newskadaba

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ […]

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಮುಂಬೈಯಿಂದ ಬಂದಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೇ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿ ಅಲ್ಲಿ ಹ್ಯಾಕರ್‌ಗಳ ಮೋಸಕ್ಕೆ ಸಿಲುಕಿ ಜೈಲು ಶಿಕ್ಷೆಗೊಳಗಾಗಿರುವ ಕಡಬ ಮೂಲದ ಚಂದ್ರಶೇಖರ್‌ ಅವರ ಬಿಡುಗಡೆಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬಂದಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಉದ್ಯೋಗದಲ್ಲಿದ್ದ ಸದ್ಯ ಜೈಲಿನಲ್ಲಿರುವ ಕಡಬ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಅವರ ವಿರುದ್ಧ ದೂರು ನೀಡಿದ ಮಹಿಳೆಗೆ ವಂಚನೆಯಾದ ಮೊತ್ತವನ್ನು ಪಾವತಿಸಿ ಎನ್‌ಒಸಿ ಪಡೆದು ಅದನ್ನು ಪೊಲೀಸ್‌ ಹಾಗೂ ಜೈಲಾಧಿಕಾರಿಗೆ ನೀಡಬೇಕಾಗಿದೆ.

ಸೌದಿಯಲ್ಲಿ ಜೈಲು ಪಾಲಾಗಿರುವ ಕಡಬದ ಯುವಕನ ಬಿಡುಗಡೆ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 19. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಸಂದರ್ಭ ತಪಾಸಣಾ ನಿರತ ಪೊಲೀಸರು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯದ ಕುಲ್ಕುಂದ – ಬಿಸಿಲೆ ಘಾಟ್ ರಸ್ತೆಯಲ್ಲಿ ಗುರುವಾರದಂದು ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್‌ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದು. ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ವಾಹನವನ್ನು

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿನ ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದಿಂದ ಒಡವೆ ಹಾಗೂ ಸಿಸಿ ಕ್ಯಾಮೆರಾ ಕದ್ದೊಯ್ದ ಘಟನೆ ಶುಕ್ರವಾರದಂದು ಬೆಳಕಿಗೆ ಬಂದಿದೆ. ದೇವಸ್ಥಾನದ ಅರ್ಚಕ ರವಿಪ್ರಸಾದ್‌ ಭಟ್‌ ಅವರು ಶುಕ್ರವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆಯಲು ಮುಂದಾದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಕಂಡು ಬಂದಿತ್ತು. ಬಾಗಿಲು ಸರಿಸಿ ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾಗಿದ್ದ 35,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣ

ಕಡಬ: ದೇವಸ್ಥಾನದಿಂದ‌ ಚಿನ್ನ, ಬೆಳ್ಳಿ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಬಿಹಾರ, ಆ. 19. ಇಲ್ಲಿನ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವ ಹಿನ್ನೆಲೆ ದೇವಳದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹನುಮಾನ್ ದೇಗುಲದಲ್ಲಿ ಗೋಮಾಂಸ ಇರಿಸಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ದೇವಸ್ಥಾನದ ಅವರಣದಲ್ಲಿದ್ದ ಗೋಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನವು ಆಗಸ್ಟ್ 20ರಂದು ಗೋವಾದ ಪಣಜಿಯ ಶ್ರೀ ಸರಸ್ವತಿ ಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ಹಿರಿಯ ಕವಿ, ಗೀತೆಗಾರರಾದ ಪ್ರಾಚಾರ್ಯ ಡಾ.ರಾಜಯ್ ಪವಾರ್ ಅವರಿಗೆ ರಾಷ್ಟ್ರೀಯ ಚಾರೊಳಿ ಚುಟುಕು ಸನ್ಮಾನ ನೀಡಲಾಗುವುದು ಎಂದು ರಾಷ್ಟ್ರೀಯ ಚಾರೊಳಿ ಚುಟುಕು ಪರಿಷದ್ ನ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಹಾಗೂ ಕೊಂಕಣಿ

ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ – ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಮತ್ತು ಗೋವಾದ ಹಿರಿಯ ಕವಿ ಡಾ ರಾಜಯ್ ಪವಾರ್ ಸೇರಿದಂತೆ ಇಬ್ಬರಿಗೆ ಚಾರೊಳಿ ಚುಟುಕು ರಾಷ್ಟ್ರೀಯ ಸನ್ಮಾನ Read More »

ಕರಾವಳಿ, ಕರ್ನಾಟಕ

ಗಣಿತ ಶಾಸ್ತ್ರದಲ್ಲಿ ಮಹೋನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡುವ ವಿಶಿಷ್ಟ ಪದಕ – ಫೀಲ್ಡ್ಸ್ ಮೆಡಲ್ ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಆ. 18. ಗಣಿತ ಶಾಸ್ತ್ರದಲ್ಲಿ ಮಹೋನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡುವ ವಿಶಿಷ್ಟ ಪದಕ ಇದಾಗಿದ್ದು, ಕೆನಡಾದ ಖ್ಯಾತ ಗಣಿತ ಶಾಸ್ತ್ರಜ್ಞ ಜಾನ್ ಚಾರ್ಲ್ಸ ಫೀಲ್ಡ್ಸ್ ಅವರ ಸ್ಮರಣಾರ್ಥ ನೀಡಲಾಗುತ್ತದೆ. 1924 ರಲ್ಲಿ ಈ ಪದಕವನ್ನು ಆರಂಭಿಸಲಾಗಿದ್ದು ಮೊದಲ ಬಾರಿ 1936ರಲ್ಲಿ ನೀಡಲಾಯಿತು. ಪ್ರತಿ 4 ವರ್ಷಕ್ಕೊಮ್ಮೆ ಈ ಪ್ರಶಸ್ತಿ ನೀಡಲಾಗುತ್ತಿದ್ದು ಕೊನೆ ಬಾರಿ 2022 ರಲ್ಲಿ ನೀಡಲಾಗಿದೆ. 40 ವರ್ಷದ ಕೆಳಗಿನ ಗಣಿತ ಶಾಸ್ತ್ರಜ್ಞರಿಗೆ ಮಾತ್ರ ಈ ಪದಕವನ್ನು ನೀಡಲಾಗುತ್ತದೆ. ಪ್ರತಿ

ಗಣಿತ ಶಾಸ್ತ್ರದಲ್ಲಿ ಮಹೋನ್ನತ ಸಾಧನೆ ಮಾಡಿದ ಸಾಧಕರಿಗೆ ನೀಡುವ ವಿಶಿಷ್ಟ ಪದಕ – ಫೀಲ್ಡ್ಸ್ ಮೆಡಲ್ ಡಾ|| ಮುರಲೀ ಮೋಹನ್ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಕೇಂದ್ರ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ 2023-24 ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹರಿರುವ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ

ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಇಲ್ಲಿನ ಸರ್ಕಾರಿ ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಸರ್ಕಾರಿ ಹಾಗೂ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಖಾಲಿ ಇರುವ ಪ್ರವೇಶ ಪ್ರಕ್ರಿಯೆಯನ್ನು ಇದೇ ಆ. 31 ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ, ಅದೇ ದಿನದಂದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಖಾಲಿ ಇರುವ ವೃತ್ತಿಗಳ ವಿವರ: ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ತರಬೇತಿ, ಅವಧಿ

ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top