newskadaba

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮೀ ಯೋಜನೆ ಸುಲಭ ಜಾರಿಗೆ ಪ್ರತೀ 1ಸಾವಿರ ಜನರಿಗೆ ಪ್ರಜಾ ಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ. ಪ್ರಜಾಪ್ರತಿನಿಧಿ ನೇಮಕವು ಒಂದು ತಿಂಗಳ ಕಾಲಾವಧಿಗೆ ಮಾತ್ರ ನಿರ್ಧರಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ […]

ಗೃಹಲಕ್ಷ್ಮೀ ಯೋಜನೆಗೆ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ- ಪ್ರತೀ ಗ್ರಾಮಕ್ಕೆ ಪ್ರಜಾಪ್ರತಿನಿಧಿಗಳ ನೇಮಕ Read More »

ಕರ್ನಾಟಕ
Crime

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 15. ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಚಾಲಕರ ಎರಡು ಗುಂಪುಗಳ‌ ನಡುವೆ ಗಲಾಟೆ ನಡೆದಿದ್ದು, ಘಟನೆಯಿಂದ  ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಜಮಾಯಿಸಿದ್ದ ಜನರನ್ನು ‌ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ  ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು

ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ತರಬೇತಿ ಕಾರ್ಯಗಾರ Read More »

ಕರಾವಳಿ

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಐತಿಹಾಸಿಕ ಚಟುವಟಿಕೆಗಳಿಗೆ ನಾಂದಿ ಹಾಡಿದೆ. ಇದುವರೆಗೆ ಕೇಂದ್ರಸ್ಥಾನ ಮೈಸೂರಿನಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸ್‍ ಗಳನ್ನು ರಾಜ್ಯವ್ಯಾಪಿ ನಡೆಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ನಾಗೇಶ್ ವಿ. ಬೆಟ್ಟಕೋಟೆ ಅವರು ಹೇಳಿದರು. ಅವರು ಶುಕ್ರವಾರದಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿವಿಯಿಂದ ಡಾ. ಗಂಗೂಬಾಯಿ ಹಾನಗಲ್ ಸಂಗೀತ-ಪ್ರದರ್ಶಕ ಕಲೆಗಳ ಕೋರ್ಸ್‍ ಗಳು ಆರಂಭ -ನಾಗೇಶ್ ವಿ. ಬೆಟ್ಟಕೋಟೆ Read More »

ಕರಾವಳಿ

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜು. 14. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರು ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾದಿಕಾರಿ ಕಚೇರಿ ರಜತಾದ್ರಿಯಲ್ಲಿ ನಿರ್ಗಮಿತ ಜಿಲ್ಲಾದಿಕಾರಿ ಕೂರ್ಮಾ ರಾವ್ ಅದಿಕಾರ ಹಸ್ತಾಂತರಿಸಿದರು. ಹೂಗುಚ್ಛ‌ ನೀಡುವ ಮೂಲಕ ನೂತನ ಜಿಲ್ಲಾದಿಕಾರಿಯವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾದಿಕಾರಿ ವೀಣಾ ಬಿ ಎನ್ ಉಪಸ್ಥಿತರಿದ್ದರು.

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ Read More »

ಕರಾವಳಿ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 14. ಪುತ್ತೂರು ಉಪವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್‌ ನಂದನ್‌ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿತ್ತು. ಆದರೆ, ಈ ಆದೇಶಕ್ಕೆ ಕರ್ನಾಟಕ ಅಡ್ಮಿನಿಸ್ಟ್ರೇಟಿವ್‌ ಟ್ರಿಬ್ಯೂನಲ್‌ ತಡೆಯಾಜ್ಞೆ ನೀಡಿದೆ. ಅವಧಿಪೂರ್ವ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ಹುದ್ದೆಗೆ ಮತ್ತೆ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಗಿರೀಶ್‌ ನಂದನ್‌ ಕೆಎಟಿ ಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೆಎಟಿ ವರ್ಗಾವಣೆ ಆದೇಶಕ್ಕೆ ತಡೆ ನೀಡಿದೆ. ಗಿರೀಶ್‌ ನಂದನ್‌

ಎಸಿ ಗಿರೀಶ್ ನಂದನ್ ವರ್ಗಾವಣೆಗೆ ಕೆಎಟಿ ತಡೆ.! Read More »

ಕರಾವಳಿ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಯಾವುದೇ ದಾಖಲೆಗಳಿಲ್ಲದೇ ಸಣ್ಣ ಮೊತ್ತದ ಸಾಲ ನೀಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಮೊಬೈಲ್ ಅಪ್ಲಿಕೇಶನ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಆರೋಪಕ್ಕೆ ಸಂಬಂಧಿಸಿದ 42 ಮೊಬೈಲ್ ಆಪ್‌ ಸೇವೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಆಪ್ ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಕಳಚಿ ಹಾಕಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಮೊಬೈಲ್ ಆಪ್‌ಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ

ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿದ್ದ 42 ಆ್ಯಪ್ ಗಳು ಬ್ಯಾನ್..!- ಸರಕಾರದಿಂದ ಮಹತ್ವದ ಮಾಹಿತಿ Read More »

ಕರ್ನಾಟಕ, ತಂತ್ರಜ್ಞಾನ
Scroll to Top