newskadaba

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ […]

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ

ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕುರುಂಜಿ ಪುತ್ಥಳಿಗೆ ಹಾರಾರ್ಪಣೆ Read More »

ಕರಾವಳಿ

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ಅಣಂಗೂರುನಲ್ಲಿ ನಡೆದಿದೆ. ಅಣಂಗೂರು ಗ್ರೀನ್ ಪಾರ್ಕ್ ಪ್ಲಾಟ್‌ನ ತ್ವಾಹಿರ್ ಬಾನುರವರ ಪುತ್ರ ಮುಹಮ್ಮದ್ ಇಬುಹಾ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಬಾಲಕ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದಾಗ ಈ ಘಟನೆ ನಡೆದಿದೆ.ಗ್ರಿಲ್ಸ್‌ಗೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.! Read More »

ಕರ್ನಾಟಕ

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.27: ತನ್ನ ಚಿಕ್ಕಪ್ಪನ ಅಪ್ರಾಪ್ತ ಮಗಳನ್ನು ಅತ್ಯಾಚಾರ ಎಸಗಿದ ಆರೋಪದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಲ್ಮಡ್ಕ ಗ್ರಾಮದ ವಾರ್ಡ್–1ರಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂದು ಪೊಲೀಸ್ ಮೂಲಗಳು ಮಾಹಿತಿ‌ ನೀಡಿದೆ.ಆರೋಪಿ ತನ್ನ ಚಿಕ್ಕಪ್ಪನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಆರೋಪಿಯನ್ನು ಚುನಾವಣೆಯ

ಬೆಳ್ಳಾರೆ :ಚಿಕ್ಕಪ್ಪನ‌ ಮಗಳನ್ನೇ ಅತ್ಯಾಚಾರಗೈದ ಪ್ರಕರಣ ➤ ಬಿಜೆಪಿ ಬೆಂಬಲಿತ ಗ್ರಾಪಂ ಅಭ್ಯರ್ಥಿ ಅರೆಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಡಿವೈಎಫ್‌ಐ ಕಾರ್ಯಕರ್ತನ ಕೊಲೆ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್‌ ಅವರ ಕೊಲೆ ಖಂಡಿಸಿ ಡಿವೈಎಫ್‌ಐ ಕೊಡ್ಲಮೊಗರು ಗ್ರಾಮ ಸಮಿತಿ ನೇತೃತ್ವದಲ್ಲಿ ಬಾಕ್ರಬೈಲ್‌ ಪೇಟೆಯಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯ, ಸಿಪಿಎಂ ಮುಖಂಡ ಮೊಯ್ದಿನ್ ಕುಂಞಿ ತಲಕ್ಕಿ, ಕೇರಳದ ಎಲ್‌ಡಿಎಫ್ ಸರಕಾರದ ಸಾಧನೆಯನ್ನು ದೇಶ- ವಿದೇಶಗಳಲ್ಲಿ ಕೊಂಡಾಡುವ ಈ ಸಂದರ್ಭ ಹತಾಶೆಗೊಂಡಿರುವ ಮುಸ್ಲಿಂ ಲೀಗ್, ಅಮಾಯಕ ಮುಸ್ಲಿಂ ಯುವಕರನ್ನೇ ಟಾರ್ಗೆಟ್ ಮಾಡಿ ಕೊಲೆ ರಾಜಕೀಯ ನಡೆಸಿರುವುದು ಖಂಡನೀಯ ಎಂದರು.ಸಿಪಿಎಂ

ಡಿವೈಎಫ್‌ಐ ಕಾರ್ಯಕರ್ತನ ಕೊಲೆ ಖಂಡಿಸಿ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27:ಇಲ್ಲಿನ ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ‌ ಪತ್ರ ಹಂಚುತ್ತಿರುವುದು ಪತ್ತೆಯಾಗಿದೆ. ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ಗ್ರಾಮ ಪಂಚಾಯತ್ ಚುನಾವಣೆಯ ಮತಗಟ್ಟೆಗಳನ್ನು ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾಗ ಮತದಾರರೊಬ್ಬರ ಕೈಯಲ್ಲಿದ್ದ ಚೀಟಿ ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಚೀಟಿಯ ಬಗ್ಗೆವ್ಯಕ್ತಿಯನ್ನು ವಿಚಾರಿಸಿ ಬೂತ್ ಗೆ ದಾಳಿ ಮಾಡಿದಾಗ ಟೇಬಲ್ ನ ಅಡಿಯಲ್ಲಿ ಪಕ್ಷದ ಚಿಹ್ನೆ ಇರುವ ಅಭ್ಯರ್ಥಿಯ ಚೀಟಿನ ಒಂದು ಕಟ್ಟು ಪತ್ತೆಯಾಗಿದೆ.ಈ ಸಂಬಂಧ ಕಾನೂನು ಕ್ರಮ ಜರಗಿಸುವಂತೆ

ಪುತ್ತೂರು: ಚುನಾವಣಾಧಿಕಾರಿಯಿಂದ ಮತಗಟ್ಟೆಗಳ ಭೇಟಿ ➤ ಅಭ್ಯರ್ಥಿಗಳ ಚಿಹ್ನೆ ಇರುವ ಪತ್ರ ಹಂಚಿಕೆ ಪತ್ತೆ Read More »

ಕರಾವಳಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಡಿ.27:  ಕರ್ತವ್ಯ ನಿರತ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಭಾಗದಲ್ಲಿ ಆಶಾ ಕಾರ್ಯಕರ್ತೆ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಎಂಬವರು ಹಲ್ಲೆಗೊಳಗಾದವರು. ಡಿ.16 ರಂದು ಉಳಿಪ್ಪು ನಿವಾಸಿ ಜಿನ್ನಪ್ಪ ಗೌಡ ಎಂಬವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಿ.21ರಂದು ಮನೆಗೆ ಭೇಟಿ

ಕಡಬ: ಕೊರೊನಾ ವಾರಿಯರ್‌ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.27: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಕೊಪ್ಪರಿಗೆ ಇಳಿಸುವುದರ ಮೂಲಕ ಮುಕ್ತಾಯಗೊಂಡಿದೆ. ಕಳೆದ ದಿನ ದೇವಾಲಯದ ಹೊರ ಅಂಗಳದಲ್ಲಿ ನೀರು ತುಂಬಿಸಿ ಆ ನೀರಿನಲ್ಲಿ ದೇವರ ಬಂಡಿ ಉತ್ಸವ ನಡೆಯಿತು.ಇದು ನೀರಿನಲ್ಲಿ ಬಂಡಿ ಉತ್ಸವ ಎಂದೇ ಪ್ರಸಿದ್ದಿ. ಬೇರೆ ಯಾವುದೇ ದೇಗುಲದಲ್ಲಿ ನಡೆಯದ ಈ ನೀರು ಬಂಡಿ ಉತ್ಸವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರ ನಡೆಯುತ್ತಿರುವುದು ವಿಶೇಷ. ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಈ ಬಾರಿಯ ಚಂಪಾ

ಕುಕ್ಕೆಯಲ್ಲಿ ನೀರುಬಂಡಿ ಉತ್ಸವ ➤ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಸಂಪನ್ನ Read More »

ಕರಾವಳಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: ಕಡಬ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ 114 ಗ್ರಾಮ ಪಂಚಾಯತ್ ನ 1,500 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಬೂತ್ ಗಳಲ್ಲಿ ಬೆಳಗ್ಗಿನ ಜಾವ ಮತದಾನ ಮಾಡಲು ಉದ್ದದ ಸರತಿ ಸಾಲು ಕಂಡು ಬಂದಿದೆ. ಸುಳ್ಯ ಶಾಸಕ ಎಸ್.ಅಂಗಾರ ಅವರು ಅಮರಮುಡ್ನೂರು ಗ್ರಾಮ ಪಂಚಾಯತ್ ನ ಮೂರನೇ ವಾರ್ಡ್ ದೊಡ್ಡತೋಟ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಮತ ಚಲಾಯಿಸಿದರು. ಕುಟುಂಬ ಸಮೇತರಾಗಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದೆ Read More »

ಕರಾವಳಿ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಕೂಳೂರು ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಿಳೆಯನ್ನು ಕೃಷ್ಣಾಪುರದ ನಿವಾಸಿ, ವಿವಾಹಿತೆ ಜುಲೈಖಾ ಎಂದು ಗುರುತಿಸಲಾಗಿದೆ. ಮಹಿಳೆ ತಾನು ಬಂದಿದ್ದ ದ್ವಿಚಕ್ರವಾಹನವನ್ನು ಸೇತುವೆ ಬಳಿ ನಿಲ್ಲಿಸಿ ಏಕಾಏಕಿ ಸೇತುವೆಯಿಂದ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈಕೆ ನದಿಗೆ ಹಾರಿದ್ದನ್ನು ಗಮನಿಸಿ ಕೂಡಲೇ ಕಾರ್ಯಪ್ರವೃತ್ತರಾದ ಮಂಗಳೂರು ಸಂಚಾರ ಉತ್ತರ ಠಾಣೆ ಇಂಟರ್ ಸೆಪ್ಟರ್ ವಾಹನದ ಎಎಸ್‌ಐ ಮಂಜುನಾಥ ಹಾಗೂ ಸಿಬಂದಿ ಈಕೆಯ ರಕ್ಷಣೆಗೆ

ಮಂಗಳೂರು :ಸೇತುವೆಯಿಂದ ನದಿಗೆ ಹಾರಿದ ಮಹಿಳೆ ➤ ಸ್ಥಳೀಯರು, ಪೊಲೀಸರಿಂದ ರಕ್ಷಣೆ Read More »

ಕರಾವಳಿ
Scroll to Top