newskadaba

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ […]

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚಿಸಲೆತ್ನಿಸುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಯನ್ನು ಉರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಬೆನೆಡಿಕ್ಟ್ ಸಾಬೂ (25) ಎಂದು ಗುರುತಿಸಲಾಗಿದೆ. ಈತನಿಂದ ಕೇರಳದ ‘ರಾ’ ಅಧಿಕಾರಿ ಮತ್ತು ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಎಂಬ 380 ಐಡಿ ಕಾರ್ಡ್ ಗಳನ್ನು ಹಾಗೂ ಒಂದು ಜೊತೆ ಪಿಎಸ್ಸೈ ಪೊಲೀಸ್ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ ಟಾಪ್

ಪೊಲೀಸ್ ಅಧಿಕಾರಿಯೆಂದು ನಂಬಿಸಿ ವಂಚನೆಗೆ ಯತ್ನ – ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 21. ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನೀಲೇಶ್ವರದ ತೈಕಡಪ್ಪುರ ಎಂಬಲ್ಲಿ ರವಿವಾರದಂದು ಸಂಜೆ ನಡೆದಿದೆ. ಮೃತಪಟ್ಟ ನೌಕರರನ್ನು ರಾಜೇಶ್ ಮತ್ತು ಸನೀಶ್ ಎಂದು ಗುರುತಿಸಲಾಗಿದೆ. ಮೀನು ಹಿಡಿಯುತ್ತಿದ್ದ ಸಂದರ್ಭ ರಾಜೇಶ್ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದು, ಉಳಿದವರು ಬೊಬ್ಬೆ ಹಾಕಿದಾಗ ಅಲ್ಲೇ ಇದ್ದ ಸನೀಶ್ ಸಮುದ್ರಕ್ಕೆ ಹಾರಿ ರಾಜೇಶ್ ನನ್ನು ರಕ್ಷಿಸಲೆತ್ನಿಸಿದ್ದು, ಈ ಸಂದರ್ಭದಲ್ಲಿ ಇಬ್ಬರು ಕೂಡಾ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕರಾವಳಿ

ಕರಾವಳಿ ಪೊಲೀಸ್ ರಕ್ಷಣಾ ಬೋಟ್ ನ ನೌಕರರಿಬ್ಬರು ಸಮುದ್ರದಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದಿನಿಂದ 2ನೇ ಪೂರಕ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿಯಲ್ಲಿ ಫೇಲ್‌ ಆದ ವಿದ್ಯಾರ್ಥಿಗಳಿಗೆ ಈ ರೀತಿ 2ನೇ ಅವಕಾಶ ನೀಡಿದ್ದು, ಇರದಲ್ಲಿ 1.20 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ನಡೆಯಲಿದೆ. ಸೆ. 02ರಂದು

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ Read More »

ಕರ್ನಾಟಕ

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಭಾನುವಾರದಂದು ರಾತ್ರಿ ಸಂಭವಿಸಿದೆ. ಮೃತರನ್ನು ಮೆಫಿನ್ ಥಾಮ್ಸ್ (25) ಎಂದು ಗುರುತಿಸಲಾಗಿದೆ. ಬೈಕೊಂದು ಇನ್ನೊಂದು ಬೈಕ್ ಗೆ ಹಿಂಬದಿನಿಂದ ಢಿಕ್ಕಿ ಹೊಡೆದಿದ್ದು, ಈ ವೇಳೆ ಮೆಫಿನ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೈಕ್ ಗಳ ನಡುವೆ ಢಿಕ್ಕಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಇಂದು ಕರಾವಳಿಯಾದ್ಯಂತ ನಾಗರ ಪಂಚಮಿ ಹಬ್ಬವನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ವಿವಿಧ ಕುಟುಂಬಗಳ ಮನೆಗಳಲ್ಲೇ ನಾಗಾರಾಧನೆ ನಡೆಯುತ್ತದೆ. ಕರಾವಳಿಯಲ್ಲಿ ನಾಗಾರಾಧನೆಗೆ ತನ್ನದೇ ಆದ ಮಹತ್ವವಿದ್ದು, ತುಳುನಾಡ ಜನರ ಪಾಲಿನ ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರ ಪಂಚಮಿ. ಮಂಗಳೂರಿನ ನಗರ ವ್ಯಾಪ್ತಿಯಲ್ಲಿ ಕುಡುಪು ಅನಂತಪದ್ಮನಾಭ ದೇವಸ್ಥಾನ, ಉರ್ವ ಮಾರಿಯಮ್ಮ, ಕದ್ರಿ ಹಾಗೂ ಶ್ರೀ ಕ್ಷೇತ್ರ ಮಂಗಳಾದೇವಿ ಸಹಿತ ವಿವಿಧ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಆಚರಣೆ ನಡೆಯಲಿದೆ.

ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ Read More »

ಕರಾವಳಿ

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ

ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ದೇಶದ ಮಹತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ 3 ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಕ್ರಮ್ ಲ್ಯಾಂಡರ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ವಿಕ್ರಮ್ ಲ್ಯಾಂಡರ್, ಈಗಾಗಲೇ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿ.ಮೀ ಮತ್ತು ಚಂದ್ರನಿಂದ 134 ಕಿ.ಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತಿದೆ

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಕೊಣಾಜೆ ಗ್ರಾಮ ಪಂಚಾಯತ್ ನ 2ನೇ ಅವಧಿಗೆ ಅಧ್ಯಕ್ಷೆಯಾಗಿ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಎಂ. ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ರುಕ್ಮಿಣಿ ಹಾಗೂ ಮೈತ್ರಿ, ಉಪಾಧ್ಯಕ್ಷ ಸ್ಥಾನಕ್ಕೆ ನವೀನ್ ಎಂ. ಹಾಗೂ ಸರೋಜಿನಿ ಅವರು ನಾಮಪತ್ರ ಸಲ್ಲಿಸಿದ್ದರು. ಮತದಾನದ ವೇಳೆ ರುಕ್ಮಿಣಿಯವರು 3 ಮತ ಹಾಗೂ ಮೈತ್ರಿಯವರು 2 ಮತಗಳನ್ನು ಪಡೆದು ರುಕ್ಮಿಣಿಯವರು ಗೆಲುವು ಸಾಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನವೀನ್

ಕಡಬ: ಕೊಣಾಜೆ ಗ್ರಾ.ಪಂ.ಚುನಾವಣೆ – ಅಧ್ಯಕ್ಷೆಯಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ನವೀನ್ ಎಂ ಆಯ್ಕೆ Read More »

ಕರಾವಳಿ
Scroll to Top