕಪ್ಪು ಕಾಯಿಗಳೊಂದಿಗೆ ಚದುರಂಗ

ಚೆಸ್ ವಿಶ್ವಕಪ್ ಫೈನಲ್ – 2ನೇ ಗೇಮ್ ಡ್ರಾ; ನಾಳೆ ಟೈಬ್ರೇಕರ್ ಪಂದ್ಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸರು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಆರೋಪಿ ತಾನು ಕಳವು ಮಾಡಿದ್ದ ಸ್ಕೂಟರ್ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದನು. ಈ ಸಂದರ್ಭ ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬ್ರೆಝಿಲ್, ಆ. 23. ಬಾಲಕಿಯೊಬ್ಬಳು ಚಲಿಸುತ್ತಿದ್ದ ಶಾಲಾ ಬಸ್ ನ ಕಿಟಕಿಯ ಮೂಲಕ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ತಲೆ ಕಂಬಕ್ಕೆ ತಗುಲಿ ಬಾಲಕಿ ಮೃತಪಟ್ಟ ಘಟನೆ ಬ್ರೆಝಿಲ್ ನಲ್ಲಿ ನಡೆದಿದೆ. ಆಗಸ್ಟ್ 16ರಂದು ಈ ಘಟನೆ ನಡೆದಿದೆ. ಬಾಲಕಿಯು ಬಸ್‌ ನ ಕಿಟಕಿಯಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಅದೇ ಸಮಯದಲ್ಲಿ ಬಸ್ ಹೊರಟಿದೆ. ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಸಂದರ್ಭ ಡ್ರೈವರ್ ಬಸ್ ನ್ನು ಸ್ವಲ್ಪ ಎಡಬದಿಗೆ ತೆಗೆದುಕೊಂಡಿದ್ದಾರೆ.

ಶಾಲಾ ಬಸ್ ನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿನಿ – ತಲೆ ಕಂಬಕ್ಕೆ ಬಡಿದು ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಚಂದ್ರಯಾನ ಕುರಿತು ಭಾರತೀಯರಲ್ಲಿ ಕುತೂಹಲ ಹೆಚ್ಚಿಸಿದ್ದು, ದೇವಾಲಯ ಮಸೀದಿ ಹಾಗೂ ಚರ್ಚ್ ಗಳಲ್ಲಿ ಈ ಚಂದ್ರಯಾನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ನಡೆಯುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು 15ನೇ ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ಮೋದಿ ವರ್ಚುವಲ್ ಆಗಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಬುಧವಾರ ಸಂಜೆ ಇಳಿಯಲಿರುವ ಚಂದ್ರಯಾನ-3 ನೌಕೆಯನ್ನು

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದ 6 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಜ್ಪೆ ಇನ್‌ಸ್ಪೆಕ್ಟರ್ ನಿರಂಜನ್ ಕುಮಾರ್ ಸಕಲೇಶಪುರ ಗ್ರಾಮಾಂತರ ವೃತ್ತಕ್ಕೆ , ಐಎಸ್‌ಡಿಯಲ್ಲಿದ್ದ ಸಂದೇಶ್ ಮೂಡುಬಿದಿರೆ ಠಾಣೆಗೆ, ಡಿಸಿಆ‌ರ್‌ಇ ನಲ್ಲಿದ್ದ ಅಜ್ಮತ್ ಅಲಿಗೆ ಬಜ್ಪೆ ಠಾಣೆಗೆ, ಸಿಟಿ ಎಸ್‌ಬಿಯಲ್ಲಿದ್ದ ಮುಹಮ್ಮದ್ ಶರೀಫ್‌ ಮಂಗಳೂರು ಸಂಚಾರ ಉತ್ತರ, ಪಣಂಬೂರಿನ ಸೋಮಶೇಖರ್ ಕದ್ರಿ ಠಾಣೆಗೆ ಹಾಗೂ ಕದ್ರಿಯ ಅನಂತ ಪದ್ಮನಾಭರನ್ನು ಕರ್ನಾಟಕ

ದಕ್ಷಿಣ ಕನ್ನಡದ 6 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ Read More »

ಕರಾವಳಿ

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುವ ಬಿಜೆಪಿ ಪಕ್ಷದ ನಾಯಕರನ್ನು ತಡೆಯದಂತೆ ಬಿಜೆಪಿ ಕರ್ನಾಟಕ ಘಟಕಕ್ಕೆ ಸೂಚನೆ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಆಪರೇಷನ್‌ ಹಸ್ತದ ಮೂಲಕ ಬಿಜೆಪಿಯ 10ರಿಂದ 15 ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರು. ಮಾಜಿ ಸಚಿವರೂ ಹಾಗೂ ಬಿಜೆಪಿ ಶಾಸಕರು ಆದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ ಎಂದು ಮೂಲಗಳು

ಕಾಂಗ್ರೆಸ್ ಸೇರಲಿರುವ ನಾಯಕರನ್ನು ತಡೆಯದಂತೆ ಬಿಜೆಪಿ ಸೂಚನೆ Read More »

ಕರ್ನಾಟಕ
Scroll to Top