newskadaba

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. […]

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುವಾರದಂದು 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರದಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿತ್ತು.  

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »

ಕರ್ನಾಟಕ

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು 09. ಇತ್ತೀಚಿನ ದಿನಗಳಲ್ಲಿ ಸೈನಿಕರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟದ ಹೆಸರಿನಲ್ಲಿ ಓಎಲ್‍ಎಕ್ಸ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ತಾವು ಸೇನೆಯಲ್ಲಿ ಸೇವೆ ಸಲ್ಲಿಸಿದವರು ಎಂದು ಕೆಲವು ಕಿಡಿಗೇಡಿಗಳು, ಸಮವಸ್ತ್ರ ಧರಿಸಿದ್ದ ಸೈನಿಕರ ಭಾವಚಿತ್ರವನ್ನು ಆಪ್‍ಲೋಡ್ ಮಾಡಿ, ತಾವು ಸೈನಿಕರೆಂದು ಬಿಂಬಿಸಿ ವಾಹನಗಳು ಮಾರಾಟಕ್ಕೆ ಇದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಬಳಿಕ ತಮ್ಮನ್ನು ಸಂಪರ್ಕಿಸಿದವರಿಂದ ಮುಂಗಡ ಹಣ ವಸೂಲಿ

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ Read More »

ಕರಾವಳಿ

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು

(ನ್ಯೂಸ್ ಕಡಬ) newskadaba.com.ಸೌತಾಂಪ್ಟನ್‌,ಜು.8: ಕೊರೊನಾ ಇಡೀ ಜಗತ್ತನ್ನೆ ಭಯ ಬಿಳಿಸಿದರೆ ಇತ್ತ ಕ್ರಿಕೆಟ್ ಕೊರೊನಾಗೆ ಸೆಡ್ಡು ಹೊಡೆಯಲು ಹೊರಟಿದೆ. ಬರೋಬ್ಬರಿ 4 ತಿಂಗಳಿಂದ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನುಂಗಿ, ಜಗತ್ತಿನ ತುಂಬ ಹರಡಿರುವ ಕೊರೊನಾ ಪೀಡೆಗೆ ಇನ್ನು ಅಂಜುತ್ತ ಕುಳಿತರೆ ಸಾಧ್ಯವಾಗದು ಎಂಬ ದಿಟ್ಟ ನಿರ್ಧಾರಕ್ಕೆ ಬಂದ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡಗಳು ಬುಧವಾರದಿಂದ ಇಲ್ಲಿ ಟೆಸ್ಟ್‌ ಕದನಕ್ಕೆ ಇಳಿಯಲಿವೆ. ಇದು ಹಿಂದಿನ ಮಾಮೂಲು ಕ್ರಿಕೆಟ್‌ ಟೆಸ್ಟ್‌ ಪಂದ್ಯಗಳಂಥಲ್ಲ. ಸಂಪೂರ್ಣ ಬದಲಾವಣೆಯೊಂದಿಗೆ ಕೊರೊನಾ ಭೀತಿ

ಕೊರೊನಾ ಮಧ್ಯೆ ಕ್ರಿಕೆಟ್ ಆಟಕ್ಕೆ ಅಂಕಣಕ್ಕಿಳಿದ ಕ್ರಿಕೆಟಿಗರು Read More »

ಕ್ರೀಡಾ ನ್ಯೂಸ್

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ. ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top