newskadaba

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಆಸಿಡ್ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಬಡಗನ್ನೂರು ಗ್ರಾಮದ ಸಂಪಿಗೆಮಜಲು ವ್ಯಕ್ತಿಯೋರ್ವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದ ಘಟನೆ ವರದಿಯಾಗಿದೆ. ಮೃತರನ್ನು ಬಡಗನ್ನೂರು ಗ್ರಾಮದ ಸಂಪಿಗೆಮಜಲು ನಿವಾಸಿ ವೆಂಕಪ್ಪ ಗೌಡ ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಜ.10ರಂದು ರಬ್ಬರ್ ಹಾಲಿಗೆ ಮಿಕ್ಸ್ ಮಾಡಲೆಂದು ತಂದಿರಿಸಿದ್ದ ಆಸಿಡ್ ಅನ್ನು ಸೇವಿಸಿದ್ದು, ಇದನ್ನು ಗಮನಿಸಿದ ಪತ್ನಿ ಹೇಮಲತಾ ಮತ್ತು ಮನೆ ಮಂದಿ ತಕ್ಷಣವೇ ವೆಂಕಪ್ಪ ಗೌಡರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ಬಳಿಕ […]

ಪುತ್ತೂರು: ಆಸಿಡ್ ಸೇವಿಸಿ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಾಪು, ಜ. 12. ಅಡಿಕೆ ಸಾಗಾಟದ ಟೆಂಪೋ ವಾಹನವೊಂದು ರಾ.ಹೆ 66ರ ಫ್ಲೈ ಓವರ್ ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಸಿದ್ದಾಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಟೆಂಪೋದ ಟಯರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೋ ಮಗುಚಿಬಿದ್ದಿದೆ. ಘಟನೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಟಯರ್ ಬ್ಲಾಸ್ಟ್ ಆಗಿ ಅಡಿಕೆ ಸಾಗಾಟದ ಟೆಂಪೋ ಪಲ್ಟಿ..! ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ರಾಜ್ಯದಾದ್ಯಂತ ಆರೋಗ್ಯ ಇಲಾಖೆ ನೀಡುತ್ತಿರುವ ಕೊರೋನಾ ವರದಿಯ ಪ್ರಕಾರ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದ್ದು, ಈ ಹಿನ್ನೆಲೆ ರಾಜ್ಯ ಸರಕಾರ ಹೆಚ್ಚುವರಿ ನಿಯಂತ್ರಣವನ್ನು ಜಾರಿಗೊಳಿಸಿದೆ. ಈ ಕುರಿತು ಸಿಎಂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ಪ್ರತಿಭಟನೆ, ಧರಣಿ ಮೊದಲಾದವುಗಳನ್ನು ನಿಷೇಧಿಸಿದ್ದು, ಇದು ಜ. 31ರ ವರೆಗೆ ಇರಲಿದೆ. ಇನ್ನು ಶಾಲೆಗಳನ್ನು ಮುಚ್ಚುವ ನಿರ್ಧಾರದ ಕುರಿತು ಜಿಲ್ಲಾಧಿಕಾರಿಗೆ ಅಧಿಕಾರ

ಕೊರೋನಾ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆ- ಜ. 31ರ ವರೆಗೆ ನಿರ್ಬಂಧ ಮುಂದುವರಿಕೆ ➤ ಸಿಎಂ Read More »

ಕರಾವಳಿ

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಆರೋಪಿಯ ವಿರುದ್ದ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕಳಂಜಿಬೈಲ್ ನಿವಾಸಿ ನಾಸಿರ್ ಅಲಿಯಾಸ್ ಸುನಾಮಿ ನಾಸಿರ್ ಎಂದು ಗುರುತಿಸಲಾಗಿದೆ. ಈತ ಜ. 6ರಂದು ದೂರುದಾರ ಮಹಿಳೆಯ ಅಪ್ರಾಪ್ತ ಮಗಳು ಮನೆಯ ಹೊರಗಡೆ ನಿಂತಿದ್ದ ವೇಳೆ ಆರೋಪಿ ಆಕೆಯ ಬಳಿ ಬಂದು 500 ರೂ. ಹಾಗೂ ಮೊಬೈಲ್ ಕೈಗೆ ನೀಡಿ ಆಕೆಯನ್ನು

ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ…! ➤ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಕೆಮಿಕಲ್ ಸೋರಿಕೆಯಾಗಿ ಇಪ್ಪತ್ತು ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರ ಪೈಕಿ 20 ಜನರು ಅಸ್ವಸ್ಥಗೊಂಡಿದ್ದು ಇವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.    

ಮಂಗಳೂರು: ಸೀಫುಡ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಸೋರಿಕೆ ➤ 20 ಮಂದಿ ಅಸ್ವಸ್ಥ- ಆಸ್ಪತ್ರೆಗೆ ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 11. ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 70 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಹನೂರು ವಡಕೆಹಳ್ಳದಲ್ಲಿ ನಡೆದಿದೆ. ಶಾಲಾ ಮಕ್ಕಳು ಸೇವಿಸಿದ್ದ ಬಿಸಿಯೂಟದಲ್ಲಿ ಹಲ್ಲಿಯೊಂದು ಸತ್ತು ಬಿದ್ದಿರುವುದಾಗಿ ಹೇಳಲಾಗಿದ್ದು, ಅಸ್ವಸ್ಥ ಮಕ್ಕಳನ್ನು ಕೌದಲ್ಲಿಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 70 ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿ ವಾಂತಿ ಮಾಡುವುದನ್ನು ಕಂಡ ಇತರ ವಿದ್ಯಾರ್ಥಿಗಳು ಊಟ ಸೇವಿಸಿಲ್ಲ ಎಂದು ತಿಳಿದುಬಂದಿದೆ.

ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥ..! ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 11. ಅಂಚೆ ಇಲಾಖೆಯ ಪಾರ್ಸೆಲ್ ಸಾಗಾಟದ ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುಬೆ ಢಿಕ್ಕಿ ಸಂಭವಿಸಿದ ಪರಿಣಾಮ ಟಾಟಾ ಏಸ್ ಚಾಲಕ ಗಂಭೀರ ಗಾಯಗಿಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ನೆಹರೂನಗರ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇವರು ಸುಬ್ರಹ್ಮಣ್ಯದಿಂದ ನೆಟ್ಟಣ, ಕಡಬ, ಅಲಂಕಾರು, ನೆಲ್ಯಾಡಿಯಿಂದ ಅಂಚೆ ಇಲಾಖೆಯ ಬ್ಯಾಗ್ ಕಲೆಕ್ಟ್ ಮಾಡಿಕೊಂಡು ಪುತ್ತೂರಿಗೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ

ನೆಲ್ಯಾಡಿ: ಟಾಟಾ ಏಸ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ➤ ಓರ್ವ ಗಂಭೀರ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಕೋವಿಡ್ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಪ್ರಸ್ತಾಪವಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸಂಗವೇ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಕೊರೋನ ಸೋಂಕು ಹೆಚ್ಚಳವಾದುದರಿಂದ ಅಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಈ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಫ್ಲೈನ್ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ Read More »

ಕರ್ನಾಟಕ

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಕಡಬ ತಾಲೂಕು ಯುವಜನ ಒಕ್ಕೂಟ ಇದರ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಇವರು ಆಯ್ಕೆಯಾಗಿದ್ದಾರೆ. ಇವರು ಕೇನ್ಯ ಗೆಜ್ಜೆಮನೆ ನಿವಾಸಿಯಾಗಿದ್ದು, ಹಲವಾರ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಡಿದ್ದಲ್ಲದೇ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.  

ಕಡಬ: ಯುವಜನ ಒಕ್ಕೂಟ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top