newskadaba

ಕಾಸರಗೋಡು: ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.13: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ದಾರುಣ ಘಟನೆ ನೀಲೇಶ್ವರ ಬಂಗಳಂ ಎಂಬಲ್ಲಿ ನಡೆದಿದೆ. ಮೃತ ರಘುನಾಥ್ ( 55) ಎಂದು ಗುರುತಿಸಲಾಗಿದೆ.     ಕಳೆದ ದಿನ ಸಂಜೆ ಕೆಲಸ ಮುಗಿಸಿ ಮರಳುತ್ತಿದ್ದಾಗ ಮನೆ ಬಳಿ ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದಿದ್ದು ಇದನ್ನು ಗಮನಿಸಿದ್ದ ಪತ್ನಿ ಬೊಬ್ಬೆ ಹಾಕಿದ್ದಾರೆ. ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕೊರೊನಾ ತಪಾಸಣೆ ಬಳಿಕ ಮರಣೋತ್ತರ ಪರೀಕ್ಷೆ […]

ಕಾಸರಗೋಡು: ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.13:  ವಿವಾಹಿತ ಯುವತಿಯೋರ್ವಳು ಡೆತ್‌ನೋಟ್ ಬರೆದಿಟ್ಟು, ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, 28 ವರುಷ ಪ್ರಾಯದ ವಿವಾಹಿತೆ ಶಿಲ್ಪಾ  ಆತ್ಮಹತ್ಯೆಗೈದವರು.   ಈಕೆ ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿ. ಇವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವೊಂದಿದೆ ಎಂದು ತಿಳಿದುಬಂದಿದೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.13: ಬೆಳ್ಳಾರೆ ಪೇಟೆಯಲ್ಲಿ ರಾತ್ರಿ ಅಂಗಡಿಗೆ ನುಗ್ಗಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೆ.10 ರಂದು ರಾತ್ರಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿರುವ ಮಾಸ್ಟರ್‌ ಪ್ಲಾನ್‌ ಮತ್ತು ಪ್ಲೈವುಡ್‌ ಅಂಗಡಿಗೆ ನುಗ್ಗಿದ ಕಳ್ಳ ರೂ.9500 ನಗದು ಕದ್ದು ಪರಾರಿಯಾಗಿದ್ದ ಈ ಬಗ್ಗೆ ಅಂಗಡಿ ಮಾಲಕರು ಪೊಲೀಸರಿಗೆ‌ ದೂರು ನೀಡಿದ್ದಾರೆ.   ದೂರು ದಾಖಲಿಸಿಕೊಂಡ ಪೊಲೀಸರು ಸೆ.11 ರಂದು ರಾತ್ರಿ ಕಳ್ಳತನ ಮಾಡಿದ ಆರೋಪಿಯನ್ನು ಪಂಜಿಗಾರಿನಲ್ಲಿ ಬಂಧಿಸುವಲ್ಲಿ

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.13:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.     ಆದರೆ ಅಮಿತ್ ಷಾ ಅವರಲ್ಲಿ ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಉಳಿದರೆ ನಿರಂತರ ಚಿಕಿತ್ಸೆಗೆ ಸಹಾಯವಾಗಲಿದೆ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ ಇಂದು 59 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.12: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 59 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಕಾಮಣದಲ್ಲಿ 29 ವರ್ಷ ಪ್ರಾಯದ ಯುವಕ, ಕೋಂಡಿಬಾಳದ 60 ವರ್ಷ ಪ್ರಾಯದ, 70 ವರ್ಷ ಪ್ರಾಯದ ವ್ಯಕ್ತಿ, ಕೊಲದ 45 ವರ್ಷ ಪ್ರಾಯದ ವಕ್ತಿ, 68 ವರ್ಷ ಪ್ರಾಯದ ಮಹಿಳೆ, ನೆಲ್ಯಾಡಿ 55 ವರ್ಷ ಪ್ರಾಯದ ವ್ಯಕ್ತಿ, 15 ವರ್ಷ ಪ್ರಾಯದ ಬಾಲಕ, 34 ವರ್ಷ ಪ್ರಾಯದ ವ್ಯಕ್ತಿ,

ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ ಇಂದು 59 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ

(ನ್ಯೂಸ್ ಕಡಬ) newskadaba.com ಕಡಬ , ಸೆ. 12 :ಮಂಗಳೂರು ಗ್ರಾಮವಿಕಾಸ ಸಮಿತಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ, ಹಾಗೂ ದ. ಕ ಜಿಲ್ಲೆ ಸಹಕಾರ ಭಾರತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 3 ರವರೆಗೆ ಉಚಿತ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನಡೆಯಲಿದೆ ಎಂದು  ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ ಹೇಳಿದರು.   ಕಡಬದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತಾನಾಡಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಆಲಂಕಾರು: ಚಲಿಸುತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ ➤ ಚಾಲಕ ಪ್ರಾಣಾಪಯದಿಂದ ಪಾರು

(ನ್ಯೂಸ್ ಕಡಬ) newskadaba.com ಕೊಯಿಲ, ಸೆ.12: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲ ಸಮೀಪದ ನೀರಾಜೆ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿಯ ಮೇಲೆ ಮರವೊಂದು ಮುರಿದು ಬಿದ್ದ ಘಟನೆ ಇಂದು(ಶನಿವಾರ) ನಡೆದಿದೆ. ಮರ ಬಿದ್ದ ಪರಿಣಾಮದಿಂದಾಗಿ ಓಮ್ನಿ ಜಖಂಗೊಂಡು ಅದರ ಚಾಲಕ, ಕೊಯಿಲ ಶ್ರೀರಾಮ ಎಲೆಕ್ಟ್ರಿಕಲ್ಸ್‌ನ ಮಾಲಕ ಯೋಗಿಶ್‌ ಅಪಾಯದಿಂದ ಪಾರಾಗಿದ್ದಾರೆ.     ನಿರಂತರವಾಗಿ ಎಡೆಬಿಡದೆ ಸುರುಯುತ್ತಿದ್ದ ಮಳೆಗೆ ಕೊಯಿಲ ನೀರಾಜೆ ಸಮೀಪ ರಸ್ತೆ ಬದಿಯಲ್ಲಿದ್ದ ಹಲಸಿನ ಮರವೊಂದು ಮುರಿದು ಬಿದ್ದಿದೆ. ಈ ಘಟನೆಯ ಪರಿಣಾಮ ಸುಮಾರು ಅರ್ಧಗಂಟೆಯಷ್ಟುರಸ್ತೆಯಲ್ಲಿ

ಆಲಂಕಾರು: ಚಲಿಸುತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರ ➤ ಚಾಲಕ ಪ್ರಾಣಾಪಯದಿಂದ ಪಾರು Read More »

ಕರಾವಳಿ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12 : ನಗರದಲ್ಲಿ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ವಿಪರೀತ ಮಳೆಯಿಂದ ಅನೇಕ ಮನೆಗಳ ಆವರಣಗಳ ಕುಸಿತ, ತೋಟಗಾರಿಕಾ ಬೆಳೆ ನಷ್ಟ, ವಿವಿಧ ಹಂತದಲ್ಲಿ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಇಂದು ಮಾಜಿ ಶಾಸಕ ಐವನ್ ಡಿಸೋಜ ಭೇಟಿ ನೀಡಿ, ಪರಿಶೀಲಿಸಿದರು.   ಸಂಕಷ್ಟಕ್ಕೊಳಗಾದವರಿಗೆ ಪುನರ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಳೆಯಿಂದಾದ ನಷ್ಟವನ್ನು ಅಂದಾಯಿಸಿ, ಶಾಸಕರು ಮತ್ತು ಉಸ್ತುವಾರಿ ಸಚಿವರು ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕೆಂದು ಜಿಲ್ಲಾಡಳಿತಕ್ಕೆ

ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಅಕ್ರಮ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 12. ತೊಕ್ಕೊಟ್ಟಿನಿಂದ ಕೇರಳಕ್ಕೆ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಪೊಲೀಸ್ ಉಪವಿಭಾಗದ ಎಸಿಪಿಯವರ ನಿರ್ದೇಶನದಂತೆ ಉಳ್ಳಾಲ ಠಾಣಾಧಿಕಾರಿ ನೇತೃತ್ವದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಬಂದ್ಯೋಡು ಮಂಗಳಪಾಡಿಯ 23 ವರ್ಷದ ರೆಜಿನ್ ಹಾಗೂ 21 ವರ್ಷದ ಧೀರಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಯಾವುದೇ ದಾಖಲೆಯಿಲ್ಲದೆ, ಇಬ್ಬರು ಅಕ್ರಮ ಮದ್ಯ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕೋಟೆಕಾರು ಅಜ್ಜನಕಟ್ಟೆ ಬಳಿ

ಅಕ್ರಮ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.12: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್‌ 19 ಪರೀಕ್ಷೆಯು ಸೆ.14 ರಂದು ಬೆಳಿಗ್ಗೆ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.   ಬೆಳಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಮಣ, ಬೆಳಂದೂರು,ಕುದ್ಮಾರು ಗ್ರಾಮದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದು ತಪಾಸನೆ ಮಾಡಿಕೊಳ್ಳುವಂತೆ ಬೆಳಂದೂರು ಗ್ರಾಮ ಪಂಚಾಯತ್‌ ಪ್ರಕಟನೆಯಲ್ಲಿ ತಿಳಿಸಿದೆ.    

ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್ Read More »

ಕರಾವಳಿ, ಕರ್ನಾಟಕ
Scroll to Top