newskadaba

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಜ. 04. ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್‌.ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ, ಹಲವಾರು ವರ್ಷಗಳಿಂದ ಮೆಸ್ಕಾಂ ಗೆ ಎಸ್‌.ಡಿಪಿಐ ಸೇರಿದಂತೆ ಹಲವಾರು ನಾಗರಿಕರು […]

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 04. ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಇಂದು ಸಂಜೆ ಬಂದ್ಯೋಡು- ಪೆರ್ಮುದೆ ರಸ್ತೆಯ ಮೀಪಿರಿ ಎಂಬಲ್ಲಿ ನಡೆದಿದೆ.   ಮೃತಪಟ್ಟ ಮಗುವನ್ನು ಕಯ್ಯಾರ್ ಪಿಲಿಯಂದೂರಿನ ರಿಜ್ವಾನ್ ಎಂದು ಗುರುತಿಸಲಾಗಿದೆ. ತಾಯಿ ಹಾಗೂ ಮಗು ಬಂದ್ಯೋಡು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದ ಟಯರ್ ಕಳಚಿದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು ಗಂಭೀರ ಗಾಯಗೊಂಡ ಮಗು ಮೃತಪಟ್ಟಿದೆ. ತಾಯಿ ಫಾಯಿಸಾ ಮತ್ತು

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ ಶಾಸಕ ಕಮರುದ್ದೀನ್ ಗೆ ಮೂರು ಪ್ರಕರಣಗಳ ಜಾಮೀನು ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಕೊಚ್ಚಿ, ಜ.04. ಹೂಡಿಕೆದಾರರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ಶಾಸಕ ಕಮರುದ್ದೀನ್ ಅವರಿಗೆ ಕೇರಳ ಹೈಕೋರ್ಟ್ ಮೂರು ಪ್ರಕರಣಗಳಲ್ಲಿ ಮಾತ್ರ ಜಾಮೀನು ನೀಡಿದೆ. ಶಾಸಕ ಕಮರುದ್ದೀನ್ ವಿರುದ್ದ ಫ್ಯಾಷನ್ ಗೋಲ್ಡ್ ಸಂಸ್ಥೆಯು ಗ್ರಾಹಕರಿಂದ ಹಣ ಪಡೆದು ಚಿನ್ನ ನೀಡಿಲ್ಲ ಎಂಬುವುದಾಗಿ ಆರೋಪಿಸಿತ್ತು. ಇವರ ವಿರುದ್ದ ಈಗಾಗಲೇ 100ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

ಮಂಜೇಶ್ವರ ಶಾಸಕ ಕಮರುದ್ದೀನ್ ಗೆ ಮೂರು ಪ್ರಕರಣಗಳ ಜಾಮೀನು ನೀಡಿದ ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 04. ಉದ್ಯಪಿಯೋರ್ವರ ಮೃತದೇಹವು ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಮಾಶಂಕರ್ (45) ಎಂದು ಗುರುತಿಸಲಾಗಿದೆ. ಇವರ ಜೊತೆ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದು, ಮೃತದೇಹದ ಬಳಿಯಲ್ಲಿ ಇನ್ಸುಲಿನ್ ಹಾಗೂ ಔಷಧಿಗಳ ಬಾಟಲ್ ಹಾಗೂ ಡೆತ್ ನೋಟ್ ಲಭ್ಯವಾಗಿದೆ. ಸಾಲ ಹಿಂತಿರುಗಿಸುವಂತೆ ಸಾಲಗಾರರು ಪೀಡಿಸುತ್ತಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾರೆ. ಕಾಣೆಯಾಗಿರುವ ಇವರ ಪತ್ನಿಯ ಹುಡುಕಾಟ ಮುಂದುವರೆದಿದ್ದು, ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ಕಾಣೆಯಾದ ಘಟನೆ ಕರೋಪಾಡಿಯಿಂದ ವರದಿಯಾಗಿದೆ. ಬಾಲಕನನ್ನು ಹನುಮಂತ ಎಂಬವರ ಮಗ ಗಣೇಶ್ (15) ಎಂದು ಗುರುತಿಸಲಾಗಿದೆ. ಕೊರೋನಾ ಕಾರಣದಿಂದ ಶಾಲೆಗೆ ರಜೆ ಇದ್ದ ವೇಳೆ ಆನ್-ಲೈನ್ ಕ್ಲಾಸಿಗೆಂದು ಮೊಬೈಲ್ ತಗೊಂಡು ಪಬ್ ಜೀ ಆಟ ಆಡುತ್ತಿದ್ದುದ್ದನ್ನು ಗಮನಿಸಿದ ತಂದೆಯು ಬುದ್ದಿವಾದ ಹೇಳಿದ್ದರು. ಇದನ್ನು ಲೆಕ್ಕಿಸದೇ ಇದ್ದ ಕಾರಣ ಶಾಲಾ ಶಿಕ್ಷಕರಿಗೆ ವಿಷಯ ತಿಳಿಸಿ ಗಣೇಶನಿಗೆ ಬುದ್ದಿವಾದ ಹೇಳಿದ ಶಿಕ್ಷಕರು ಸೋಮವಾರ ಶಾಲೆಗೆ ಬರುವಂತೆ ಹೇಳಿದ್ದರು. ಮಧ್ಯಾಹ್ನ

ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ Read More »

ಕರಾವಳಿ, ಕರ್ನಾಟಕ

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ನಾದಿನಿಯ ಮೇಲೆ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಶೀರ್ ಎಂದು ಗುರುತಿಸಲಾಗಿದೆ. ಈತನ ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಆಕೆಯನ್ನು ಬಾವನೇ ಅತ್ಯಾಚಾರಗೈದಿದ್ದಲ್ಲದೇ ಆಕೆಯ ನಗ್ನ ಫೋಟೊಗಳನ್ನು ಸೆರೆಹಿಡಿದು ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಕಾರ್ಯಕರ್ತರ ಪಾಕಿಸ್ತಾನ ಝಿಂದಾಬಾದ್ ಘೋಷಣೆಯನ್ನು ಖಂಡಿಸಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 04. ಉಜಿರೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ನಡುವೆ  ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಜ್ಯೋತಿ ವೃತ್ತದ ಬಳಿ  ಪ್ರತಿಭಟಿಸಲಾಯಿತು. ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಅಧ್ಯಕ್ಷ ಹಸನ್ ಸಿರಾಜ್ ಮಾತನಾಡಿ, ಉಜಿರೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವ ಬಿಜೆಪಿ ಕಾರ್ಯಕರ್ತ ಪವನ್ ಧರ್ಮಸ್ಥಳ ಈತನನ್ನು ಶೀಘ್ರವೇ ಬಂಧಿಸಬೇಕೆಂದು

ಬಿಜೆಪಿ ಕಾರ್ಯಕರ್ತರ ಪಾಕಿಸ್ತಾನ ಝಿಂದಾಬಾದ್ ಘೋಷಣೆಯನ್ನು ಖಂಡಿಸಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಠ್ಮಂಡು, ಜ. 04. ಅಕ್ರಮವಾಗಿ ನೇಪಾಳದ ಕರೆನ್ಸಿ ಆರೋಪದಡಿಯಲ್ಲಿ ಭಾರತೀಯ ನಾಗರಿಕ ಸೇರಿದಂತೆ ಇಬ್ಬರು ಆರೋಪಿಗಳನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಭಾರತದ ಗೋರಖ್ ಪುರದ ನಿವಾಸಿ ಅಮಿತ್ ಕುಮಾರ್ ಗುಪ್ತಾ (30) ಹಾಗೂ ಕಪಿಲವಸ್ತು ಜಿಲ್ಲೆಯ ಸಂಗಮ್ ತರು (22) ಎಂದು ಗುರುತಿಸಲಾಗಿದೆ. ಪ್ರತಿನಿತ್ಯದಂತೆ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರಿದ್ದ ಕಾರಿನಲ್ಲಿ ಸುಮಾರು 1.47 ಕೋಟಿ ನೇಪಾಳ ಕರೆನ್ಸಿ ಪತ್ತೆಯಾಗಿದ್ದು, ಇದನ್ನು ಮೂರು ಚೀಲದಲ್ಲಿ ತುಂಬಿ ಕಾರಿನಲ್ಲಿ

ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜ. 04. ಇಲ್ಲಿನ ತಾಲೂಕು ಕಛೇರಿಯ ಭೂಮಿ ಕೇಂದ್ರದಲ್ಲಿ ಜನವರಿ 8ರ ವರೆಗೆ ಪಹಣಿ (ಆರ್‌ಟಿಸಿ)ಗಳ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿದ್ದು, ಭೂಮಿ ಕೇಂದ್ರದ ಎಲ್ಲಾ ಕೆಲಸಗಳು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಿ ಆರ್.ಟಿ.ಸಿಗಳನ್ನು ಆನ್‌-ಲೈನ್ ಸೆಂಟರ್‌ಗಳಲ್ಲಿ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 08ರವರೆಗೆ ಕಡಬ ತಾಲೂಕು ಭೂಮಿ ಕೇಂದ್ರದಲ್ಲಿ ಆರ್.ಟಿ.ಸಿ. ವಿತರಣೆ ಸ್ಥಗಿತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top