newskadaba

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

(ನ್ಯೂಸ್ ಕಡಬ) newskadaba.com ರಾಂಚಿ, ಆ.‌ 20. 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವ ಕುರಿತು ಜಾರ್ಖಂಡ್ ನಿಂದ ವರದಿಯಾಗಿದೆ. ಜಾರ್ಖಂಡ್‌ನ ರಾಮಗಢ ಜಿಲ್ಲೆಯೊಂದರ ಒಂಬತ್ತು ತಿಂಗಳ ಮಗುವಿಗೆ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಗುವಿನ ಮೂಗಿನ ದ್ರವವನ್ನು ಲ್ಯಾಬ್‌ಗೆ ಕಳುಹಿಸಿದ್ದು, ಈ ವೇಳೆ ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ವೈದ್ಯ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.‌ 20. ನಟಿ ನೇಹಾ ಶೆಟ್ಟಿ ಅವರು ವೇದಿಕೆಯ ಮೇಲೆ ಸೀರೆ ಸೆರಗು ಬಿಚ್ಚುವ ಮೂಲಕ ಟ್ರೋಲ್ ಆಗಿದ್ದು, ನೇಹಾ ಅವರ ನಡೆಗೆ ನೆಟ್ಟಿಗರು ಗರಂ ಆಗಿದ್ದಾರೆ. ನಟ ವಿಶ್ವಕ್ ಸೇನ್- ನೇಹಾ ಶೆಟ್ಟಿ ‘ಗ್ಯಾಂಗ್ಸ್ ಆಫ್ ಗೋದಾವರಿ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಇದರ ಪ್ರಚಾರದ ವೇಳೆ ಇಬ್ಬರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಈ ಸಿನಿಮಾದ ಹಾಡಿಗೆ ಹುಕ್ ಸ್ಟೆಪ್ಸ್ ಸಹ ಇದ್ದು, ಇದಕ್ಕೆ ನೇಹಾ ಮತ್ತು ವಿಶ್ವಕ್ ವೇದಿಕೆ ಮೇಲೆಯೇ

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ಬಿಕಿನಿ ತೊಟ್ಟು ಸಮುದ್ರ ಮಧ್ಯೆ ಬೋಲ್ಡ್ ಆಗಿ ಕಾಣಿಸಿಕೊಂಡ ಕುಬ್ರಾ ಸೇಠ್

(ನ್ಯೂಸ್ ಕಡಬ) newskadaba.com ಮುಂಬೈ, ಆ. 20. ಸಿನಿಮಾ ರಂಗದಲ್ಲಿ ಸಖತ್ ಬೇಟಡಿಕೆಯಿರುವ ನಟಿ ಕುಬ್ರಾ ಸೇಠ್, ಸಿನಿಮಾ ಮಾತ್ರವಲ್ಲದೇ ವೆಬ್ ಸೀರಿಸ್​ ಲೋಕದಲ್ಲೂ ಕೂಡಾ ತನ್ನ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುವ ಕುಬ್ರಾ ಸೇಠ್, ತನ್ನ ಅಭಿಮಾನಿಗಳಿಗೆ ಆಗಾಗ ಹಲವು ಫೋಟೋಗಳನ್ನು ಶೇರ್‌ ಮಾಡುತ್ತಿರುತ್ತಾರೆ. ಇದೀಗ ಆಸ್ಟ್ರೇಲಿಯಾ ಟ್ರಿಪ್‌ ತೆರಳಿರುವ ಕುಬ್ರಾ, ತನ್ನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸಖತ್ ಹಾಟ್ ಅಂಡ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ

ಬಿಕಿನಿ ತೊಟ್ಟು ಸಮುದ್ರ ಮಧ್ಯೆ ಬೋಲ್ಡ್ ಆಗಿ ಕಾಣಿಸಿಕೊಂಡ ಕುಬ್ರಾ ಸೇಠ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 20. ವಿಧಾನ ಪರಿಷತ್‌ ಸ್ಥಾನಕ್ಕೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು. ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ

ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ Read More »

ಕರ್ನಾಟಕ

ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ – ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಗುತ್ತಿಗೆ ಆಧಾರದಲ್ಲಿ ಕೆಎಸ್ಸಾರ್ಟಿಸಿ ಚಾಲಕರ ನೇರ ನೇಮಕಾತಿ – ದ.ಕ, ಉಡುಪಿ ಜಿಲ್ಲೆಯವರಿಗೆ ಅವಕಾಶ Read More »

ಕರಾವಳಿ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹೆಬ್ರಿ, ಆ. 20. ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನಮಕ್ಕಿ ಬಳಿ ನಡೆದಿದೆ. ವರದಿಯ ಪ್ರಕಾರ, ಬೈಕ್ ನ್ನು ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು.

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ವಾರ್ಟರ್ಸ್ ಮೇಲೆ ಮಲಗಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ವಲಸೆ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೀತಾಂಗೋಳಿಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ರಾಜಸ್ತಾನ ಬೋಡಗಾನ್ ನಿವಾಸಿ ಕೇಮ್ರಾಜ್ ಗುಜ್ಜರ್ (43) ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳಿಂದ ಸೀತಾಂಗೋಳಿಯಲ್ಲಿ ಗ್ರಾನೈಟ್ ಹಾಗೂ ಮಾರ್ಬಲ್ ಕೆಲಸ ನಿರ್ವಹಿಸುತ್ತಿದ್ದ ಇವರು ಸೀತಾಂಗೋಳಿ ಪೇಟೆಯಲ್ಲಿರುವ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಕ್ವಾರ್ಟರ್ಸ್‌ನ ಮೇಲಿನ ಮಹಡಿಯಲ್ಲಿ ನಿದ್ರಿಸುತ್ತಿದ್ದ ಇವರನ್ನು ಜೊತೆಗಿದ್ದವರು ಶನಿವಾರ ಮುಂಜಾನೆ ಎದ್ದು ನೋಡಿದಾಗ ಕೇಮ್ರಾಜ್ ಗುಜ್ಜರ್ ಕ್ವಾರ್ಟರ್ಸ್‌ನ ಕೆಳಗೆ

ಕ್ವಾರ್ಟರ್ಸ್ ಮೇಲೆ ಮಲಗಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಪಂಚಾಯತ್‍ ನೇತ್ರಾವತಿ ಸಭಾಂಗಣದಲ್ಲಿ ಆ. 20ರ ಭಾನುವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್

ಇಂದು ದೇವರಾಜು ಅರಸುರವರ 108ನೇ ಜನ್ಮ ದಿನಾಚರಣೆ Read More »

ಕರಾವಳಿ

ಮಟ್ಕಾ ದಂಧೆ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಜೊತೆಗೆ ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಟ್ಕಾ ದಂಧೆ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top