newskadaba

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.!

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 62 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ಗಳನ್ನು ವಶಪಡಿಸಿಕೊಂಡು ಸಂತೆ ಅಂಗಡಿಯವರಿಗೆ ರೂ. 700 ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದು ತಿಳಿಸಲಾಯಿತು. ನಗರಸಭೆಯ ಪೌರಾಯುಕ್ತರು, ಹಿರಿಯ ಆರೋಗ್ಯ ನಿರೀಕ್ಷಕರು, […]

ಮಾರುಕಟ್ಟೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಶ – ದಂಡ ವಸೂಲಿ.! Read More »

ಕರಾವಳಿ

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.09. ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳಕ್ಕಿಳಿದಿದ್ದ ಐವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸಾರ್ವಜನಿಕ ಶಾಂತಿ ಭಂಗ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ನೆಲ್ಯಾಡಿಯ ಬೆಥನಿ ಕಾಲೇಜು ಬಳಿಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಕೆ (30), ಅಶ್ವಥ್ (26), ಸ್ವರೂಪ್ ಪಟ್ಟೆ (25), ಅಖಿಲೇಶ್ (21) ಲಕ್ಷ್ಮಣ ಗೌಡ (45) ಎಂಬವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು 2 ಬೈಕ್ ಗಳನ್ನು 5 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ. ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗಿದೆ. ಕಂಟ್ರ್ಯಾಕ್ಟರ್‌ಗಳು ಆಣೆ ಪ್ರಮಾಣಕ್ಕೆ ಬರಲಿ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕಾರಣ ಗೊತ್ತಿದೆ. ಯಾವ ಕಂಟ್ರ್ಯಾಕ್ಟರ್‌

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ Read More »

ಕರ್ನಾಟಕ

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 08. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ವಿಧಾನಸಭೆ ಹಾಗೂ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರದಂದು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 07. ಟೈರ್ ಸ್ಫೋಟಗೊಂಡ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆಡ್‌ ಕಾನ್‌ಸ್ಟೇಬಲ್‌ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೆಟ್ರೋಲ್ ಬಂಕ್ ಬಳಿ ಸೋಮವಾರದಂದು ವರದಿಯಾಗಿದೆ. ಮೃತರನ್ನು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮೋಮಿನಪುರದ ಮುಈಝುದ್ದೀನ್ (52) ಎಂದು ಗುರುತಿಸಲಾಗಿದೆ. ಘಟನೆಯಿಂದ ಅವರ ಸಹೋದರ ನಜುಮುದ್ದಿನ್ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಟೈರ್ ಸ್ಫೋಟಗೊಂಡು ಕಾರು ಪಲ್ಟಿ- ಕಾನ್ಸ್ಟೇಬಲ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.07. ಡೆಂಗ್ಯು ತಡೆಗಟ್ಟಲು ಅದರ ಬಗ್ಗೆ ವ್ಯಾಪಕ ವಾದ ಮಾಹಿತಿ ನೀಡುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ತಿಳಿಸಿದರು ಎಂದು ವರದಿ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ರು ಕುಟುಂಬದ ಕಲ್ಯಾಣ ಇಲಾಖೆ ವತಿಯಿಂದ ಪತ್ರಿಕಾ ಭವನದ ಮುಂಭಾಗದಲ್ಲಿ ಡೆಂಗ್ಯು ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆ ಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗ್ಯು ಜಾಗೃತಿ ರಥಕ್ಕೆ ಚಾಲನೆ ನೀಡಿ

ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! –  ಡಾ.ಆನಂದ್ ಕೆ Read More »

ಕರಾವಳಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರಗಿ, ಆ.07. ಇಲ್ಲೊಬ್ಬ ವಿದ್ಯಾರ್ಥಿ ಆನ್ಲೈ್ನ್‍ ಗೇಮ್ಗೆಳಲ್ಲಿ ಲೀನನಾಗಿ ಹಣ ಕಟ್ಟಿ ಪಬ್ಜಿ್ ಆಟವಾಡುತ್ತಿದ್ದ. ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೂಲತಃ ಬೆಟ್ಟಿಂಗ್‍ ಆಟವಲ್ಲ. ಈ ಆಟದಲ್ಲಿ ಕೆಲ ವಿಶಿಷ್ಟ ವರ್ಚ್ಯುವಲ್ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಆಟಗಾರ ಬಹಳ ಶಕ್ತಿಶಾಲಿ ಎಂಬ ಸಂದೇಶ ಇತರ ಆಟಗಾರರಿಗೆ ಸಿಗುತ್ತದೆ. ಅಂತಹ ವಸ್ತುಗಳನ್ನು ಖರೀದಿಸಲು ಈ ಯುವಕ ಸಾಲವನ್ನು ಮಾಡಿದ್ದು, ಮೃತ ಯುವಕನನ್ನು ಪ್ರವೀಣ್ ಪಾಟೀಲ್(20) ಎಂದು ಗುರುತಿಸಲಾಗಿದೆ. ಈತ ನೇಣು

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಕಾಶ್ಮೀರ, ಆ. 07. ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆತಿಂದ ವರದಿಯಾಗಿದೆ. ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ನೀಡಿದ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆನ್ನಲಾಗಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗಡಿ ರೇಖೆಯೊಳಗೆ ನುಸುಳುತ್ತಿದ್ದ

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top