newskadaba

ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ

ನ್ಯೂಸ್ ಕಡಬ) newskadaba.com, ನವದೆಹಲಿ.  ಡಿ. 27 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಕೆಲ ಕಾಲ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇನ್​ಸೈಡ್​ಸ್ಪೋರ್ಟ್ಸ್​ ವರದಿ ಮಾಡಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಈ ಎರಡು ಸರಣಿಗಳಲ್ಲಿ […]

ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ Read More »

ಕ್ರೀಡಾ ನ್ಯೂಸ್

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 27. ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಗೋಳಿ ಮೀನು ಬರೋಬ್ಬರಿ 2,34,080 ರೂಪಾಯಿಗೆ ಮಾರಾಟವಾಗಿದೆ. ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕ 22 ಕೆ.ಜಿ. ತೂಕದ ಈ ಮೀನು ಮೀನುಗಾರರ ಪಾಲಿಗೆ ಲಾಭದಾಯಕವಾಗಿದೆ. ಹಾಗಾದರೆ ಕೇವಲ 22 ಕೆ.ಜಿ. ತೂಕದ ಮೀನಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿದ್ರಾ ಎಂದು ಉಬ್ಬೇರಿಸಬೇಡಿ. ಇದು ಗೋಳಿ ಮೀನು. ಔಷಧಕ್ಕೆ ಬಳಕೆಯಾಗುವ ಗೋಳಿ ಮೀನಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚು. ಆಳಸಮುದ್ರ ಮೀನುಗಾರಿಕಾ ಬೋಟ್‌ನ

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಸಿಯುನಲ್ಲಿ ಮಗಳ ಮದುವೆ ನೋಡುತ್ತಾ ಪ್ರಾಣಬಿಟ್ಟ ತಾಯಿ..!                                   

(ನ್ಯೂಸ್ ಕಡಬ) newskadaba.com ಬಿಹಾರ, ಡಿ. 27. ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ತಾಯಿಯೊಬ್ಬರ ಕೊನೆಯ ಆಸೆಯಂತೆ ಮಗಳು ವಿವಾಹವಾಗಿರುವ ಅಪರೂಪದ ಘಟನೆ ಸಂಭವಿಸಿದ್ದು, ಪೂನಂ ಕುಮಾರಿ ವರ್ಮಾ ಎಂಬ ಮಹಿಳೆ ತನ್ನ ಮಗಳ ಮದುವೆ ಐಸಿಯು ವಾರ್ಡ್ ನಲ್ಲಿ ನಡೆದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪೂನಂ ಅವರು ತಮ್ಮ ಮಗಳು ಚಾಂದಿನಿ ಕುಮಾರಿಗೆ ಇಂಜಿನಿಯರ್ ಆಗಿರುವ ಸುಮಿತ್ ಗೌರವ್ ಅವರೊಂದಿಗೆ ವಿವಾಹ ನಿಶ್ಚಯ ಮಾಡಿದ್ದು, ಆರೋಗ್ಯ ಹದಗೆಟ್ಟಾಗ, ನಿಶ್ಚಿತಾರ್ಥದ ನಿಗದಿತ ದಿನಾಂಕಕ್ಕಿಂತ ಒಂದು ದಿನ

ಐಸಿಯುನಲ್ಲಿ ಮಗಳ ಮದುವೆ ನೋಡುತ್ತಾ ಪ್ರಾಣಬಿಟ್ಟ ತಾಯಿ..!                                    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ

ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕಳೆದ 10 ವರ್ಷಗಳಿಗೂ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದ, ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳ ನವೀಕರಣ ಮಾಡಿಸಿಕೊಳ್ಳಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ಸೂಚಿಸಿದೆ. ಯುಐಡಿಎಐ ಆಧಾರ್ ಕಾರ್ಡ್‍ಗೆ ನೀಡಲಾದ ಪ್ರಮುಖ ದಾಖಲೆಗಳಾದ ನಿವಾಸದ ವಿಳಾಸ ದೃಢೀಕರಣ ಪತ್ರ, ವ್ಯಕ್ತಿಯ ಗುರುತಿನ ದಾಖಲೆಗಳ ಜತೆಗೆ ಇತರೆ ಪ್ರಮುಖ ಮಾಹಿತಿಗಳನ್ನು ಸದ್ಯದ ದಾಖಲೆಗಳಿಗೆ ಅನುಗುಣವಾಗಿ ತಿದ್ದುಪಡಿ ಮಾಡಿಕೊಳ್ಳಬೇಕು. ಎಲ್ಲಾ ಹಳೆಯ ಆಧಾರ್ ನೋಂದಣಿದಾರರು ತಮ್ಮ ದಾಖಲೆಗಳಲ್ಲಿನ

ಆಧಾರ್ ನೋಂದಣಿದಾರರ ದಾಖಲೆಗಳ ನವೀಕರಣ ಕಡ್ಡಾಯ ➤ ಡಿಸಿ Read More »

ಕರಾವಳಿ
crime, arrest, suspected

ಉಡುಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.   ಲೋಕಾಯುಕ್ತ ಬಲೆಗೆ ಬಿದ್ದ ಸರಕಾರಿ ನೌಕರನನ್ನು ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಎಂದು ಗುರುತಿಸಲಾಗಿದೆ. ಇವರು ವ್ಯಕ್ತಿಯೊಬ್ಬರಿಗೆ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ 10 ಸಾವಿರ ರೂ. ಲಂಚ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರುದಾರ 10 ಸಾವಿರ ರೂ. ನೀಡುತ್ತಿದ್ದ ವೇಳೆ ಕಾರ್ಯಾಚರಣೆ

ಉಡುಪಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 21. ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಯುವಕ-ಯುವತಿ ಮೃತಪಟ್ಟ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಯುವಕ-ಯುವತಿ ಅತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರೋಗ್ಯ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ➤ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಹುದ್ದೆಗಳನ್ನು ಭರ್ತಿ ಮಾಡಲು 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗಶಾಲೆ ತಾಂತ್ರಿಕ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.   ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗದ ವಿಶೇಷ ನೇಮಕಾತಿ ಸಮಿತಿಯ ಜಿಲ್ಲಾ ಆರೋಗ್ಯ

ಆರೋಗ್ಯ ಇಲಾಖೆಯಲ್ಲಿ 550ಕ್ಕೂ ಹೆಚ್ಚು ಹುದ್ದೆಗಳು ➤ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ Read More »

ಕರ್ನಾಟಕ

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಕೊಳೆತ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ವರದಿಯಾಗಿದೆ. ಎಂದಿನಂತೆ ಸೊಪ್ಪು ತರಲು ಗುಡ್ಡಕ್ಕೆ ತೆರಳಿದ ಸ್ಥಳೀಯರಿಗೆ ಮೊದಲು ಮೊಬೈಲ್ ಹಾಗೂ ಟ್ರಾವೆಲ್ ಬ್ಯಾಗ್ ಕಾಣಿಸಿದ್ದು, ಅಕ್ಕಪಕ್ಕ ಪರಿಶೀಲನೆ ನಡೆಸಿದಾಗ ಪಕ್ಕದಲ್ಲಿ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಅಪರಿಚಿತ ಮೃತದೇಹ ನೆಲದಲ್ಲಿ ಬಿದ್ದುಕೊಂಡಿತ್ತು ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ಅಪರಿಚಿತ ಮೃತದೇಹ ಪತ್ತೆ ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top