newskadaba

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ

(ನ್ಯೂಸ್ ಕಡಬ) newskadaba.com ಹೆಬ್ರಿ, ಎ. 07. ಹುಲಿಯ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಸೋಮೇಶ್ವರ ಚೆಕ್ ಪೋಸ್ಟ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಬೈಕ್‍ ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಹುಲಿಯ ಉಗುರು, ಚರ್ಮ ಅಲ್ಲದೇ ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚರ್ಮ ಮತ್ತು ಉಗುರುಗಳನ್ನು ಪರೀಕ್ಷೆಗಾಗಿ ಫೋರೆನ್ಸಿಕ್ ಪ್ರಯೋಗಾಯಲಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ […]

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 07. ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಇಲ್ಲಿನ ಜ್ಯೋತಿ ವೃತ್ತದ ಬಳಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ ಡಿಕ್ಕಿ

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಎ. 07. ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ವಿಟ್ಲ ಪೊಲೀಸರು ಕೊಡಂಗಾಯಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಸಿರ್ ಎಂದು ಗುರುತಿಸಲಾಗಿದೆ. ವಿಟ್ಲ ಠಾಣಾ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡವು ವಿಟ್ಲದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಸಾಲೆತ್ತೂರು ಕಡೆಯಿಂದ ಬಂದ ಬಿಳಿ ಬಣ್ಣದ ಆಲ್ಟೋ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕಾರಿನಲ್ಲಿ ಚಾಲಕ ಮಾತ್ರವೇ ಇದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಪ್ಲಾಸ್ಟಿಕ್

ವಿಟ್ಲ: ಅಕ್ರಮ ಗಾಂಜಾ ಸಾಗಾಟ ➤ ಓರ್ವ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಅವರು ಶಿಸ್ತುಕ್ರಮ ಕೈಗೊಂಡಿದ್ದು, ತಪ್ಪಿತಸ್ಥ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಬಾರೊಂದರಲ್ಲಿ ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳುವಂತರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಆಯುಕ್ತರು ಸೂಚಿಸಿದ್ದು,‌ ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಕಾರಣ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ Read More »

ಕರಾವಳಿ, ಕರ್ನಾಟಕ

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 30. ತಾಲೂಕು ಆರೋಗ್ಯಾಧಿಕಾರಿಯಾಗಿ 2010ರಿಂದ ಕರ್ತವ್ಯದಲ್ಲಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್ ಅವರು ನಾಳೆ(ಜ. 31) ನಿವೃತ್ತಿ‌ ಹೊಂದಲಿದ್ದಾರೆ. ಕುಕ್ಕೇ ಸುಬ್ರಹ್ಮಣ್ಯದವರಾದ ಇವರು ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಹುಟ್ಟೂರಲ್ಲೇ ಪಡೆದು, ವೈದ್ಯಕೀಯ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದರು. ಎಂ.ಬಿ.ಬಿ.ಎಸ್ ಬಳಿಕ ಮಂಡ್ಯದಲ್ಲಿ ಕೆಲ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. 1995ರಲ್ಲಿ ಸರಕಾರಿ ಸೇವೆಗೆ ನೇಮಕಾತಿ ಪಡೆದ ಇವರು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಬಳಿಕ 2006ರಲ್ಲಿ ತಾಲೂಕು

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 29. ಕಳೆದ ಕೆಲವು ದಿನಗಳಿಂದ ಪ್ಲಾಸ್ಟಿಕ್ ನಿಷೇಧದ ಕೂಗು ಕೇಳಿಬರುತ್ತಿದ್ದರೂ ಯಾರೂ ಇದನ್ನು ಪರಿಗಣಿಸದೇ ಇರುವುದರ ಹಿನ್ನೆಲೆ ನಿಷೇಧ ಹೇರಿದರೂ ಕಂಡಕಂಡಲ್ಲಿ ಪ್ಲಾಸ್ಟಿಕ್ ಬಿಸಾಡುವುದನ್ನು ವಿರೋಧಿಸಿ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿಯನ್ನು ಸುಳ್ಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ಸುಳ್ಯ ವಲಯ ವತಿಯಿಂದ ‘ಶುಚಿಯಾದ ಪರಿಸರಕ್ಕಾಗಿ ನಾಳಿನ ತಲೆಮಾರಿಗಾಗಿ ಪ್ಲಾಸ್ಟಿಕ್ ಮುಕ್ತರಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಜ.31ರಿಂದ ಫೆ.7 ರ ವರೆಗೆ ನಡೆಯಲಿದೆ. ಜನವರಿ 31 ರಂದು ಸುಳ್ಯದ ಎಲಿಮಲೆಯಲ್ಲಿ ದ.ಕ.ಜಿಲ್ಲಾ ವಿಖಾಯ ಚೇರ್ಮನ್

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ Read More »

ಕರಾವಳಿ, ಕರ್ನಾಟಕ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ

ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 28. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆಯನ್ನು ಇಂದು ಇಲ್ಲಿ‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದ ಧ್ವಜಾರೋಹಣವನ್ನು ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಷಾ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಿಡಿಯೋ ಮುಖಾಂತರ ರಾಜ್ಯಾಧ್ಯಕ್ಷರಾದ ಫಯಾಜ್ ದೊಡ್ಡಮನೆ ಅವರು ಸಂದೇಶ ಭಾಷಣವನ್ನು ಮಾಡಿದರು. ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಂಡಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ

ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top