newskadaba

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 07: ಬೆಳ್ತಂಗಡಿ ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯು ಚುನಾವಣಾಧಿಕಾರಿ, ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತಿಯಲ್ಲಿ ಇಂದು ನಡೆಯಿತು.     ಬೆಳ್ತಂಗಡಿ ನಗರ ಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿಯ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಳಸಿ ಆಯ್ಕೆಯಾಗಿದ್ದಾರೆ. ಪಂಚಾಯತಿನ ಅಧ್ಯಕ್ಷ ಗಾದಿ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಗಾದಿಯನ್ನು ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿ ಸರಕಾರ […]

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ Read More »

ಕರಾವಳಿ, ಕರ್ನಾಟಕ

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07:  ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.     ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.    

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 07: ನಾಳೆಯಿಂದ ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ಶಿಬಿರವು ನ.8 ರಿಂದ ಆರಂಭಗೊಂಡು ನ.14 ರವರೆಗೆ ನಡೆಯಲಿದ್ದು, ಶಿಬಿರವನ್ನು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಉದ್ಘಾಟಿಸಲಿದ್ದಾರೆ.     ಈಗಾಗಲೇ 450 ಶಿಬಿರಾರ್ಥಿಗಳು ಹೆಸರು ನೊಂದಾಯಿಸಿರುವುದಾಗಿ ಶಿಬಿರದ ಸಂಯೋಜಕ ಜಯಪ್ರಕಾಶ್ ಕೂಜುಗೋಡು ಮಾಹಿತಿ ನೀಡಿದರು. ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ದುರಸ್ತಿ, ಕಸಿ ಕಟ್ಟುವುದು, ಅಣಬೆ ಕೃಷಿ, ಜೇನು ಕೃಷಿ, ಹೈನುಗಾರಿಕೆ ಮೀನುಗಾರಿಕೆ, ಕೋಳಿ, ಕುರಿ,

ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ. 07: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕಡಬ ತಾಲೂಕಿನ ಶಿರಾಡಿಯ 55 ವರ್ಷದ ವ್ಯಕ್ತಿ, ಕೌಕ್ರಾಡಿಯ 48 ವರ್ಷದ ಮಹಿಳೆ, 58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.    

ಕಡಬ,ಪುತ್ತೂರು ತಾಲೂಕಿನಲ್ಲಿ ಇಂದು 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್

(ನ್ಯೂಸ್ ಕಡಬ) newskadaba.com ಮಡಿಕೇರಿ ನ. 07 : ಕೇರಳದ ವಯನಾಡುವಿನ ಬಣಾಸುರಮನೆ ಅರಣ್ಯದಲ್ಲಿ ಕೇರಳದ ನಕ್ಸಲ್‌ ನಿಗ್ರಹ ದಳ ಥಂಡರ್‌ ಬೋಲ್ಟ್‌ ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದು ಒಬ್ಬ ಮಾವೋವಾದಿ ಮೃತಪಟ್ಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿ ಪ್ರದೇಶಗಳಲ್ಲಿ ಕೂಬಿಂಗ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆಯೊಂದಿಗೆ ಮಹತ್ವದ ಸಭೆ ನಡೆದಿದೆ.   ಸಭೆಯಲ್ಲಿ ಐಜಿಪಿ ವಿಫುಲ್‌ ಕುಮಾರ್‌,

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್ Read More »

ಕರ್ನಾಟಕ

ಬಜ್ಪೆ: ಅಪ್ರಾಪ್ತೆಗೆ ಥಳಿಸಿದ ಮಹಿಳಾ ಪೇದೆ ವಿರುದ್ದ ದೂರು

(ನ್ಯೂಸ್ ಕಡಬ) newskadaba.com ಬಜ್ಪೆ ನ. 07: ಅಪ್ರಾಪ್ತೆಗೆ ಥಳಿಸಿದ ಆರೋಪದಡಿಯಲ್ಲಿ ಮಂಗಳೂರಿನ ಬಜ್ಪೆ ಠಾಣೆ ಮಹಿಳಾ ಪೇದೆ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪ್ರಾಪ್ತೆಯ ಪೋಷಕರು ಬಜ್ಪೆ ಠಾಣೆಯ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂಡಬಿದ್ರೆಯ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಯುವತಿ ತನ್ನ ಪೋಷಕರ ಜೊತೆ ಬಜ್ಪೆ ಪೊಲೀಸ್ ಠಾಣೆಗೆ ತೆರಳಿದ್ದಾಳೆ ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು 16 ವರ್ಷದ ಈ ಅಪ್ರಾಪ್ತೆಗೆ ಲಾಠಿಯಿಂದ ಹೊಡೆದಿದ್ದಾರೆ ಎಂಬ

ಬಜ್ಪೆ: ಅಪ್ರಾಪ್ತೆಗೆ ಥಳಿಸಿದ ಮಹಿಳಾ ಪೇದೆ ವಿರುದ್ದ ದೂರು Read More »

ಕರಾವಳಿ

ಮಂಡೆಕೋಲು : ಪುಟಾಣಿಗಳಿಗೆ ಒಲಿದ “ಸಿರಿಗನ್ನಡ ಕಂದ ಪ್ರಶಸ್ತಿ”

(ನ್ಯೂಸ್ ಕಡಬ) newskadaba.com ಮಂಡೆಕೋಲು ನ. 07: ಸೆಪ್ಟಂಬರ್, ಅಕ್ಟೋಬರ್ 2020ರ ಅವಧಿಯಲ್ಲಿ ಪ್ರಸಾರವಾದ ಹಾಡು ಮಾತಾಡು ಕಾರ್ಯಕ್ರಮ ಸರಣಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿದ್ದ ಒಂದೇ ಮನೆಯ ಇಬ್ಬರು ಅಂಗನವಾಡಿ ಪುಟಾಣಿಗಳ ಮುಡಿಗೆ ಇದೀಗಾ ಸಿರಿಗನ್ನಡ ಕಂದ ಪ್ರಶಸ್ತಿ ಒಲಿದಿದೆ. ಇವರು ದೇವರಗುಂಡ ಮೂಲದ ಹರೀಶ್ ಡಿ. ಆರ್ ರವರ ಮಗಳಾದ ತನ್ವಿ ಡಿ ಹಾಗೂ ನವೀನ್ ಡಿ ಆರ್ ರವರ ಮಗನಾದ ಆಶಿತ್ ಡಿ ಎನ್ ರವರಿಗೆ ಸಿರಿಗನ್ನಡ ಕಂದ ಪ್ರಶಸ್ತಿ ನೀಡಲಾಗಿದೆ. ಮಂಡೆಕೋಲು ಗ್ರಾಮದ

ಮಂಡೆಕೋಲು : ಪುಟಾಣಿಗಳಿಗೆ ಒಲಿದ “ಸಿರಿಗನ್ನಡ ಕಂದ ಪ್ರಶಸ್ತಿ” Read More »

ಕರಾವಳಿ

ಪುತ್ತೂರು: ಅತ್ಯುತ್ತಮ ದಿಗ್ವಿಜಯ ವರದಿಗಾರ ಅಶೋಕ್‍ಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 07: ದಿಗ್ವಿಜಯ ನ್ಯೂಸ್ ಕನ್ನಡ ಸುದ್ದಿ ವಾಹಿನಿಯ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭ ಅತ್ಯುತ್ತಮ ವರದಿ ಮಾಡಿದ ಕೃಷ್ಣ ನಗರ ಬಡಾವು ನಿವಾಸಿ ಅಶೋಕ್ ಪೂಜಾರಿಯವರಿಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್ ಗೌರವ ಲಭಿಸಿದೆ.       ಮಂಗಳೂರು ಗೊಲಿಬಾರ್ ಸಂದರ್ಭದಲ್ಲಿ ವರದಿಗಾರಿಕೆ ಮಾಡಿ ವೀಕ್ಷಕರ ಮನಗೆದ್ದಿದ್ದಾರೆ. ಮೊದಲು ಪುತ್ತೂರಿನಲ್ಲಿ ಸುದ್ದಿಬಿಡುಗಡೆ ದಿನಪತ್ರಿಕೆ, ಪ್ರಜಾ ವಾಹನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ, ಬಳಿಕ ದಿಗ್ವಿಜಯ ವಾಹಿನಿಗೆ ಸೇರ್ಪಡೆಗೊಂಡಿದ್ದರು. ಇದೀಗ ಉಡುಪಿಯಿಂದ ಮಂಗಳೂರಿಗೆ ವರ್ಗವಣೆಗೊಂಡ

ಪುತ್ತೂರು: ಅತ್ಯುತ್ತಮ ದಿಗ್ವಿಜಯ ವರದಿಗಾರ ಅಶೋಕ್‍ಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್ Read More »

ಕರಾವಳಿ

ಉಪ್ಪಿನಂಗಡಿ: ಆಂಕರ್ ರಕ್ಷಿತ್ ಶೆಟ್ಟಿಗೆ ಬೆಸ್ಟ್ ಪ್ರೈಂಟೈಮ್ ಆಂಕರ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 07: ದಿಗ್ವಿಜಯ ನ್ಯೂಸ್ ಚಾನೆಲ್ ನ ಆಂಕರ್ ಆಗಿರುವ ಉಪ್ಪಿನಂಗಡಿಯ ರಕ್ಷತ್ ಶೆಟ್ಟಿವರಿಗೆ ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ನ್ಯಾಷನಲ್ ಟೆಲಿವಿಷನ್ ಅವಾರ್ಡ್‍ನಲ್ಲಿ ಬೆಸ್ಟ್ ಪ್ರೈಂ ಟೈಮ್ ಆಂಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.     ಇವರು ನಿರೂಪಕರಾಗಿ, ಕಾರ್ಯಕ್ರಮ ನಿರ್ಮಾಪಕರಾಗಿರುವ ಮೆಗಾ ಡಿಬೇಟ್ ಕಾರ್ಯಕ್ರಮಕ್ಕೆ ಅತ್ಯುತ್ತಮ ಚರ್ಚಾ ಕಾರ್ಯಕ್ರಮ ಪ್ರಶಸ್ತಿ, ಒಟ್ಟು 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ. ಇವರು ಉಪ್ಪಿನಂಗಡಿ ನಿವಾಸಿಯಾಗಿರುವ ರಕ್ಷತ್ ಶೆಟ್ಟಿ ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಇವರು

ಉಪ್ಪಿನಂಗಡಿ: ಆಂಕರ್ ರಕ್ಷಿತ್ ಶೆಟ್ಟಿಗೆ ಬೆಸ್ಟ್ ಪ್ರೈಂಟೈಮ್ ಆಂಕರ್ ಪ್ರಶಸ್ತಿ Read More »

ಕರಾವಳಿ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 07: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ(1) ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ.       ವಾಸುದೇವ ಸಾಮಗ ಅವರು ತೆಂಕು-ಬಡಗುತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟಿದ್ದು, ಅನೇಕ ಪ್ರಸಂಗಗಳಲ್ಲಿ ನಾಯಕ, ಪ್ರತಿನಾಯಕ, ಹಾಸ್ಯ ಸ್ತ್ರೀವೇಷವನ್ನು ನಿರ್ವಹಿಸಿದ್ದಾರೆ. ಇವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದು, ವಿಭಿನ್ನ ನಿಲುವಿನ ಕೈಕೆ, ದಶರಥ, ದೇವವ್ರತ-ಭೀಷ್ಮ ಕಂಸ ಕೃಷ್ಣ, ರುಕ್ಮಾಂಗದ-ಮೋಹಿನಿ, ಅಂಬೆ-ಪರಶುರಾಮ, ಮಂಥರೆ ಮುಂತಾ ಪಾತ್ರಗಳಲ್ಲಿಯೂ ಸೈ ಎನಿಸಿಕೊಂಡಿದ್ದಾರೆ.  

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ Read More »

ಕರಾವಳಿ
Scroll to Top