newskadaba

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ

(ನ್ಯೂಸ್ ಕಡಬ) newskadaba.com ಆಲೆಟ್ಟಿ, ಆ.08:  ಈಗಾಗಲೇ, ಕರಾವಳಿ ಗ್ರಾಮೀಣ ಭಾಗಗಳು ಮಳೆಯ ಅಬ್ಬರಕ್ಕೆ ನಲುಗುತ್ತಿದೆ. ಅಲ್ಲಲ್ಲಿ ಗುಡ್ಡ ಕುಸಿತಗೊಳ್ಳುತ್ತಿದೆ.  ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ಮೊರಂಗಲ್ಲು ಶಿವರಾಮ ರೈ ಯವರ ಮನೆ ಹಿಂಬದಿ ಭಾರಿ ಪ್ರಮಾಣದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿತಗೊಂಡು ಅಪಾರ ಪ್ರಮಾಣದ ನಷ್ಟವಾಗಿದೆ.   ತಡರಾತ್ರಿ ಸುಮಾರು 1 ಗಂಟೆ ಸುಮಾರಿಗೆ ನಾಯಿ ಜೋರಾಗಿ ಬೊಗಳಿದಾಗ ಮನೆಯ ಒಳಗೆ ಮಲಗಿ ನಿದ್ರಿಸಿದ್ದ ಶಿವರಾಮ ರೈ ದಂಪತಿ ಯವರು  ಎಚ್ಚರಗೊಂಡು ಹೊರಗೆ […]

ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ Read More »

ಕರಾವಳಿ, ಕರ್ನಾಟಕ

ಬಿರುಮಲೆ ಗುಡ್ಡದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಅನ್ಯಕೋಮಿನ 5 ಮಂದಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com.ಪುತ್ತೂರು ,ಆ.8: ಬಿರುಮಲೆ ಗುಡ್ಡೆಯಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ಕು ಮುಸ್ಲಿ ಯುವಕರು ಮತ್ತು ಹಿಂದೂ ಯುವತಿಯನ್ನು ಪತ್ತೆ ಮಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸರಿಗೊಪ್ಪಿಸಿದ ಘಟನೆ ಶನಿವಾರ ನಡೆದಿದೆ. ಬಿರುಮಲೆ ಗುಡ್ಡದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಖಚಿತ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಕೇರಳ ರಾಜ್ಯ ನೋಂದಾವಣೆ ಹೊಂದಿದ ಕಾರು ಸಹಿತ ಮೂವರು ಯುವಕರು ಮತ್ತು ಓರ್ವ ಯುವತಿ ಗಾಂಜಾ

ಬಿರುಮಲೆ ಗುಡ್ಡದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಅನ್ಯಕೋಮಿನ 5 ಮಂದಿ ಪೊಲೀಸ್‌ ವಶಕ್ಕೆ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.8: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. ಕೆಲವೆಡೆ ಸೇತುವೆ

ಕರಾವಳಿಯಲ್ಲಿ ಮುಂದುವರಿದ ವರುಣನ ರುಧ್ರನರ್ತನ➤ ಚಾರ್ಮಾಡಿ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ Read More »

ಕರಾವಳಿ

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ , ಆ.08:  ಆಯತಪ್ಪಿದ ಟಿಪ್ಪರ್‌ವೊಂದು ಪಳ್ಳಿ ನಿಂಜೂರು ಬಳಿ ರಸ್ತೆ ಪಕ್ಕದ ಮದಗಕ್ಕೆ ಉರುಳಿ ಬಿದ್ದ ಪರಿಣಾಮ ಟಿಪ್ಪರ್ ಚಾಲಕ ಸಹಿತ ಇಬ್ಬರು ಮೃತಪಟ್ಟಿದ್ದಾರೆ.     ಟಿಪ್ಪರ್ ಚಾಲಕ ಕುಕ್ಕುಂದೂರು ಗಣಿತ ನಗರ ನಿವಾಸಿ ಅರುಣ್‌ಕುಮಾರ್(40) ಹಾಗೂ 20 ಹರೆಯದ ಕ್ಲೀನರ್ ಮೃತಪಟ್ಟವರು. ಕ್ಲೀನರ್‌ನ ಬಗ್ಗೆ ಮಾಹಿತಿ ಲಭಿಸಿಲ್ಲ. ಬೈಲೂರು ಜಾರ್ಕಳದ ಸುಧಾಕರ ಎಂಬುವರಿಗೆ ಸೇರಿದ ಟಿಪ್ಪರ್‌ನಲ್ಲಿ ಮಣ್ಣು ಸಾಗಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ಮದಗಕ್ಕೆ ಉರುಳಿದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರಾವಳಿ

ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಆ.08:  ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟ್ ಕಳೆದ ವರ್ಷದಂತೆ ಮಹಾಕುಸಿತಕ್ಕೆ ತುತ್ತಾಗುವ ಭೀತಿ ಎದುರಾಗಿದೆ. ಕೆಲದಿನಗಳಿಂದ ಘಾಟಿಯ ಕೆಲವೆಡೆ ಸಣ್ಣಪ್ರಮಾಣದಲ್ಲಿ ಕುಸಿತ ಆರಂಭಗೊಂಡಿದ್ದು, ಈಗ ಅಲೆಕಾನ್ ಪ್ರದೇಶದ ಹತ್ತಿರ ರಾಷ್ಟ್ರೀಯ ಹೆದ್ದಾರಿಯೇ ಬಿರುಕು ಬಿಟ್ಟಿದೆ. ಮಲಯಮಾರುತ, ನಾಲ್ಕನೇ ತಿರುವು ಹಾಗೂ ಅಣ್ಣಪ್ಪ ಬೆಟ್ಟ- ಅಲೆಕಾನ್ ನಡುವೆ ಕೆಲದಿನಗಳಿಂದ ರಸ್ತೆ ಬದಿ ಗುಡ್ಡ ಸಣ್ಣ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಶುಕ್ರವಾರ ಅಲೆಕಾನ್ ಸಮೀಪ ದರೆ ಕುಸಿದು ರಸ್ತೆಗೆ ಕಲ್ಲುಮಣ್ಣು ಮರ

ಮಹಾಕುಸಿತಕ್ಕೆ ತುತ್ತಾಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.08: ಲಾಠಿ ಹಿಡಿದು ಟ್ರಾಫಿಕ್ ಕಂಟ್ರೋಲ್ ಮಾಡುವ ಪೋಲೀಸರು ಹಾರೆ, ಬುಟ್ಟಿ ಹಿಡಿದು ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದು ವ್ಯಾಪಕ ಪ್ರಶಂಸೆಗೆ ಕಾರಣವಾಯಿತು. ಇದು ಸಾಧ್ಯವಾಗಿದ್ದು ಬಿ.ಸಿ.ರೋಡಿನ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಮಾಡಿದ ಮಾದರಿ ಕಾರ್ಯದಿಂದಾಗಿ. ಭಾರೀ ಮಳೆಗೆ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡಗಳೆದ್ದು ವಾಹನ ಸವಾರರಿಗೆ ಭಾರೀ ಸಂಕಷ್ಟ ಎದುರಾಗಿತ್ತು. ಇದನ್ನೆಲ್ಲಾ ಕಂಡು ಸಂಚಾರ ನಿಯಂತ್ರಣ ಕರ್ತವ್ಯವನ್ನು ಮಾಡುವ ಪೊಲೀಸರೇ ಸ್ವತಃ ಹಾರೆ, ಬುಟ್ಟಿ ಹಿಡಿದು ಹೊಂಡಗಳನ್ನು ಮುಚ್ಚವ

ಬಂಟ್ವಾಳ : ಟ್ರಾಫಿಕ್ ಕಂಟ್ರೋಲ್ ಪೋಲೀಸ ರಿಂದ ಹೆದ್ದಾರಿ ರಸ್ತೆ ದುರಸ್ತಿ Read More »

ಕರಾವಳಿ, ಕರ್ನಾಟಕ

ಅಪರಿಚಿತ ವಾಹನ ಡಿಕ್ಕಿ ಉಳ್ಳಾಲದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com.ಉಳ್ಳಾಲ,ಆ.8: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ‌ ಸೇತುವೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟವರನ್ನು ಹರೇಕಳ ನಿವಾಸಿ ಹಮೀದ್ ಎಂಬವರ ಪುತ್ರ ಶಬೀರ್ (24) ಎಂದು ಗುರುತಿಸಲಾಗಿದೆ. ಹಮೀದ್‌ ಅವರು ತಮ್ಮ ರಾಯಲ್‌‌ ಎನ್ಫೀಲ್ಡ್‌‌ ಬೈಕ್‌‌ನಲ್ಲಿ ಮಂಗಳೂರಿನಿಂದ ಹರೇಕಳದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಶಬೀರ್ ಸ್ಥಳದಲ್ಲೇ

ಅಪರಿಚಿತ ವಾಹನ ಡಿಕ್ಕಿ ಉಳ್ಳಾಲದ ಯುವಕ ಮೃತ್ಯು Read More »

ಕರಾವಳಿ

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.08:  ಕಳೆದ ದಿನ ಕಡಬ ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು 48 ಗಂಟೆ ಸೀಲ್ ಡೌನ್ ಮಾಡಲಾಗಿದೆ. ಕಚೇರಿಯ 59 ವರ್ಷ ಸಿಬ್ಬಂದಿಯ ಕೊವೀಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.   ಈ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.  

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.   ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top