newskadaba

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ಪಾಲಿಕೆಯ ಮಾಜಿ ಸದಸ್ಯೆಯ ಹತ್ಯೆಯಾಗಿದೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು […]

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ Read More »

ಕ್ರೈಮ್ ನ್ಯೂಸ್

ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.24: 3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ.  ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ

ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ Read More »

ಕರ್ನಾಟಕ

ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ ಸುಮಂಗಲಮ್ಮ ಇನ್ನಿಲ್ಲ

(ನ್ಯೂಸ್ ಕಡಬ) newskadaba,ಚಿತ್ರದುರ್ಗ ಜೂ.23: ರಾಜ್ಯದಲ್ಲಿ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸುಮಂಗಲಮ್ಮ ವೀರಭದ್ರಪ್ಪ(69) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಇಂದು ಬೆಳಗಿನ ಜಾವ 3.30ಕ್ಕೆ ಸುಮಂಗಲಮ್ಮ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಮಕ್ಕಳಿಗೆ ಶಿಕ್ಷಣ ಕೊಡಿಸಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಬೆಳೆಸಿದ್ದಲ್ಲದೆ, ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದ ಸುಮಂಗಲಮ್ಮ,

ರಾಜ್ಯದಲ್ಲೇ ಮೊದಲು ಟ್ರ್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳೆ ಸುಮಂಗಲಮ್ಮ ಇನ್ನಿಲ್ಲ Read More »

ಕರಾವಳಿ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.23: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.   ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.23: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ Read More »

ಕರ್ನಾಟಕ

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು

(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ

ಮಂಗಳೂರು: ನವಮಂಗಳೂರು ಬಂದರ್ (ಎನ್​​ಎಂಪಿಟಿ)ನಲ್ಲಿ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ಸಮುದ್ರಪಾಲಾಗಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಲಾರಿ ಸಹಿತ ಕ್ಲೀನರ್ ಭೀಮಪ್ಪ(22) ಅವರ ಮೃತದೇಹವೂ ಇದೀಗ ಪತ್ತೆಯಾಗಿದೆ. ಭೀಮಪ್ಪ ಲಾರಿ ಸಹಿತ ಸಮುದ್ರದಲ್ಲಿ ಕಣ್ಮರೆಯಾಗಿದ್ದರು. ಶೋಧ ಮುಂದುವರಿದಿತ್ತು. ಇದೀಗ ಲಾರಿಯೊಳಗಡೆಯೇ ಇದ್ದ ಅವರ ಮೃತದೇಹವನ್ನು ನೀರಿನಿಂದ ಮೇಲೆತ್ತಲಾಗಿದೆ.ಎನ್​​ಎಂಪಿಟಿ ಬಂದರಿಗೆ ಹಡಗಿನಲ್ಲಿ ಬರುವ ಸರಕು ಸಾಗಾಟದ ಕಂಟೈನರ್ ಲಾರಿ ನಿನ್ನೆ ರಾತ್ರಿ 10.30ಕ್ಕೆ ಎನ್ಎಂಪಿಟಿಯ 14ನೇ ಬರ್ತ್​ನಲ್ಲಿ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿತ್ತು. ಇದನ್ನು ಟಗ್ ಬೋಟ್ ಸಿಬ್ಬಂದಿ ನೋಡಿ

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ Read More »

ಕರಾವಳಿ

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಉಡುಪಿ ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 117 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65468 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 322 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63340 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 1 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 372 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1756 ಸಕ್ರಿಯ

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 542 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 89249 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 637 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 81167 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 14 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1062 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 7017 ಸಕ್ರಿಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ Read More »

ಕರಾವಳಿ
Scroll to Top