ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು
(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21. ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್



