newskadaba

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ […]

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.   ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ Read More »

ಕರಾವಳಿ

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.18: ಉಜಿರೆ ನಿವಾಸಿ ಎಂಟು ವರ್ಷದ ಮಗುವಿನ ಅಪಹರಣ ಪ್ರಕರಣ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಇನ್ನಷ್ಟು ಚುರುಕಾಗಿದೆ. ಅಪಹರಣ ಪ್ರಕರಣ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಲಕ್ಷ್ಮೀಪ್ರಸಾದ್ ಹೇಳಿದರು.   ಅಪಹರಣಕ್ಕೆ ಒಳಗಾದ ಬಾಲಕನ ಕುಟುಂಬಸ್ಥರನ್ನು ಭೇಟಿಯಾದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಅಪಹರಣಕಾರರು ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದಾರೆ ಎಂಬ ಕುರಿತು

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ Read More »

ಕರಾವಳಿ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.18: ದೆಹಲಿಯ ಆರೆಂಜ್ ಗ್ಲೋಬಲ್ ಒಲಿಂಪಿಯಾಡ್ ಅವರು 2019-20 ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಯತಿನ್ ಬಿ.ಎಸ್ ರಾಷ್ಟ್ರ ಮಟ್ಟದ ವಿಜ್ಞಾನ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರ್‍ಯಾಂಕ್ ಪಡೆದಿದ್ದಾನೆ. ಈ ಪ್ರಶಸ್ತಿ ರೂ. 40,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಹೊಂದಿದೆ.     ಇವರು ಕಡಬ ನಿವಾಸಿ ನಿವೃತ್ತ ಯೋಧ ಸೇಸಪ್ಪ ಗೌಡ ಮತ್ತು ಪುತ್ತೂರು ಠಾಣೆಯ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್ Read More »

ಕರಾವಳಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಡಿಸೆಂಬರ್ 28 ರೊಳಗೆ ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ತಾಲೂಕು ಸಹಾಯಕ ಕೃಷಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್‌‌‌ ನಿವಾಸಿ ತಾಜುದ್ದೀನ್‌‌ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್‌‌ ಕರೆನ್ಸಿ ಯೂರೊ ಹಾಗೂ ಯುಎಇ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಪಂಜ, ಡಿ.18: ಕೇರ್ ಟ್ರಸ್ಟ್( ರಿ )ಪ್ರೈಮ್ ಎಜುಕೇಶನ್ ತಮಿಳುನಾಡು, ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಪ್ರಶಸ್ತಿ ಪಡೆದು ಹೆಮ್ಮೆ ಗರಿ ಮೂಡಿಸಿದ್ದಾರೆ. ಪ್ರೌಢ ವಿಭಾಗ: ವಿದ್ಯಾರ್ಥಿಗಳಾದ ,ಅಭಿನ್ ಗೌಡ ಪ್ರಥಮ: ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ. ಅಭಿಜ್ಞಾ ಪಿ.ಎಸ್ :ದ್ವಿತೀಯ :ಸೈಂಟ್ ಆನ್ಸ್ ಪ್ರೌಢಶಾಲೆ ಕಡಬ. ಪ್ರಾಥಮಿಕ ವಿಭಾಗ: ಅನ್ವಿತಾ ಸಿ-ಪ್ರಥಮ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ Read More »

ಕರಾವಳಿ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ನಬಾರ್ಡ್ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆಧಾರದಲ್ಲಿ ಲೀಡ್ ಬ್ಯಾಂಕ್ ಮೂಲಕ ಜಿಲ್ಲಾ ಸಾಲ ಯೋಜನೆಯನ್ನು ರೂಪಿಸಿ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಡಿ.ಸಿ.ಸಿ.ಡಿ.ಎಲ್.ಆರ್.ಸಿ ಚೇರ್‍ಮ್ಯಾನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಸೂಚಿಸಿದರು.ಅವರು ಇಂದು ತಮ್ಮ ಕಚೇರಿಯಲ್ಲಿ ನಬಾರ್ಡ್ ವತಿಯಿಂದ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆರ್ಥಿಕ ವರ್ಷ 2021-22ರ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಬ್ಯಾಂಕಿನ ಮ್ಯಾನೇಜರ್‍ಗಳಿಗೆ ವಿವಿಧ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ➤ ಆರು ಮಂದಿ ಗೆಲುವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಸುಳ್ಯ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆಗೆ ಇಂದು ನಡೆದ ಚುನಾವಣೆಯಲ್ಲಿ ಶಿಕ್ಷಕರುಗಳಾದ ದೇವಚಳ್ಳ ಶ್ರೀಧರ ಗೌಡ ಕೆ (148) ನಡುಗಲ್ಲು ಶಾಲೆಯ ಕುಶಾಲಪ್ಪ ಟಿ (147), ಅಮೈಮಡಿಯಾರು ಶಾಲೆಯ ಪದ್ಮನಾಭ ಅತ್ಯಾಡಿ (128), ದೊಡ್ಡತೋಟ ಶಾಲೆಯ ಕುಶಾಲಪ್ಪ ಪಿ (125), ಬಿಳಿಯಾರು ಶಾಲೆಯ ಶೀಲಾವತಿ ಕೆ.ಎನ್. (147), ಕರಿಕ್ಕಳ ಶಾಲೆಯ ಸರೋಜಿನಿ (137) ಮತಗಳನ್ನು ಪಡೆದು ನಿರ್ದೇಶಕರುಗಳಾಗಿ ಆಯ್ಕೆಯಾದರು. ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿರುವ ಸಂಧ್ಯಾ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ➤ ಆರು ಮಂದಿ ಗೆಲುವು Read More »

ಕರಾವಳಿ

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಕೋಟೆ ಎಂಬಲ್ಲಿ ಮನೆಗಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಕಳ್ಳರನ್ನು ಕಾಪು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತರನ್ನು ಮಲ್ಲಾರು ನಿವಾಸಿ ಅಬ್ದುಲ್ ಸತ್ತಾರ್ (38) ಮತ್ತು ಕುತ್ಯಾರು ನಿವಾಸಿ ಅಬ್ದುಲ್ ರಹಮಾನ್ ಪುದಿನ್ ಯಾನೆ ರಹೀಂ (49) ಎಂದು ಗುರುತಿಸಲಾಗಿದೆ.   2012ರ ಜುಲೈ ನಲ್ಲಿ ಮಲಾರು ಗ್ರಾಮದ ಕೋಟೆ ಎಂಬಲ್ಲಿರುವ ಪರ್ವಿನ್ ಬಾಬು ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹಿಂದಿನ ಬಾಗಿಲನ್ನು ಮುರಿದು

ಮಂಗಳೂರು :8 ವರ್ಷಗಳ ಹಿಂದೆ ಮನೆಗಳ್ಳತನ ಮಾಡಿದ ಇಬ್ಬರ ಬಂಧನ.! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top