newskadaba

ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೀಲ್ ಡೌನ್ ಎನ್ನುವ ಸುದ್ದಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದು ಸುಳ್ಳು ಸುದ್ದಿ ಭಕ್ತರು ಗೊಂದಲಕ್ಕೀಡಾಗುವುದು ಬೇಡ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.     ಇನ್ನು ಒಂದು ವಾರದ ಹಿಂದೆ ದೇಗುಲದ ಅರ್ಚಕರೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದಾರೆ. ಕಳೆದ ದಿನ (ಸೋಮವಾರ) ಮಧ್ಯಾಹ್ನದ ವೇಳೆಗೆ ಸಾಮಾಜಿಕ […]

ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ Read More »

ಕರಾವಳಿ, ಕರ್ನಾಟಕ

ಫೇಸ್​ಬುಕ್ ಗೆಳತಿ ಭೇಟಿಗೆ ದೂರದಿಂದ ಬಂದ ಯುವಕ ➤ ಗೆಳತಿ ಕಂಡು ಬೆಚ್ಚಿ ಬಿದ್ದು ಚಾಕು ಎಸೆದ.!!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 22:  ಫೇಸ್​ಬುಕ್​ನಲ್ಲಿ ಪರಿಚಯವಾದ ಗೆಳತಿಯನ್ನು ಭೇಟಿಯಾಗಲು 283 ಕಿ.ಮೀ.ದೂರದ ತ್ರಿಶೂರ್​ನಿಂದ ಕಾಸರಗೋಡಿನ ಬೇಕಲಕ್ಕೆ ಬಂದ ಯುವಕ ದಂಗಾಗಿದ್ದಾನೆ.     ಸಾಮಾಜಿಕ ಜಾಲತಾಣದಲ್ಲಿ 18ರ ಹರೆಯದ ಯುವತಿಯಾಗಿ ತನ್ನನ್ನು ತಾನು ಪರಿಚಯಿಸಿಕೊಂಡಿದ್ದ ಆಕೆ 50 ವರ್ಷದ ಗೃಹಿಣಿ ಎಂದು ತಿಳಿದ ಯುವಕ, ತಾನು ಮೋಸಹೋದುದನ್ನು ತಿಳಿದು ತನ್ನಲ್ಲಿದ್ದ ಚಾಕುವನ್ನು ಆಕೆಯತ್ತ ಎಸೆದ ಘಟನೆ ನಡೆದಿದೆ.ಚಾಟಿಂಗ್ ಸಮಯದಲ್ಲಿ ಆಕೆಗೆ ಹಂತಹಂತವಾಗಿ ಕಳುಹಿಸಿದ್ದ 50 ಸಾವಿರ ರೂ ಕಳುಹಿಸಿದ್ದಾನೆ. ಇದನ್ನ ಮರು ಪಾವತಿಸುವಂತೆ

ಫೇಸ್​ಬುಕ್ ಗೆಳತಿ ಭೇಟಿಗೆ ದೂರದಿಂದ ಬಂದ ಯುವಕ ➤ ಗೆಳತಿ ಕಂಡು ಬೆಚ್ಚಿ ಬಿದ್ದು ಚಾಕು ಎಸೆದ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಪಂಜಿಗುಂಡಿ, ಸೆ.22: ಉಡುಪಿಯಿಂದ ಮಡಿಕೇರಿಗೆ ಕೋಳಿ ಆಹಾರ ತುಂಬಿಕೊಂಡು ತೆಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ಕಳೆದ ದಿನ ಮಧ್ಯರಾತ್ರಿ ಸಂಭವಿಸಿದೆ.     ಆಹಾರ ತುಂಬಿಕೊಂಡು ಮಡಿಕೇರಿಗೆ ತರಳುತ್ತಿದ್ದ ಲಾರಿ ಆನೆಗುಂಡಿ ದಾಟಿ ಇಳಿಜಾರಿನಲ್ಲಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದೆ. ಲಾರಿಯಲ್ಲಿ ಚಾಲಕ ಮಾತ್ರ ಇದ್ದು,  ಅಪಾಯದಿಂದ ಪಾರಾಗಿದ್ದಾರೆ.  

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ

ಮಂಗಳೂರಿಗೆ ಮತ್ತೊಂದು ಗರಿ ➤ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 22: ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಮಂಗಳೂರಿನಲ್ಲೇ ಸ್ಥಾಪನೆಯಾಗುವುದು ಖಚಿತಗೊಂಡಿದೆ. ಈ ಸಂಬಂಧ ರಾಜ್ಯ ಸರ್ಕಾರ ದೃಢವಾಗಿ ಮೊದಲ ಹೆಜ್ಜೆ ಇರಿಸಿದ್ದು, ಮಂಗಳೂರಿನ ಕೆಂಜಾರಿನಲ್ಲಿ 158 ಎಕರೆ ಭೂಮಿಯನ್ನು ಅಕಾಡೆಮಿ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ರಕ್ಷಣಾ ಸಚಿವಾಲಯಕ್ಕೆ ಹಸ್ತಾಂತರಿಸಿದೆ. ಭಾರತೀಯ ತಟರಕ್ಷಣಾ ಪಡೆಯ ತರಬೇತಿ ಅಕಾಡೆಮಿ (ಐಸಿಜಿಎ)ಯನ್ನು ಮಂಗಳೂರಿನಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸಕ್ತಿ ವಹಿಸಿದ್ದು, ಶೀಘ್ರ ಈ ಕುರಿತ ಪ್ರಕ್ರಿಯೆಗಳು ಆರಂಭವಾಗಲಿರುವ ಎಲ್ಲ

ಮಂಗಳೂರಿಗೆ ಮತ್ತೊಂದು ಗರಿ ➤ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ Read More »

ಕರಾವಳಿ, ಕರ್ನಾಟಕ

ನೌಕಾಪಡೆಯಿಂದ ಐತಿಹಾಸಿಕ ನಡೆ ➤ ಯುದ್ಧನೌಕೆಯಲ್ಲಿ ಮಹಿಳಾ ಅಧಿಕಾರಿಗಳ ನಿಯೋಜನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ದೇಶದ ಇತಿಹಾಸಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನ ನೌಕಾ ಪಡೆಯ ಯುದ್ಧನೌಕೆಯಲ್ಲಿ ನಿಯೋಜನೆ ಮಾಡಲಾಗ್ತಿದೆ. ಸಬ್​ ಲೆಫ್ಟಿನೆಂಟ್​​ಗಳಾದ​​ ಕುಮುದಿನಿ ತ್ಯಾಗಿ ಹಾಗೂ ರಿತಿ ಸಿಂಗ್​​​ ಯುದ್ಧನೌಕೆಯಲ್ಲಿ ನಿಯೋಜನೆಗಳಲ್ಲಿರೋ ಭಾರತದ ಮೊಟ್ಟ ಮೊದಲ ಮಹಿಳೆಯರೆನಿಸಿಕೊಳ್ಳಲಿದ್ದಾರೆ. ಇವರಿಬ್ಬರೂ ಹೆಲಿಕಾಪ್ಟರ್​​​ ಸ್ಟ್ರೀಮ್​ನಲ್ಲಿ ಅಬ್ಸರ್ವರ್ಸ್​(ಏರ್​​ಬೋರ್ನ್​ ಟ್ಯಾಕ್ಟೀಶಿಯನ್ಸ್)​​ ಆಗಿ ಸೇರ್ಪಡೆಗೊಳ್ಳಲು ಆಯ್ಕೆಯಾಗಿದ್ದಾರೆ. ಮುಂದೆ ಕುಮುದಿನಿ ಹಾಗೂ ರಿತಿ ಅವರು ನೌಕೆಯ ಹೊಸ ಎಂಎಚ್​​-60 ಹೆಲಿಕಾಪ್ಟರ್​​ಗಳ ಹಾರಾಟ ನಡೆಸುವ ನಿರೀಕ್ಷೆ ಇದೆ ಅಂತ ವರದಿಯಾಗಿದೆ. ಕೊಚ್ಚಿಯಲ್ಲಿ

ನೌಕಾಪಡೆಯಿಂದ ಐತಿಹಾಸಿಕ ನಡೆ ➤ ಯುದ್ಧನೌಕೆಯಲ್ಲಿ ಮಹಿಳಾ ಅಧಿಕಾರಿಗಳ ನಿಯೋಜನೆ Read More »

ರಾಷ್ಟ್ರೀಯ ನ್ಯೂಸ್

ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 21:  ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಧುವನಹಳ್ಳಿ ನಿವಾಸಿ ಮಹದೇವಶೆಟ್ಟಿ(57) ಎಂದು ಗುರುತಿಸಲಾಗಿದೆ   ಕೊಳ್ಳೇಗಾಲ ಪಟ್ಟಣದ ಮಾರ್ಗವಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮಧುವನಹಳ್ಳಿ ಗ್ರಾಮದ ಶಿಕ್ಷಕ ಮಹದೇವಶೆಟ್ಟಿ ಬೈಕ್​ನಿಂದ ಬಿದ್ದಿದ್ದಾರೆ. ಈ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಮೃತ್ಯು..!! Read More »

ಕರ್ನಾಟಕ

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು , ಸೆ. 21:  ಆರೋಗ್ಯ ಇಲಾಖೆಯ ಕೊರೋನಾ ಅಪ್‍ಡೇಟ್ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಮಾತ್ರ ಕೊರೊನಾ ಪತ್ತೆಯಾಗಿದ್ದು, ತಾಲೂಕಿನಲ್ಲಿ ಮೂವರಿಗೆ ಕೋವಿಡ್ 19 ದೃಢಗೊಂಡಿದೆ. ಬನ್ನೂರು ನಿವಾಸಿ 62 ವರ್ಷದ ವ್ಯಕ್ತಿ , ಸರ್ವೆಯ 46 ವರ್ಷದ ಮಹಿಳೆ, 21 ವರ್ಷದ ಯುವಕನಲ್ಲಿ ಕೊರೋನಾ ಇಂದು ಪತ್ತೆಯಾಗಿದೆ.  

ಪುತ್ತೂರಿನಲ್ಲಿ ಇಂದು ಮೂವರಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು , ಸೆ.21: ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಮಧೂರು ಚೇನಕ್ಕೋಡುನ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚೆಂದ್ರಶೇಖರ (37) ಹಾಗೂ ಚೆರ್ವತ್ತೂರು ಮಯ್ಯಚ್ಚಿಯಲ್ಲಿ ಸುಧಾಕರ (50) ಎಂಬವರು ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. 25 ಕ್ಕೂ ಅಧಿಕ ಮನೆಗಳು ಹಾನಿಗೊಂಡಿದ್ದು, 20 ಕ್ಕೂ ಅಧಿಕ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.   ಮಂಜೇಶ್ವರ ತಾಲೂಕಿನ ಲ್ಲಿ ಫೆಲಿಕ್ಸ್ ಡಿ ಸೋಜ ಎಂಬವರ ಮನೆ ಮೇಲೆ ಮರ ಬಿದ್ದು, ಹಾನಿಗೊಂಡಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ

ಕುಮಾರಧಾರ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಇಂದು ಕೊಂಚ ಇಳಿಮುಖ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.21: ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಕಾರ ಮಳೆಗೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟದಲ್ಲಿ ಸಂಜೆಯಾಗುವಾಗ ನೀರಿನ ಮಟ್ಟ ಏರುತ್ತಾ ಬಂದು ಸ್ನಾನ ಘಟ್ಟದ ಬಳಿಯ ಮಹಿಳೆಯರ ಡ್ರೆಸ್ಸಿಂಗ್‌ ರೂಂ ಜಲಾವೃತಗೊಂಡಿದ್ದು, ಲಗೇಜ್‌ ಕೊಠಡಿ, ರಕ್ಷಕರ ಕೊಠಡಿಗೂ ನೀರು ನುಗ್ಗಿದ್ದು ಹಳೆ ಸೇತುವೆ ಮುಳುಗಡೆಯಾಗಿತ್ತು. ಆದರೆ ಕಳೆದ ದಿನ ಸಂಜೆ ಜಲಾವೃತಗೊಂಡಿದ್ದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟದಲ್ಲಿ ಇಂದು ಬೆಳಗ್ಗೆ ನೀರಿನ ಮಟ್ಟ ಕೊಂಚ ಇಳಿಮುಖವಾಗಿದೆ.

ಕುಮಾರಧಾರ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಇಂದು ಕೊಂಚ ಇಳಿಮುಖ Read More »

ಕರಾವಳಿ

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.20: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸವಾರಿ ಮಂಟಪದಲ್ಲಿ ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವಾದ ಘಟನೆ ಕಳೆದ ದಿನ ನಡೆದಿದೆ. ಬೆಳ್ತಂಗಡಿಯ ಬಳ್ಳಮಂಜದ ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದು ಓಮ್ನಿಯನ್ನು ( KA 21 P 1467) ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ವಾಪಸ್ಸು ಸುಮಾರು 10.30 ರ ವೇಳೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಕಾರು ಇರಲಿಲ್ಲ. ಎಷ್ಟು ಹುಡುಕಾಡಿದರೂ ಪತ್ತೆಯಾಗದ ಕಾರಣ ಕಳ್ಳರು

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು Read More »

ಕರಾವಳಿ
Scroll to Top