newskadaba

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ […]

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ

ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.12:ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ರಸ್ತೆಯಲ್ಲಿ ರಾತ್ರಿ ಜಿಂಕೆಗಳ ಓಡಾಟ ಕಂಡುಬಂದಿದೆ.ಇದನ್ನು ನೋಡಿದ ಸ್ಥಳೀಯರು ಛಾಯಚಿತ್ರ ಸೆರೆಹಿಡಿದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಎಸ್‍ಎಸ್‍ಪಿಯು ಕಾಲೇಜಿನ ಬಳಿಯ ವಲ್ಲೀಶಾ ಸಭಾಭವನದ ರಸ್ತೆಯಲ್ಲಿ ರಾತ್ರಿ 2 ಜಿಂಕೆಗಳು ರಸ್ತೆ ದಾಟುತ್ತಿದ್ದವು ಅದೇ ವೇಳೆ ವಾಹನಗಳು ಹೋದುದರಿಂದ ಅಲ್ಲೇ ಸ್ವಪ್ಪ ಹೊತ್ತು ನಿಂತು ಅಲ್ಲಿಂದ ಓಡಿವೆ. ಈ ಹಿಂದೆ ರಾತ್ರಿ ಹೊತ್ತಲ್ಲೆ ಆನೆಗಳು ಕಂಡುಬಂದಿದ್ದವೂ ಹೀಗೆ ಕಾಡು ಪ್ರಾಣಿಗಳು ಪದೇ ಪದೇ ಸುಬ್ರಹ್ಮಣ್ಯ ಪ್ರದೇಶದಲ್ಲಿ ಓಡಾಟ ನಡೆಸುವುದು ಸರ್ವೆಸಾಮಾನ್ಯ ವಾಗಿದೆ.  

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ Read More »

ಕರಾವಳಿ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.   ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ Read More »

ಕರಾವಳಿ, ಕರ್ನಾಟಕ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್

(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು.

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.11:ಕಳೆದ ಮೂರು ತಿಂಗಳಿಂದ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ದ ಹೋರಾಟ ನಡೆಸಿದ ವೈದ್ಯರು, ಪೋಲಿಸರು, ಆರೋಗ್ಯ ಕಾರ್ಯಕರ್ತರು,ಪೌರಕಾರ್ಮಿಕರಿಗೆ ಗೌರವ ಸೂಚಿಸುವ ಸಲುವಾಗಿ ಬೆಂಗಳೂರಿನ ವಿಧಾನಸೌಧದ ಮುಂದೆ ಪುಷ್ಪ ಪ್ರದರ್ಶನ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಮಹಾಮಾರಿ ಭಾರೀ ಅನಾಹುತವನ್ನೇ ಉಂಟು ಮಾಡುತ್ತಿದೆ. ಇದರ ವಿರುದ್ದ ಹಗಳು ರಾತ್ರಿ ಎನ್ನದೆ ಹೋರಾಟ ನಡೆಸಿದವರು ಕೊರೊನಾ ವಾರಿಯರ್ಸ್, ವೈದ್ಯರು ತಮ್ಮ ಜೀವವನ್ನು ಪಣಕಿಟ್ಟು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಇವರೊಂದಿಗೆ ಮಹಾಮಾರಿ ನಿಯಂತ್ರಣ ಮಾಡಲು ಲಾಕ್ ಡೌನ್

ಕೊರೊನಾ ವಾರಿಯರ್ಸ್‍ಗೆ ಪುಷ್ಪ ಪ್ರದರ್ಶನದ ಮೂಲಕ ಗೌರವ Read More »

ಕರಾವಳಿ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.   ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು. ಸದ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಏರಿಕೆಯತ್ತ ಪೆಟ್ರೋಲ್, ಡೀಸೆಲ್ ದರ

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.11:ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಪರಿಣಾಮ ನಮ್ಮ ದೇಶದಲ್ಲೂ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‍ಗೆ 44 ಪೈಸೆ ಹೆಚ್ಚಳವಾದರೆ, ಡೀಸೆಲ್ ದರ 58 ಪೈಸೆ ಏರಿಕೆ ಕಂಡಿದೆ. ಈಗಾಗಳೆ ಕೊರೊನಾ ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ತೈಲ ದರ ಏರಿಕೆಯಿಂದ ಮತ್ತೆ ಹೊರೆಯಾಗಿದೆ.ಕಳೆದ ಮೂರು ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಬದಲಾಗುತ್ತಲೇ ಇದೆ.ಇದರೊಂದಿಗೆ ಮಾ.14ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ 3 ರೂ, ಅಬಕಾರಿ ಸುಂಕವನ್ನು

ಏರಿಕೆಯತ್ತ ಪೆಟ್ರೋಲ್, ಡೀಸೆಲ್ ದರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.10:  ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡಿಗೂ ಕಾಲಿಟ್ಟಿದ್ದು, ಮಲೆನಾಡಿಗರು ಕಂಗಾಲಾಗಿದ್ದಾರೆ.. ಈಗಾಗಲೇ ಕಳೆದ ಎರಡು ದಶಕಗಳಿಂದ ಅಡಕೆಗೆ ಹಳದಿ ಎಲೆ ರೋಗ ತಗುಲಿದೆ. ಕಳೆದ ಎರಡು ವರ್ಷಗಳ ನಿರಂತರ ಭಾರೀ ಮಳೆಯಿಂದ ಅಡಕೆ ತೋಟಕ್ಕೆ ಕೊಳೆ ರೋಗ ಕೂಡ ಆವರಿಸಿತ್ತು. ತೋಟದಲ್ಲಿ ಎರಡು ಮೂರು ಅಡಿ ನೀರು ನಿಂತಿತ್ತು.   ಇದರಿಂದ ಮಲೆನಾಡಿಗರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದರು. ಹೀಗೆ ಹಲವು ಸಮಸ್ಯೆಗಳ ನಡುವೆ ಕೆಲವರು ಅಡಕೆಯನ್ನು ಕಷ್ಟಪಟ್ಟು ಉಳಿಸಿಕೊಂಡಿದ್ದರು.

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೊರೊನಾಗೆ ಶಾಸಕ ಬಲಿ

(ನ್ಯೂಸ್ ಕಡಬ) newskadaba.com.ಚೆನ್ನೈ,ಜೂ.10: ಮಾರಕ ಕೊರೊನಾ ವೈರಸ್‍ಗೆ ತಮಿಳುನಾಡಿನ ಡಿಎಂಕೆ ಶಾಸಕ ಜೆ.ಅನ್ಬಳಗನ್ ಬಲಿಯಾಗಿದ್ದಾರೆ. ಕಳೆದ ಜೂನ್ 2 ರಂದು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. 61 ವರ್ಷದ ಅನ್ಬಳಗನ್‍ಗೆ ಕೃತಕ ಉಸಿರಾಟದ ಹಾಗೂ ನಿರಂತರ ಚಿಕಿತ್ಸೆ ಕೊಟ್ಟರೂ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರೊಂದಿಗೆ ಕೊರೊನಾಗೆ ಬಲಿಯಾದ ತಮಿಳುನಾಡಿನ ಮೊದಲ ರಾಜಕೀಯ ಮುಖಂಡ ಅನ್ಬಳಗನ್ ಅವರಾಗಿದ್ದಾರೆ. ಇವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಇ. ಪಳನಿಸ್ವಾಮಿ,ಅನ್ಬಳಗನ್ ಕುಟುಂಬಕ್ಕೆ ಸಾಂತ್ವನ

ಕೊರೊನಾಗೆ ಶಾಸಕ ಬಲಿ Read More »

ಕರಾವಳಿ

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್ ,ಜೂ.10: ಕಳೆದ ಎರಡು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಉಗ್ರರನ್ನು ಹೊಡೆದುರುಳಿಸುತ್ತಿದ್ದು ಬುಧವಾರ ಮತ್ತೆ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು ಕಳೆದ 72 ಗಂಟೆಗಳ ಅವಧಿಯಲ್ಲಿ ಇದು ಮೂರನೇ ಭಾರೀ ನಡೆದ ಕಾರ್ಯಾಚರಣೆ ಮಾಡಲಾಗಿದೆ. ಸೋಮವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದಿನ್ಗೆ ಸೇರಿದ ನಾಲ್ವರು ಉಗ್ರರನ್ನು ಹಾಗೂ

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top