newskadaba

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್

(ನ್ಯೂಸ್ ಕಡಬ) newskadaba.com ಚಿತ್ರಮಂದಿರ, ಅ.14: ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 15ರ ನಾಳೆಯಿಂದ ಆರಂಭವಾಗುತ್ತಿವೆ.     ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಇದಕ್ಕಾಗಿ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದ್ದು, ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಕಡ್ಡಾಯವಾಗಿದೆ. ಸಿನೆಮಾ ಹಾಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೇವಲ ಶೇಕಡಾ 50 ರಷ್ಟು ಸೀಟುಗಳನ್ನು ಮಾತ್ರ ಪ್ರೇಕ್ಷಕರಿಗೆ ನೀಡಬೇಕು. ಪ್ರೇಕ್ಷಕರ ಮಧ್ಯೆ ಒಂದು ಸೀಟ್ ಅಂತರವಿರಬೇಕು ಮತ್ತು ಖಾಲಿ ಸೀಟ್ […]

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್ Read More »

ಕರ್ನಾಟಕ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿಯಲ್ಲಿ ಬಿರುಸುಗೊಂಡಿರುವ ಮಳೆ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ದಿನದಂದು ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.     ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿ ಕರಾವಳಿಯಲ್ಲಿ ನದಿಗಳ ಹರಿವು ಹೆಚ್ಚಾಗಿದ್ದು, ಮರಗಳು, ವಿದ್ಯುತ್‌‌ ಕಂಬಗಳು ಧರೆಗುರುಳಿದ್ದವು. ಈ ಭಾರೀ ಮಳೆಯಿಂದಾಗಿ ಪುತ್ತೂರಿನ ಮನೆಯೊಂದು ಭಾಹಶಃ ಹಾನಿಗೊಳಗಾಗಿದೆ. ಹೆಚ್ಚುತ್ತಿರುವ ಮಳೆಯಿಂದಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ Read More »

ಕರಾವಳಿ

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14: ಅಡಕೆ ಟೀ ತಯಾರಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಅಡಿಕೆಯಿಂದ ಶಾಂಪೂ ತಯಾರಾಗಿದೆ.     ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ಯುವ ಉದ್ಯಮಿ ನಿವೇದನ್‌ ನೆಂಪೆ ರವರು ಈಗ ಅಡಕೆ ಶಾಂಪೂ ಸಂಶೋಧಿಸುವ ಹೊಸ ಪ್ರಯೋಗವನ್ನು ಮಾಡಿದ್ದಾರೆ. ಚಾಲಿ ಅಡಿಕೆಯಲ್ಲಿ ಪ್ರೊಲೀನ್‌ ಎಂಬ ಆಂಟಿ ಏಜೆಂಗ್‌ ಇದ್ದು, ಇದು ದೇಹದಲ್ಲಿನ ಸುಕ್ಕವನ್ನು ಕಡಿಮೆ ಮಾಡುತ್ತದೆ. ಇದರ ಜೊತೆಗೆ ಗ್ಯಾಲಿಕ್‌ ಆಸಿಡ್‌ ಎಂಬ ಆಂಟಿ ಫಂಗಲ್‌ ಇದ್ದು,

ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….! Read More »

ಕರ್ನಾಟಕ

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಅ.14: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಗುತ್ತಿಗಾರಿನ ವಳಲಂಬೆಯಲ್ಲಿ ಇಂದು ನಡೆದಿದೆ.     ಕೊಲ್ಲಮೊಗ್ರದ ಹಿತೇಶ್‌ ಎಂಬವರು ಕಾರಿನಲ್ಲಿ ತಾಯಿಯೊಂದಿಗೆ ದೊಡ್ಡತೋಟಕ್ಕೆ ತೆರಳಿದ್ದು, ಇಂದು ಗುತ್ತಿಗಾರಿಗೆ ಹಿಂತಿರುಗುತ್ತಿದ್ದಾಗ ವಳಲಂಬೆ ಬಳಿ ಅಪಘಾತ ಸಂಭವಿಸಿದೆ. ಕರೆಂಟ್‌ ಕಂಬ ಮುರಿದು ಬಿದ್ದಿದ್ದು, ಆ ವೇಳೆ ಕರೆಂಟ್‌ ಟ್ರಿಪ್‌ ಆಗಿರುವ ಕಾರಣ ಯಾವುದೇ ತೊಂದರೆ ಉಂಟಾಗಿಲ್ಲ. ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್‌ ಪರಾಗಿದ್ದಾರೆ.    

ವಳಲಂಬೆ: ಕರೆಂಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಅ. 14: ಕರಾವಳಿಯಲ್ಲಿ ಈಗಾಗಲೇ ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಸಣ್ಣ ಪುಟ್ಟ ಅವಾಂತರಗಳು ಸೃಷ್ಟಿಯಾಗಿದೆ.ಪರಿಣಾಮ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತಗೊಂಡಿದೆ ಕಳೆದೊಂದು ವಾರದಿಂದ ಎಡೆಬಿಡದ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯ ಬಳಿಯ ಪರ್ವತಮುಖಿ ಎಂಬಲ್ಲಿ ಪುರುಷೋತ್ತಮ ಹಾಗೂ ಹೊನ್ನಪ್ಪ ಎಂಬುವರ ಮನೆಯ ಛಾವಣಿಯು ಕಳೆದ ದಿನ ಕುಸಿದು ಹಾನಿ ಸಂಭವಿಸಿದೆ. ಪರಿಣಾಮ ಮನೆಯ ಮೇಲ್ಛಾವಣಿ ಛಾವಣಿ ಸಂಪೂರ್ಣವಾಗಿ ಕುಸಿದು ಹಂಚುಗಳು ಪುಡಿ ಪುಡಿಯಾಗಿದೆ. ಸದ್ಯ ಇದನ್ನು ಸ್ಥಳಿಯರು ದುರಸ್ತಿಗೊಳಿಸಲು ಸಹಕರಿಸಿದ್ದಾರೆ.  

ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ Read More »

ಕರಾವಳಿ, ಕರ್ನಾಟಕ

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ. ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ Read More »

ರಾಷ್ಟ್ರೀಯ ನ್ಯೂಸ್

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಬೂಲ್ ಅ. 14: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ದಕ್ಷಿಣ ಹೆಲ್‍ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!!

(ನ್ಯೂಸ್ ಕಡಬ) newskadaba.com ಹಾವೇರಿ ಅ. 14: ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ.   ನಾಗರಾಜ ಗೊರವರ(22) ಹತ್ಯೆಯಾದ ಅಣ್ಣ. ಈತನನ್ನು ತಮ್ಮ ದಿಳ್ಳೆಪ್ಪ ಗೊರವರ (20) ಕೊಲೆ ಮಾಡಿದ್ದಾನೆ. ನಾಗರಾಜ ದಿನನಿತ್ಯ ಕುಡಿದು ಬಂದು ತಂದೆ-ತಾಯಿ ಜೊತೆ ಜಗಳವಾಡ್ತಿದ್ದ. ಹೆತ್ತವರಿಗೆ ನೀಡ್ತಿದ್ದ ಅಣ್ಣನ ಕಿರಿಕಿರಿಯಿಂದ ಬೇಸತ್ತು ಕೊಡಲಿಯಿಂದ ಕೊಚ್ಚಿ ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಮೈಸೂರು, ಅ.14: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.     ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅ. 14ರ ಮಧ್ಯರಾತ್ರಿಯಿಂದ ಅ.18ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ Read More »

ಕರ್ನಾಟಕ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.14: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಬೆಳ್ಳೇರಿ ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಸಂದರ್ಭ ಬಂಧಿತ ಆರೋಪಿ ಚಿನ್ನಾಭರಣ ದೋಚಲು ಬಂದು ಅತ್ಯಾಚಾರ ಗೈದು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.     ಬಂಧಿತ ಆರೋಪಿಯನ್ನು ಸಕಲೇಶಪುರದ ನಿವಾಸಿ ಪಾತೂರು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್‌ ಅಶ್ರಫ್‌ (28) ಎಂದು ಗುರುತಿಸಲಾಗಿದೆ. ಕುಸುಮಾ ಅವರ ನಿವಾಸದ ಎದುರು ವಾಸಿಸುವ ಗಿರೀಶ್ ಅವರ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top