newskadaba

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 17: ಕೋವಿಡ್‌ ಸಂಕಷ್ಟದಿಂದ ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಸಾರಿಗೆ ಇಲಾಖೆ ನಷ್ಟ ಸರಿದೂಗಿಸುವುದೇ ಚಿಂತೆಯಾಗಿದೆ. ಆರ್ಥಿಕ ಸಂಕಷ್ಟದಿಂದ ನಾಲ್ಕು ನಿಗಮಗಳ ನೌಕರರಿಗೆ ವೇತನ ಪಾವತಿ ಮಾಡಲು ಇಲಾಖೆ ಪರದಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಇಂತಹ ಯಾವುದೇ ಚಿಂತನೆ ಸಾರಿಗೆ ಇಲಾಖೆಯ ಮುಂದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.       ಕೋವಿಡ್‌ ಲಾಕ್‌ಡೌನ್‌ […]

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ Read More »

ಕರ್ನಾಟಕ

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ.       ಆಗಸ್ಟ್ ತಿಂಗಳಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಸಂಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ಸಂಪತ್ ರಾಜ್ ಆಪ್ತ ಗೆಳೆಯ ರಿಯಾಜುದ್ದೀನ್

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ Read More »

ಕರ್ನಾಟಕ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ ನ. 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.       ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ Read More »

ಕರಾವಳಿ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 16: 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದೆ. ತರಗತಿಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರವನ್ನು ನಿಗದಿ ಪಡಿಸಿ, ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದ್ದು, ಹಿಂದಿನ ವರ್ಷಗಳಂತೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ವಿತರಿಸಲಿದ್ದು, ಈ ವಿಷಯದಲ್ಲಿ ಕೆಳಕಂಡ ನಿರ್ದೇಶನಗಳನ್ನು ಅನುಸರಿಸಲು ಆದೇಶಿಸಿದೆ. 2020-21ನೇ ಸಾಲಿಗೆ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ Read More »

ಕರ್ನಾಟಕ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 16: ಸ್ನೇಹಿತರ ನಡುವೆ ಜಗಳ ನಡೆದ ಪರಿಣಾಮ ಓರ್ವನ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಈ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.ತಿರುವನಂತಪುರ ನಿವಾಸಿಯಾ ತಲೆಗೆ ಬಡಿದು ಹತ್ಯೆ ಮಾಡಿದಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ತಿರುವನಂತಪುರದ ವಿಜಯನ್ ಮೇಸ್ತ್ರಿ ( 55) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಚೆಂಗಳ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿದೆ. ಜೊತೆಗಿದ್ದ ತಮಿಳುನಾಡು ಮೂಲದ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಜಯನ್ ಹಾಗೂ ಸ್ನೇಹಿತನ ನಡುವೆ ಉಂಟಾದ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ Read More »

ಕರ್ನಾಟಕ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ನ.17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ಪ್ರಮಾಣಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಡಳಿತ ಹೇಳಿದೆ.ವಿದ್ಯಾರ್ಥಿಗಳು ಕೋವಿಡ್‌ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಈಗಾಗಲೇ ಕೋವಿಡ್‌ ಟೆಸ್ಟ್‌ ಮ್ಯಾಪಿಂಗ್‌ ಕಾಲೇಜುಗಳಿಗೆ ಲಿಂಕ್‌ ಮಾಡಲಾಗಿದೆ. ಕೋವಿಡ್‌ ಟೆಸ್ವ್‌ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ನ.17ರಂದು ಕಾಲೇಜು ಆರಂಭವೆಂದು

ಕೋವಿಡ್‌ ಪ್ರಮಾಣಪತ್ರವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ ➤ ದ.ಕ. ಜಿಲ್ಲಾಡಳಿತ Read More »

ಕರಾವಳಿ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಂಬಾರು, ನ.15. ಬಾಣಂತಿ ಮಹಿಳೆಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ. ಏಳನೇ ಗರ್ಭಿಣಿಯಾಗಿದ್ದ ಈಕೆಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿದ್ದು, ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆಯನ್ನು ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಗು ಆರೋಗ್ಯವಾಗಿದ್ದು, ಪುತ್ತೂರಿನ

ಕಡಬ: ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಮಹಿಳೆ ಮೃತ್ಯು Read More »

ಕರಾವಳಿ

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು

(ನ್ಯೂಸ್ ಕಡಬ) newskadaba.com ನಡುಗಲ್ಲು ನ. 15: ತಲೆ ಎತ್ತಲಿರುವ ಸಭಾಭವನದ ಕಾಮಗಾರಿಯನ್ನು ಸುಳ್ಯ ಶಾಸಕ ಎಸ್ ಅಂಗಾರರವರು ಇಂದು ವೀಕ್ಷಣೆ ಮಾಡಿದ್ದಾರೆ. ನಾಲ್ಕೂರು ಗ್ರಾಮದ ನಡುಗಲ್ಲಿನಲ್ಲಿ ಯುವಕ ಮಂಡಲ ನಡುಗಲ್ಲು ಮತ್ತು ದುರ್ಗಾಪರಮೇಶ್ವರಿ ವನಿತಾ ಸಮಾಜ ನಡುಗಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಸಭಾಭವನ ರೂಪುಗೊಳ್ಳಲಿದ್ದು ಕೆಲಸ ಭರದಿಂದ ಸಾಗುತ್ತಿದ್ದೆ. ಸುಮಾರು 50 ಲಕ್ಷ ವೆಚ್ಚದ ಸಭಾಭವನ ನಿರ್ಮಾಣವಾಗಲಿದ್ದು, ಇದರಲ್ಲಿ ಎರಡೂ ಸಂಸ್ಥೆಗಳಿಗೆ ಪ್ರಥಮ ಮಹಡಿಯಲ್ಲಿ ಕಚೇರಿ ತಳ ಮಡಿಯಲ್ಲಿ ವೇದಿಕೆ, ವೇದಿಕೆಯ ಎರಡು ಬದಿ ಗ್ರೀನ್ ರೂ

ನಡುಗಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಭವನದ ಕಾಮಗಾರಿ ವೀಕ್ಷಿಸಿದ ಶಾಸಕರು Read More »

ಕರಾವಳಿ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 15: ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ.   ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂಟೋ ಕಣ್ಣಾಸ್ಪತ್ರೆಗೆ ದಾಖಲಾಗಿದ್ದು, ಈತನ ಎರಡೂ ಕಣ್ಣುಗಳಿಗೂ ತೀವ್ರ ಹಾನಿಯಾಗಿದೆ. ಸುವೇಲ್ ನಿನ್ನೆ ರಾತ್ರಿ ಪಟಾಕಿ ಹೂವಿನ ಕುಂಡ

ದೀಪಾವಳಿ ಪಟಾಕಿ ಅನಾಹುತ ➤ ಬೆಳಕಿನ ಹಬ್ಬದಲ್ಲಿ ಬೆಳಕನ್ನೆ ಕಳೆದು ಕೊಳ್ಳುವ ಭೀತಿ.! Read More »

ಕರಾವಳಿ
Scroll to Top