newskadaba

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20: ಮಂಗಳೂರಿನ‌ ಸ್ಟೇಟ್ ಬ್ಯಾಂಕ್ ನಿಂದ ಮಂಗಳಾದೇವಿಗೆ ಸಂಚರಿಸುವ 27 ನಂಬರ್ ನ ಗಣೇಶ್ ಪ್ರಸಾದ್ ಬಸ್ ನಲ್ಲಿ ಡ್ರಗ್ಸ್ ಜಾಗೃತಿ‌ ಬರಹ ಬರೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಹೊಸ ಪ್ರಯತ್ನ ಮಾಡಲಾಗಿದೆ. “ಯುವರ್ ಲೈಫ್ ಇಸ್ ಇನ್ ಯುವರ್ ಹ್ಯಾಂಡ್”, ” ಸೆ ನೋ ಟು ಡ್ರಗ್ಸ್” ಎಂಬಿತ್ಯಾದಿ ಜಾಗೃತಿ ಬರಹಗಳನ್ನು ಬಸ್ ನಲ್ಲಿ ಬರೆದಿರುವುದು ಗಮನ ಸೆಳೆದಿದೆ.     ಪ್ರಜ್ಞಾವಂತರ ನಗರಿ ಮಂಗಳೂರಿನಲ್ಲೂ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ […]

ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್ Read More »

ಕರಾವಳಿ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.20: ದಿ ಹಿಂದು ಪತ್ರಿಕೆ ವರದಿಗಾರರಾಗಿ ಕೆಲಸ ಮಾಡಿದ ಹಿರಿಯ ಪತ್ರಕರ್ತರಾದ  ಶ್ಯಾಮ ಸುಂದರ್(70) ರವರು ಹೃದಯಾಘಾತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.     ಇವರಿಗೆ ಇನ್ವೆಸ್ಟಿಗೇಷನ್ ವರದಿಗಾರಿಕೆಯಲ್ಲಿ ಬಂಗಾರದ ಪದಕ ಪಡೆದು, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದಂತ ಹಿರಿಯ ಪತ್ರಕರ್ತರಾಗಿರುತ್ತಾರೆ. ಶ್ಯಾಮ ಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು, ಪತ್ನಿ, ಇಬ್ಬರು ಮಕ್ಕಳು, ಅಪಾರ

ಹಿರಿಯ ಪತ್ರಕರ್ತ ಶ್ಯಾಮ ಸುಂದರ್ ನಿಧನ Read More »

ಕರ್ನಾಟಕ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.20: ಇಂದು ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು ಮಹತ್ವದ ಘೋಷಣೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಾಧಾನಿಯವರು ದೇಶ ವಾಸಿಗಳಿಗೆ ಶುಭ ಸುದ್ದಿಯೊಂದಿಗೆ ನೀಡಲಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.     ದೇಶ ಕೊರೊನಾ ಸೋಂಕಿಗೆ ತುತ್ತಾದ ಬಳಿಕ ಪ್ರಧಾನಿ ಮೋದಿ ಹಲವು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೀಗ ಇಂದು ಸಂಜೆ ದೇಶಕ್ಕೆ ಸಂದೇಶವನ್ನು ನೀಡಲಿದ್ದೇನೆ ಎಂಬ ಪ್ರಧಾನಿ ಮೋದಿ ಟ್ವೀಟ್ ಕುತೂಹಲವನ್ನು ಇಮ್ಮಡಿಗೊಳಿಸಿದೆ.ದೇಶದಲ್ಲಿ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ರಾಷ್ಟ್ರೀಯ ನ್ಯೂಸ್

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ

(ನ್ಯೂಸ್ ಕಡಬ) newskadaba.com ಭಡ್ಕಳ, ಅ.20: ಭಕ್ತರು ದೇಣಿಗೆ ರೂಪದಲ್ಲಿ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ನೀಡಿದ ಸುಮಾರು 40 ಲಕ್ಷ ರೂ. ಮೌಲ್ಯದ ಆಭರಣಗಳು ಕಳುವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ  ಕಳೆದ ದಿನ ರಾತ್ರಿ ನಡೆದಿದೆ.     ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ಅರ್ಚಕ ಸಹ ನಾಪತ್ತೆಯಾಗಿದ್ದಾನೆ ಎಂದು ದೇವಾಲಯದ ಅಧಿಕಾರಿಗಳು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆಯಾದ ಅರ್ಚಕನನ್ನು ಯೆಲ್ಲಾಪುರ ನಿವಾಸಿ ಸತೀಶ್ ಭಟ್ ಎಂದು ಗುರುತಿಸಲಾಗಿದೆ. ದೇವರಿಗೆ ನವರಾತ್ರಿ ಸಮಯ ಆಭರಣಗಳನ್ನು ತೊಡಿಸಲು ದೇವಾಲಯದ ಪ್ರಧಾನ

ಭಟ್ಕಳ: 40 ಲಕ್ಷ ರೂ. ಮೌಲ್ಯದ ಆಭರಣ ಕಳವು ➤ ಅರ್ಚಕ ನಾಪತ್ತೆ Read More »

ಕರ್ನಾಟಕ

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

(ನ್ಯೂಸ್ ಕಡಬ) newskadaba.com ಲಂಡನ್, ಅ.20: ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರ ತೊರೆದು ಲಂಡನ್ ಗೆ ತೆರಳಿದ್ದಾರೆ. ಒಲಿಂಪಿಕ್ ಶಿಬಿರವನ್ನು ಸಾಮಾನ್ಯವಾಗಿ ಯಾರೂ ಕೂಡಾ ಮಧ್ಯದಲ್ಲಿಯೇ ತೊರೆದು ಹೋಗವುದಿಲ್ಲ, ಅಲ್ಲದೇ ಇದೇ ಮೊದಲ ಬಾರಿಗೆ ತನ್ನ ಪೋಷಕರಿಲ್ಲದೆ ಪಿ. ವಿ. ಸಿಂಧೂ ಇಂಗ್ಲೆಂಡ್ ಗೆ ತೆರಳಿದ್ದಾರೆ.     ಚೇತರಿಕೆ ಮತ್ತು ಪುಷ್ಠಿಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ. ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು Read More »

ರಾಷ್ಟ್ರೀಯ ನ್ಯೂಸ್

ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ಸ್ಯಾಂಡಲ್ ವುಡ್ ಹಾಸ್ಯನಟ ಚಿಕ್ಕಣ್ಣ ಇದೀಗ ಪೂರ್ಣಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ. ನಟ ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ.     ಕೆಲ ವರ್ಷಗಳ ಹಿಂದೆ ಶರಣ್-ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಅಧ್ಯಕ್ಷ ಸಿನಿಮಾ ತೆರೆಕಂಡು, ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ಶರಣ್ ಅಧ್ಯಕ್ಷನಾಗಿದ್ದರೆ,

ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..! Read More »

ಕರ್ನಾಟಕ

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ರೈಲಿನಲ್ಲಿ 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ ಆರೋಪಿ ಎಂದು ಗುರುತಿಸಲಾಗಿದೆ.     ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು

ರೈಲಲ್ಲಿ ಹೋದ ಕಳ್ಳನನ್ನು ವಿಮಾನವೇರಿ ಹಿಡಿದ ಬೆಂಗಳೂರು ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಸಕಲೇಶಪುರ ಅ. 20: ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.  ಹರಿಯಾಣ ರಾಜ್ಯದ ನೋಂದವಣಿಯ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 30 ಕೋಣಗಳನ್ನು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಸಕಲೇಶಪುರದ ಮಾರನಹಳ್ಳಿ ಬಳಿ ನಡೆದಿದೆ. ಆರೋಪಿಗಳು ಹರಿಯಾಣ ಮೂಲದ ವಿಕಾಸ್ (25) ಹಾಗೂ ಅನಿಲ್ ಕುನಾರ್ (30) ಎಂದು ತಿಳಿದು ಬಂದಿದೆ.ಇನ್ನು ಯಾರಿಗೂ ಅನುಮಾನ ಬಾರದಂತೆ ಲಾರಿಯಲ್ಲಿ ಟಾರ್ಪಲ್ ಹಾಕಿ ಕೋಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗ್ರಾಮಾಂತರ

ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 20: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.   ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.

ಐಎಂಎ ವಂಚನೆ ಪ್ರಕರಣ ➤ ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು ಅ. 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top