newskadaba

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ.

(ನ್ಯೂಸ್ ಕಡಬ) newskadaba.com ಪಂಜ ನ. 01: ಪಂಜ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಕ್ರಮ ಮರ ಸಾಗಾಟ ಮಾಡುತ್ತಿದದ್ದನ್ನು ತಡೆದಿದ್ದಾರೆ. ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಸಮಹಾದಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‍ಬೋಗಿ ಮತ್ತು ಹಲಸು ಜಾತಿಯ ಮರದ ದಿಮ್ಮಿಗಳನ್ನು ಈಚರ್ ಟಿಪ್ಪರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪಂಜ ವಲಯದ ಎಡಮಂಗಲ ಶಾಲೆಯ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯ ಸಿಬ್ಬಂದಿಗಳು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟಿಪ್ಪರ್ ಪರವಾನಿಗೆ ಅಮಾನತು ಪಡಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವಹನ […]

ಪಂಜ : ಅಕ್ರಮ ಮರ ಸಾಗಾಟ, ವಾಹನ ವಶಕ್ಕೆ. Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಉಡುಪಿ, ನ. 01. ಬ್ರಹ್ಮಾವರದ ಅಮ್ಮುಂಜೆಯಲ್ಲಿ ತಂಡಗಳ ಸದಸ್ಯರು ಮದ್ಯದ ಅಮಲಿನಲ್ಲಿದ್ದು ಎರಡು ತಂಡಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಈ ನಡುವೆ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ವಾಹನಗಳ ಮೇಲೆ ಶಸ್ತ್ರಾಸ್ತ್ರಗಳ ಬಳಕೆಯ ಗುರುತುಗಳಿವೆ.     ಇತ್ತಂಡಗಳ ನಡುವಿನ ಜಗಳದಿಂದಾಗಿ ಈ ಘಟನೆ ನಡೆದಿದೆ. ಎರಡು ತಂಡಗಳ ನಡುವೆ ವೈಷಮ್ಯವಿದ್ದು, ಕಳೆದ ದಿನ  ರಾತ್ರಿ ನಡೆದ ಗಲಾಟೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ

ಉಡುಪಿಯಲ್ಲಿ ಎರಡು ತಂಡಗಳ ನಡುವೆ ಜಗಳ ➤ ದ್ವಿಚಕ್ರ ವಾಹನ ಸಂಪೂರ್ಣ ಭಸ್ಮ Read More »

ಕರಾವಳಿ

ಬಿಳಿನೆಲೆ :ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ ನ. 01: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸದ ಸಂಭ್ರಮ . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ 65ನೇ ಕನ್ನಡ ರಾಜ್ಯೋತ್ಸವನ್ನು ವೇದವ್ಯಾಸ ವಿದ್ಯಾಲಯದ ಸಹಯೋಗದೊಂದಿಗೆ ಸರಳವಾಗಿ ಆಚರಿಸಲಾಯಿತು. ಶಾಲಾ ಮುಖ್ಯಗುರುಗಳಾದ ಹಿರಿಯಣ್ಣ ಗೌಡ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಾಪಕರಾದ ಗಣಪತಿ ಭಟ್, ಶಿವರಾಮ್ ಏನೆಕಲ್, ಸತ್ಯ ಶಂಕರಭಟ್, ದಿನೇಶ್ ಕುಂದರ್, ಚೇತನ್ ಹೆಚ್ ಡಿ, ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.    

ಬಿಳಿನೆಲೆ :ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

 (ನ್ಯೂಸ್ ಕಡಬ) newskadaba.com ದೆಹಲಿ,  ನ. 01: ಇಂದು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.   “ಕರ್ನಾಟಕವು ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಳ್ಳಾಲ ನ. 01: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಹಿರಿಯ ವ್ಯಕ್ತಿಯೊಬ್ಬರ ಮೃತದೇಹ ಕೊಲೆಗೈದು ಇರಾ ಸಮೀಪದ ಗುಡ್ಡವೊಂದರಲ್ಲಿ‌ ಹೂತು ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.   ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ‌ ಪಲ್ಲಿಯಾಕ (70) ಕೊಲೆಯಾದವರು. ಗಾಂಜಾ ವ್ಯಸನಿಗಳ‌ ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ ➤ 9 ಮಂದಿ ಆರೋಪಿಗಳ ಅರೇಸ್ಟ್

 (ನ್ಯೂಸ್ ಕಡಬ) newskadaba.com ಬಂಟ್ವಾಳ ನ. 01: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟುವಿನ ಭಂಡಾರಿಬೆಟ್ಟುವಿನ ವಸತಿ ಸಂಕೀರ್ಣದಲ್ಲಿ ಅಕ್ಟೋಬರ್ 20 ರಂದು ಸುರೇಂದ್ರ ಬಂಟ್ವಾಳ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಅಜೆಕಲ ನಿವಾಸಿ ಸತೀಶ್ ಕುಲಾಲ್ , ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಯಾನೆ ಗಿರಿ, ಬಂಟ್ವಾಳ ಕಬ್ಬಿನಹಿತ್ಲು ನಿವಾಸಿ ಪ್ರದೀಪ್ ಕುಮಾರ್ ಯಾನೆ ಪಪ್ಪು,ಬಂಟ್ವಾಳ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ ➤ 9 ಮಂದಿ ಆರೋಪಿಗಳ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನಿರ್ಮಾಪಕ ದಿನೇಶ್ ಗಾಂಧಿ ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. 52 ವರ್ಷದ ನಿರ್ಮಾಪಕ ಹಾಗೂ ನಿರ್ದೇಶಕ ಪತ್ನಿ ಪುತ್ರರನ್ನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುದೀಪ್ ಅಭಿನಯದ ವೀರ ಮದಕರಿ , ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಹಾಗೂ ಹೂ ಚಿತ್ರವನ್ನು ನಿರ್ಮಿಸಿದ ಈ ನಿರ್ಮಾಪಕ , ನಟ ಸಿದ್ಧಾಂತ ಅಭಿನಯದ ಛತ್ರಪತಿ ಚಿತ್ರವನ್ನ ನಿರ್ದೇಶನ ಮಾಡಿದ್ದು , ಈಗ ಮತ್ತೊಂದು ಮಕ್ಕಳ ಚಿತ್ರ ನಿರ್ದೇಶನ ಮಾಡಲು ಕೂಡ

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ Read More »

ಕರ್ನಾಟಕ

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಾಪು  ಅ. 31: ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿದ ಚಿನ್ನದ ಬ್ರಾಸ್‍ಲೈಟನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪೌರ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ ಕಾಪು ಪುರಸಭೆಯ ಕಸ ವಿಲೇವರಿಯ ಪೌರಕಾರ್ಮಿಕರು ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್‍ನಲ್ಲಿ ಕಸದ ಜತೆ ಕಳೆದು 16 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್‍ನ್ನು ಪತ್ತೆಯಾಯಿತು. ಬಳಿಕ ಇದು ರೋಲ್ಡ್ ಗೋಲ್ಡ್ ಆಗಿರಬಹುದು ಎಂದು ಕಸದಲ್ಲಿ ತುಂಬಿಸಿದರು. ಆದರೆ ಕಸ ವಿಲೇವರಿ ಘಟಕದಲ್ಲಿ ಪರೀಕ್ಷಿಸಿದಾಗ ಇದು ಚಿನ್ನ ಎಂಬುವುದು ತಿಳಿಯಿತು. ಬಳಿಕ

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು Read More »

ಕರಾವಳಿ, ಕರ್ನಾಟಕ

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ

(ನ್ಯೂಸ್ ಕಡಬ) newskadaba.com ಶಿರ್ವ  ಅ. 31: ಸೈಂಟ್ ಮೇರಿಸ್ ಶಾಲೆ ಸಮೀಪ ಕಲ್ಲು ಸಾಗಾಟದ ಟೆಂಪೋವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.   ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟೆಂಪೋ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಟೆಂಪೋ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ  ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ Read More »

ಕರಾವಳಿ

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.     ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top