newskadaba

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹರಿಹರ, ಸೆ.14: ಅಡಿಕೆ ಮಾರಾಟಕ್ಕೆಂದು ಪೇಟೆಗೆ ತೆರಳಿದ ವೇಳೆ ಹರಿಹರ ಪಲ್ಲತ್ತಡ್ಕ ಪೇಟೆಯಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು(ಸೋಮವಾರ) ವರದಿಯಾಗಿದೆ.     ಮೃತರು ಮೂಲತಃ ಹರಿಹರ ಪಲ್ಲತ್ತಡ್ಕ ಗ್ರಾಮದ ಕೆರೆಕ್ಕೋಡಿ ನಿವಾಸಿ ಓಬಯ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಮರದ ಕೆತ್ತನೆ ಕೆಲಸ ಮಾಡುವರಾಗಿದ್ದು, ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಮೃತರು ತಾಯಿ, ಪತ್ನಿ, ಹಾಗೂ ಓರ್ವ ಪುತ್ರ ಮತ್ತು ಬಂಧುಗಳನ್ನು ಅಗಲಿದ್ದಾರೆ.    

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.14:  ಪ್ರಸ್ತುತ ಶ್ರೀ ಗೋಪಾಲಕೃಷ್ಣ ಪ್ರೌಢ ಬಿಳಿನೆಲೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ಪೋಷಕರು ಆರ್ಥಿಕವಾಗಿ ತುಂಬಾ ಹಿಂದುಳಿದವರಾಗಿದ್ದು. . ಕೊರೋನಾ ತೊಂದರೆಯಿಂದಾಗಿ ಮಕ್ಕಳು ಶಾಲೆಗಳಿಗೆ ಬರುವಂತಿಲ್ಲವಾ ದುದರಿಂದ ,ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹಳೆ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ನೀಡಿದ್ದಾರೆ. . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಮಕ್ಕಳಿಗೆ ಕಲಿಕಾ ಚಟುವಟಿಕೆಗಳನ್ನು ಆನ್ಲೈನ್ ಮೂಲಕ ಶಿಕ್ಷಕರು ನಡೆಸುತ್ತಿದ್ದಾರೆ. ಆದರೆ ಸಂಬಂಧಿಸಿದ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಮೃತಮತಿ’ ಸಿನಿಮಾ ಅಮೆರಿಕದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.       ಹದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಈ ಚಿತ್ರವನ್ನ ಮಾಡಲಾಗಿದ್ದು, ಇದೀಗ, ಅಮೆರಿಕದ ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿವಿಧ ದಶಗಳ ಚಿತ್ರಗಳ ಜೊತೆಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತರರಾಷ್ಟ್ರೀಯ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಶಬರಿಮಲೆ, ಸೆ.14:ಕೊರೋನಾ ಹಾವಳಿಯಿಂದಾಗಿ ಸದ್ಯದ ಮಟ್ಟಿಗೆ ಯಾವುದೇ ದೇವಲಾಯಗಳಲ್ಲಿ ಪೂಜೆ ಪುನಸ್ಕಾರಗಳಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶವನ್ನು ಕಲ್ಪಿಸಲಾಗಿಲ್ಲ. ಬದಲಾಗಿ ಕೋವಿಡ್ ನಿಯಮಗಳಿಗನುಸಾರವಾಗಿ ಭಾಗವಹಿಸಲು ಸರ್ಕಾರ ಆದೇಶ ನೀಡಿದೆ.   ನಿಗಧಿತ ಸಮಯಕ್ಕಾನುಸಾರವಾಗಿ, ಹಾಗೂ ದಿನಕ್ಕೆ ಇಂತಿಷ್ಟು ಪೂಜೆಗಳಿಗೆ ಅವಕಾಶ ಎಂಬಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಕನ್ಯಾಸ್ವಾಮಿಗಳ ಶ್ರೇಷ್ಟ ಹಾಗೂ ಪ್ರಸಿದ್ದ ದೇವಲಾಯವಾದ ಶಬರಿಮಲೆಗೂ ಕೋವಿಡ್ ನಿರ್ಭಂದ ಹೇರಲಾಗಿದೆ.  ‘ಕನ್ನಿಮಾಸ ಪೂಜೆಗಾಗಿ’ ಶಬರಿಮಲೆ ದೇವಸ್ಥಾನವು ಸೆ. 16 ರಂದು ಮತ್ತೆ ತೆರೆಯಲಿದೆ. ತದನಂತರ

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್ Read More »

ರಾಷ್ಟ್ರೀಯ ನ್ಯೂಸ್

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.14:  ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿ ಸೇವೆ ಸಲ್ಲಿಸಿದ್ದ ಯೋಗೀಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಆದೇಶಿಸಿದ್ದಾರೆ. ತುಮಕೂರಿನ ಅಡಿಕೆ ವ್ಯಾಪಾರಿಯೋರ್ವರ ಹಣ ದರೋಡೆ ಪ್ರಕರಣದಲ್ಲಿ ಶಾಮೀಲು ಆಗಿದ್ದಾರೆಂಬ ಆರೋಪದಲ್ಲಿ ಈ ಅಮಾನತು ಆದೇಶ ಹೊರಡಿಸಲಾಗಿದೆ.   ತುಮಕೂರಿನ ಅಡಿಕೆ ವ್ಯಾಪಾರಿ ಮೋಹನ್ ಎಂಬುವವರು, ಅಡಿಕೆ ವ್ಯಾಪಾರ ಮಾಡಿದ್ದ ಬಾಕಿ ಹಣವನ್ನು ತರಲು ತನ್ನ ಕೆಲಸಗಾರರನ್ನು ಕಳುಹಿಸಿದ್ದರು. ಅವರು ಹಣ ಪಡೆದು ಕಾರಿನಲ್ಲಿ ಬರುತ್ತಿರುವಾಗ

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.14: ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.     ಕೇರಳ ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು

ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ Read More »

ಕರಾವಳಿ

ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಪಂಜ, ಸೆ.14: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌, ಜೈ ಕರ್ನಾಟಕ ಯುವಕ ಮಂಡಲ, ಕೃಪಾ ಯುವತಿ ಮಂಡಲ ಚಿಂಗಾಣಿಗುಡ್ಡೆ ಹಾಗೂ ಶ್ರೀ ಶಾರದಾಂಬಾ ಭಜನಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ನಡೆದ 2 ದಿನದ ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಕಳೆದ ದಿನ ನಡೆಯಿತು.    

ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಸೇವೆಗಳು ಆರಂಭ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.14:  ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಹಲವು ದೇವಾಲಯಗಳ ಬಾಗಿಲನ್ನು ಬಂದ್ ಮಾಡಲಾಗಿತ್ತು. ಎಲ್ಲ ಸೇವೆಗಳು ಸ್ಥಗಿತಗೊಂಡಿತ್ತು. ಇದೀಗಾ, ಮತ್ತೆ ಪ್ರಸಿದ್ದ, ಪವಿತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಪೂಜಾ ಸೇವೆಗಳು ಇಂದಿನಿಂದ ಆರಂಭಗೊಂಡಿದೆ.   ಕಳೆದೊಂದು ತಿಂಗಳಿನಿಂದ ದೇವರ ದರ್ಶನ ಆರಂಭವಾಗಿದ್ದರೂ, ಸೇವೆಗಳು ಆರಂಭವಾಗಿರಲಿಲ್ಲ. ಇಂದಿನಿಂದ ದಿನಕ್ಕೆ 30 ಸರ್ಪಸಂಸ್ಕಾರ ಸೇವೆ. 30 ನಾಗ ಪ್ರತಿಷ್ಠೆ, ಬೆಳಗ್ಗಿನ ಪಾಳಿಯ ಎರಡು ಪಾಳಿಯ ಆಶ್ಲೇಷ ಪೂಜೆ ತಲಾ 30 ರಂತೆ. ಮಹಾಪೂಜೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಸೇವೆಗಳು ಆರಂಭ Read More »

ಕರಾವಳಿ, ಕರ್ನಾಟಕ

ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ರವಿವಾರ) 62 ಮಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 11,754 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ.   ಕಡಬ ತಾಲೂಕಿನ ಕುಟ್ರುಪಾಡಿ 13 ವರ್ಷದ ಬಾಲಕ, ಬಲ್ಯ 48 ವರ್ಷದ ಮಹಿಳೆ, ನೂಜಿಬಾಳ್ತಿಲ 62 ವರ್ಷದ ಮಹಿಳೆ, ಕೋಡಿಂಬಾಳದ 35 ವರ್ಷದ ಮಹಿಳೆ, 49 ವರ್ಷದ ಪುರುಷ, 16 ವರ್ಷದ ಬಾಲಕಿ, 62 ವರ್ಷದ ಮಹಿಳೆ, ಕೊಂಬಾರು 50

ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.13: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ (ಸೋಮವಾರ) ಆರಂಭವಾಗಲಿದೆ. ‘ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.     ಪೂಜಾ ಸೇವೆಗಳ ನಿಯಮಗಳು ಈ ಕೆಳಗಿನಂತಿವೆ: * ಸೇವಾರ್ಥಿಗಳಿಗೆ ಮಾತ್ರ ಭೋಜನ

ಕುಕ್ಕೆ ಸುಬ್ರಹ್ಮಣ್ಯ: ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ ಆರಂಭ Read More »

ಕರಾವಳಿ, ಕರ್ನಾಟಕ
Scroll to Top