newskadaba

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 30. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆಯನ್ನು ಆಯೋಜಿಸಲಾಯಿತು. ಖಗೋಳಶಾಸ್ತ್ರಜ್ಞ ಡಾ. ರಮೇಶ್ ಎಂ. ಭಟ್ ಉದ್ಘಾಟಿಸಿ ಮಾತನಾಡಿ, ಕ್ಷುದ್ರಗ್ರಹಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಅವುಗಳ ವೈಜ್ಞಾನಿಕ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಕ್ಷುದ್ರಗ್ರಹಗಳ ಉಗಮ, ರಾಸಾಯನಿಕ ಅಂಶಗಳು, ಕುಬ್ಜ ಗ್ರಹಗಳು, ಉಲ್ಕೆಗಳು ಮತ್ತು ಧೂಮಕೇತುಗಳು ಸೌರಮಂಡಲದಲ್ಲಿ ಚಲಿಸುವ ಪಥಗಳ ಬಗ್ಗೆ ವಿವರಿಸಿದರು. ವಿವಿಧ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳು […]

ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ

(ನ್ಯೂಸ್ ಕಡಬ) newskadaba.com ಜೂ. 30. ಕರ್ನಾಟಕ ಸರಕಾರವು ಸರಕಾರಿ ಸೌಲಭ್ಯಗಳು ಸುಲಭವಾಗಿ ಮತ್ತು ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತಂದಿದ್ದು, ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014 ರ ಅನುಸಾರ, ಸಕಾಲ ನೋಂದಾಯಿತ ಸೇವೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪಡೆಯುವುದು ನಾಗರೀಕರ ಹಕ್ಕಾಗಿರುತ್ತದೆ. ಸಕಾಲ ಕಾಯ್ದೆಯಡಿ, ಸೇವೆ ದೊರೆಯಲು ವಿಳಂಬವಾದಲ್ಲಿ ಅಥವಾ ತಿರಸ್ಕೃತಗೊಂಡಲ್ಲಿ ಅಥವಾ ಅಧಿಸೂಚಿತ ಸೇವೆಗೆ 15 ಸಂಖ್ಯೆಯ ಸಕಾಲ ಸ್ವೀಕೃತಿ ಸಂಖ್ಯೆ

ಸರಕಾರಿ ಕಚೇರಿಗಳಲ್ಲಿ ಸಕಾಲ ಸೇವೆಯ ಪ್ರಯೋಜನ ಪಡೆಯಿರಿ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 30. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ,

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರ್ನಾಟಕ

ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಜೂ. 30. ಪುತ್ತೂರು ತಾಲೂಕಿನ ಪೆರ್ನಾಜೆ ಶ್ರೀ ಸೀತಾ ರಾಘವ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೂನ್ಯ ದಾಖಲಾತಿ ಇರುವ ಕಾರಣದಿಂದ ಹಾಗೂ ಅನುದಾನ ಸಂಹಿತೆ ನಿಯಮದಂತೆ ಒಂದು ಬಾರಿಗೆ ಮಾತ್ರ ದಾಖಲಾತಿ ಮನ್ನಾ ಮಾಡಲು ಅವಕಾಶವಿದೆ.   ಶಾಲೆಯಲ್ಲಿ ಹಿಂದಿನ ಎರಡು ಶೈಕ್ಷಣಿಕ ವರ್ಷಗಳಲ್ಲಿ ನಿಗದಿತ ದಾಖಲಾತಿ-ಹಾಜರಾತಿ ಇಲ್ಲದ ಪ್ರಯುಕ್ತ ಶಾಲೆಯ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ ಅನ್ವಯ ಷರತ್ತುಗಳಪಡಿಸಿ, ರದ್ದುಪಡಿಸಲಾಗಿದೆ. ಪ್ರಸ್ತುತ

ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ Read More »

ಕರಾವಳಿ

ಬೋಳೂರು ಚಿತಾಗಾರ ದುರಸ್ಥಿ

(ನ್ಯೂಸ್ ಕಡಬ) newskadaba.com ಜೂ. 30. ಬೋಳೂರು ವಿದ್ಯುತ್ ಚಿತಾಗಾರವು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶವ ಸಂಸ್ಕಾರಕ್ಕೆ ಬಳಕೆಯಲ್ಲಿರುವ ಪ್ರಮುಖ ವಿದ್ಯುತ್ ಚಿತಾಗಾರವಾಗಿದೆ. ವಿದ್ಯುತ್ ಚಿತಾಗಾರದ ಚಿಮಣಿಯು ಇತ್ತೀಚಿಗೆ ಬಿದ್ದ ಮಳೆ ಮತ್ತು ಗಾಳಿಗೆ ಮುರಿದು ಬಿದ್ದಿರುವುದರಿಂದ ಚಿತಾಗಾರವನ್ನು ಶವ ಸಂಸ್ಕಾರಕ್ಕೆ ಸ್ಥಗಿತಗೊಳಿಸಲಾಗಿದ್ದು, ಹೊಸದಾಗಿ ಅಳವಡಿಸಿ ಕಾರ್ಯಚರಣೆಗೆ ಸಿದ್ಧವಾಗುವವರೆಗೆ ಸುರತ್ಕಲ್ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880250617, 9743145481 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೋಳೂರು ಚಿತಾಗಾರ ದುರಸ್ಥಿ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ

(ನ್ಯೂಸ್ ಕಡಬ) newskadaba.com ಜೂ. 30. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ (Enumeration Form) ಗಳನ್ನು ಮತದಾರರಿಗೆ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳವಾರ ಮಂಗಳೂರು ನಗರದ  ಕೆಲವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಚಾಲನೆ- ಮತಗಟ್ಟೆಗಳಿಗೆ ಡಿಸಿ ಭೇಟಿ Read More »

ಕರಾವಳಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ತಾಲೂಕಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಜರಗಿತು. ಪ್ರಸಕ್ತ ಸಾಲಿನಲ್ಲಿ ಸಂಸ್ಥೆಗೆ ದಾಖಲಾದ ಮಕ್ಕಳಿಗೆ ಮಾತಾಜಿಯವರಿಂದ ಆರತಿ, ಮಕ್ಕಳಿಂದ ಘೃತಾಹುತಿ, ಭಾರತಮಾತೆಗೆ ಪುಷ್ಪಾರ್ಚನೆ ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಹಿರಿಯರಿಂದ ತಿಲಕಧಾರಣೆ, ಸಿಹಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯು.ಆರ್. ಪ್ರೋಪರ್ಟಿಸ್ ಪುತ್ತೂರು ಇದರ ಸಂಸ್ಥಾಪಕರಾದ ಶ್ರೀ ಉಜ್ವಲ್ ಪ್ರಭು

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ “ಆಗತ- ಸ್ವಾಗತ” ಕಾರ್ಯಕ್ರಮ Read More »

ಕರಾವಳಿ

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು

(ನ್ಯೂಸ್ ಕಡಬ) newskadaba.com ಜೂ. 29. ರೈಲು ಪ್ರಯಾಣವನ್ನು ಇನ್ನಷ್ಟು ಸುರಕ್ಷಿತ ಹಾಗೂ ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಜುಲೈ 1ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆ ಈಗಾಗಲೇ ಪ್ರಕಟಿಸಲಾಗಿದ್ದು, ದೇಶಾದ್ಯಂತ ಹೊಸ ನಿಯಮಗಳು ಜಾರಿಯಾಗಲಿವೆ.   ಹೊಸ ನಿಯಮಗಳ ಪ್ರಕಾರ, ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಭಾರಿ ದಂಡ ವಿಧಿಸುವುದರ ಜೊತೆಗೆ, ಪರಿಸ್ಥಿತಿಯ ಗಂಭೀರತೆಯನ್ನು ಆಧರಿಸಿ ಟಿಕೆಟ್ ರದ್ದುಪಡಿಸುವುದು

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ

(ನ್ಯೂಸ್ ಕಡಬ) newskadaba.com ಜೂ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ ಯಶಸ್ವಿನ ಪ್ರಮಾಣ, ಮೂತ್ರಪಿಂಡ ಕಸಿ ವೈಫಲ್ಯ, ದೀರ್ಘಕಾಲಿಕ ಪರಿಣಾಮ ಹಾಗೂ ಸಾವಿನ ಪ್ರಮಾಣದಬಗ್ಗೆ ದೇಶದ ಸಂಬಂಧಪಟ್ಟ ಎಲ್ಲ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕೆಂದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ(National Organ and Tissue Transplant Registry-NOTTO)ಯು ನಿರ್ದೇಶನ ನೀಡಿದೆ.

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸರಸ್ವತೀ ವಿದ್ಯಾಲಯ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಇವರು ಶಿವಾಜಿ ಮಹಾರಾಜರ ಹುಟ್ಟು, ನಡೆದು ಬಂದ ದಾರಿ ಮತ್ತು ಅವರು ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಪಟ್ಟ ಶ್ರಮಗಳ ಕುರಿತು ಮಕ್ಕಳಿಗೆ ಕಥೆಯ ಮೂಲಕ ವಿವರಿಸಿದರು. ದೇಶಪ್ರೇಮ, ಭಕ್ತಿ ಮತ್ತು ಗೌರವವನ್ನು ಬೆಳಿಸಿಕೊಳ್ಳಲು ಶಿವಾಜಿ ಮಹಾರಾಜರು ನಮಗೆ ಮಾದರಿಯಾಗಿದ್ದಾರೆ

ಕಡಬ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಕರಾವಳಿ
Scroll to Top