newskadaba

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.14: ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿ ಸೈಕಲ್ ಕಲಿಯಲು ಹೋದ ಬಾಲಕಿಯೊಬ್ಬಳನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಆಡಳಿತಾಧಿಕಾರಿಯನ್ನು ವಜಾಗೊಳಿಸಲಾಗಿದೆ. ಎಲಿಮಲೆಯ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಬಾಲಕಿಯೊಬ್ಬಲು ತನ್ನ ಗೆಳತಿ ಜತೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ತಿಳಿಸಿ, ಬಳಿಕ ಕೊಠಡಿಗೆ […]

ಸುಳ್ಯ :ಸೈಕಲ್ ಕಲಿಯಲು ತೆರಳಿದ್ದ ಬಾಲಕಿಗೆ ಶಾಲಾ ಆಡಳಿತಾಧಿಕಾರಿಯಿಂದ ಲೈಂಗಿಕ ಕಿರುಕುಳ Read More »

ಕರಾವಳಿ

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ. ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ.

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು Read More »

ಕರಾವಳಿ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14 :ಕುಡಿದ ಮತ್ತಿನಲ್ಲಿ ಟೆಂಪೋ ಟ್ರಾವೆಲರ್ ಚಲಾಯಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಜಿರೆ- ಧರ್ಮಸ್ಥಳ ಮಧ್ಯೆ ಕನ್ಯಾಡಿ ಸಮೀಪದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ರಸ್ತೆ ಮಧ್ಯೆ ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.ಟೆಂಪೋ ಟ್ರಾವೆಲರ್ ನಲ್ಲಿದ್ದ ಚಾಲಕ ಹಾಗೂ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆಸಿ ಸ್ಥಳದಿಂದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ, ರಸ್ತೆ

ಬೆಳ್ತಂಗಡಿ :ಟೆಂಪೋ ಟ್ರಾವೆಲರ್ ಗುದ್ದಿ ವಿದ್ಯುತ್ ಕಂಬ ತುಂಡು ➤ ಪಾನಮತ್ತ ಚಾಲಕ ಎಸ್ಕೇಪ್ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ‌ ನಡೆಯುತ್ತಿದ್ದು, ಮೂರನೇ ದಿನದ ಅಂಗವಾಗಿ ಡಿ.13ರಂದು  88ನೇ ಸರ್ವ ಧರ್ಮ ಸಮ್ಮೇಳನ ಜರುಗಿತು. ವಸತಿ ಸಚಿವ ವಿ. ಸೋಮಣ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ವಿಶ್ವದಲ್ಲೇ ಅತಿ ಶ್ರೇಷ್ಠ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಆದರ್ಶಪ್ರಾಯರು. ಪ್ರಧಾನಿ ನರೇಂದ್ರ ಮೋದಿಯವರಿಗೂ ಡಾ.ಹೆಗ್ಗಡೆ ಯವರು ಅಚ್ಚುಮೆಚ್ಚಿನವರಾಗಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾರತ ರತ್ನ ಪುರಸ್ಕಾರ ಸಿಗಬೇಕೆಂಬುದು ಕೋಟ್ಯಂತರ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಳ್ಪ, ಡಿ.13: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.   ಹಿಂದೂ ಜಾಗರಣ ವೇದಿಕೆ ಬಳ್ಪ ಇದರ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಡಿ.13ರ ಇಂದು ಬಳ್ಪದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಆರಂಭಗೊಂಡಿದ್ದು ಸಂಜೆವರೆಗೆ ರಕ್ತದಾನ ಶಿಬಿರ ಬಳ್ಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿದೆ.    

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಡಿ.12 ರ ವರದಿಯಂತೆ 53 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,325ಕ್ಕೆ ಏರಿಕೆಯಾಗಿದೆ. ಇನ್ನೂ ಡಿ.12 ರ ವರದಿಯಂತೆ 43 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,236ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ದಿನ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 732 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.      

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ Read More »

ಕರಾವಳಿ
Scroll to Top