newskadaba

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

(ನ್ಯೂಸ್ ಕಡಬ) newskadaba.com ಕಡಬ ಜೂ.10:  ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಸಾರ್ವಜನಿಕರಿಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಚೆನ್ನಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.   ಮಂಗಳವಾರದಂದು ಕಡಬ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದ ಲೋಕಾಯುಕ್ತ ಡಿವೈಎಸ್ಪಿ, ಅಂಗಡಿ, ಹೋಟೆಲ್, ಬ್ಯಾಂಕ್, ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಇರುವವರಿಗೆ ಕ್ಲಾಸ್ ತೆಗೆದುಕೊಂಡರು. ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್‌ಟೇಬಲ್ […]

ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.10: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2.194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ  ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು ಮೊದಲ ದಿನ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಭಕ್ತ ಸಮೂಹ ಹೆಚ್ಚಾಗಿತ್ತು. ಆದರೆ ಮಂಗಳವಾರ ಈ ಪ್ರಮಾಣ ಸ್ವಲ್ಪ ಕಡಿಮೆಯಾಗಿತ್ತು.ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಎರಡನೇ ದಿನ ಆಗಮಿಸಿದ ಭಕ್ತರಲ್ಲಿ ಉತ್ಸಾಹಕ್ಕೆ ಕೊರತೆ ಇರಲಿಲ್ಲ. ಭಕ್ತರಿಗೆ ಥರ್ಮಲ್ ಟೆಸ್ಟ್ ಮಾಡಿಸಿಯೇ ಒಳಗೆ ಬಿಡಲಾಗುತ್ತಿತ್ತು. ಕೊರೋನಾ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡನೇ ದಿನ 2 ಸಾವಿರಕ್ಕೂ ಅಧಿಕ ಭಕ್ತರು Read More »

ಕರಾವಳಿ, ಕರ್ನಾಟಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.10:  ಕೊರೊನಾ ಮಹಾಮಾರಿ ವಕ್ಕರಿಸಿ, ಲಾಕ್ ಡೌನ್ ಆದಾಗ ಇಡೀ ದೇಶವೇ ಸ್ತಬ್ಧವಾಗಿತ್ತು. ಅಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ದೇಶ ಬಡವಾಗಿದೆ. ಹಲವು ಕಂಪೆನಿಗಳು ಆರ್ಥಿಕ ಹೊಡೆತಕ್ಕೆ ತತ್ತರಿಸಿ ಶಾಶ್ವತವಾಗಿ ಬೀಗ ಜಡಿದವು. ಹಲವರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದರು. ಇನ್ನೂ ಕೆಲವು ಕಂಪೆನಿಗಳು ಅರ್ಧ ಸಂಬಳ ನೀಡಿ ದುಡಿಸಿಕೊಳ್ಳುತ್ತಿದ್ದಾರೆ. ಇಂತಹ ಕಠಿಣ ಸಮಯದಲ್ಲಿ ಕಂಗಾಲಾದ ಹಲವು ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹೌದು.. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಇದೀಗ ಪ್ರತಿಭಾವಂತ ಯುವಕ

ಆರ್ಥಿಕ ಸಂಕಷ್ಟವೇ ಮುಳುವಾಯ್ತು ➤ ಬೋಟ್ ನಲ್ಲಿ ನೇಣು ಹಾಕಿಕೊಂಡ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈಶ್ವರಮಂಗಲ ➤ 25 ಅಡಿ ಆಳಕ್ಕೆ ಉರುಳಿ ಮನೆಯ ಮೇಲೆ ಪಲ್ಟಿಯಾದ KSRTC ಬಸ್

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.10: ಪುತ್ತೂರಿನಿಂದ ಈಶ್ವರಮಂಗಲ ಕಡೆ ಸಂಚರಿಸುತ್ತಿದ್ದ  KSRTC ಬಸ್ ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪಲ್ಟಿಯಾಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಇಂದು  ಬೆಳಿಗ್ಗೆ ನಡೆದಿದೆ.   ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಧರೆಗುರುಳಿ 25 ಅಡಿ ಆಳದಲ್ಲಿರುವ ಮಂಜುನಾಥ ರೈ ಎಂಬವರ ಮನೆಯ ಬದಿಯ  ದನದ ಹಟ್ಟಿಯ ಮೇಲೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 21 ಜನ ಪ್ರಯಾಣಿಕರಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಚಾಲಕ ಹಾಗೂ

ಈಶ್ವರಮಂಗಲ ➤ 25 ಅಡಿ ಆಳಕ್ಕೆ ಉರುಳಿ ಮನೆಯ ಮೇಲೆ ಪಲ್ಟಿಯಾದ KSRTC ಬಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದ ಆದರೆ ಇದೀಗ ಯವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದು. ಶಿವಮೊಗ್ಗದಲ್ಲಿ ಇರುವುದಾಗಿ ಸ್ವತಃ ಪ್ರವೀಣ್ ಸಫಲ್ಯನೇ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ಇದರಿಂದ ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಇತ್ಯರ್ಥವಾಗಿದೆ. ಸದ್ಯ ಯುವಕ ಕ್ಷೇಮವಾಗಿದ್ದು ಮನೆಮಂದಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ನಾಪತ್ತೆಯಾಗಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆ ➤ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿದ್ದೆ ತಪ್ಪಾಯಿತೇ? Read More »

ಕರಾವಳಿ

ನಾಳೆಯಿಂದ ಮುಂಗಾರು ಜೋರು ➤ಆರೆಂಜ್ ಆಲರ್ಟ್ ಫೋಷಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11,12 ಮತ್ತು 13 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ 11 ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಳ್ಳುದರಿಂದಾಗಿ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡದಲ್ಲಿ ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಫೋಷಣೆ ಮಾಡಿದೆ. ಜೂ,1ರಂದೇ ಮುಂಗಾರು ಕೇರಳ ಪ್ರವೇಶಿಸಿತ್ತು ಆದರೆ ನಿಸರ್ಗ ಚಂಡಮಾರುತದಿಂದಾಗಿ ರಾಜ್ಯಕ್ಕೆ ಪ್ರವೇಶ ತಡವಾಗಿತ್ತು ಈಗ ಮುಂಗಾರು ಕರಾವಳಿಗೆ ಪ್ರವೇಶವಾಗಿದ್ದರೂ ಕೂಡ, ಕಳೆದ ಕೆಲವು ದಿನಗಳಿಂದ ಹೇಳಿಕೊಳ್ಳುವಂತ

ನಾಳೆಯಿಂದ ಮುಂಗಾರು ಜೋರು ➤ಆರೆಂಜ್ ಆಲರ್ಟ್ ಫೋಷಿಸಿದ ಜಿಲ್ಲಾಡಳಿತ Read More »

ಕರಾವಳಿ

ಕರಾವಳಿಯಲ್ಲಿ ಮುಂಗಾರು ಅಬ್ಬರ ➤ ಹೆಚ್ಚುತ್ತಿದೆ ಗುಡುಗು ಮಿಂಚಿನ ಆರ್ಭಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಈಗಾಗಲೇ ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಗುಡುಗು ಮಿಂಚಿನ ಆರ್ಭಟವೂ ಹೆಚ್ಚಾಗುತ್ತಿದೆ.ಕಳೆದ ಕೆಲ ದಿನಗಳ ಹಿಂದೆ ನಿಸರ್ಗ ಚಂಡ ಮಾರುತದ ಬಳಿಕ ಕರಾವಳಿಯಲ್ಲಿ ಮುಂಗಾರು ಕಣ್ಣ ಮುಚ್ಚಾಲೆ ಆಡುತ್ತಿದೆ. ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆ ಬಿರುಸುಗೊಂಡಿದ್ದು ಗುಡುಗು-ಸಿಡಿಲಿನ ಜೊತೆಗೆ ಮಳೆಯಾಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು,

ಕರಾವಳಿಯಲ್ಲಿ ಮುಂಗಾರು ಅಬ್ಬರ ➤ ಹೆಚ್ಚುತ್ತಿದೆ ಗುಡುಗು ಮಿಂಚಿನ ಆರ್ಭಟ Read More »

ಕರಾವಳಿ, ಕರ್ನಾಟಕ

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಆ್ಯಂಬುಲೆನ್ಸ್ ಚಾಲಕರೋರ್ವರಿಗೆ ಅಂಗಡಿಯೊಂದರ ಮಾಲಕ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಆರೋಪ ಮಂಗಳೂರಿನಲ್ಲಿ ನಡೆದಿದೆ. ಸುಳ್ಯದ ಆ್ಯಂಬುಲೆನ್ಸ್ ಚಾಲಕ ಅಭಿಲಾಷ್ ಅವರು ಅಸೌಖ್ಯಕ್ಕೊಳಗಾಗಿದ್ದ ರೋಗಿಯೋರ್ವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಬೆಳಗ್ಗಿನ ಜಾವ ಕರೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭ ಕುಡಿಯಲು ನೀರು ಅವಶ್ಯವಿದ್ದುದರಿಂದ ಫಳ್ನೀರ್‍ನಲ್ಲಿರುವ ಅಂಗಡಿಯೊಂದಕ್ಕೆ ತೆರಳಿ ನೀರು ಕೇಳಿದಾಗ ನೀರು ನಿರಾಕರಿಸಿ ನಿಂದಿಸಿದ ಆರೋಪ ವ್ಯಕ್ತವಾಗಿದೆ. ಇದರಿಂದ ಬೇಸರಗೊಂಡ ಆ್ಯಂಬುಲೆನ್ಸ್ ಚಾಲಕ ಬಂದರು ಠಾಣೆಯಲ್ಲಿ ದೂರು ದಾಖಳಿಸಿದ್ದಾರೆ. ಕೊರೊನಾ ವಾರಿಯರ್‍ಗೆ ಅಂಗಡಿಯಲ್ಲಿದ್ದಾತ ಕೋವಿಡ್ ರೋಗಿಗಳನ್ನು

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ Read More »

ಕರಾವಳಿ

ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.10: ಸುದೀರ್ಘ ಲಾಕ್‌ ಡೌನ್ ಬಳಿಕ ದೇವಸ್ಥಾನಗಳಲ್ಲಿ ಇದೀಗ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.  ಆದರೆ ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.ಇದಕ್ಕಾಗಿಯೇ ದೇಗುಲಗಳಲ್ಲಿ ಬಣ್ಣದಿಂದ ಬಾಕ್ಸ್ ‌ಗಳನ್ನು ಬಳಿಯಲಾಗಿದೆ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ಕೋತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಅದರ ಮೇಲೆ ಕುಳಿತ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಬಾರೀ ಮೆಚ್ಚುಗೆ ಗಳಿಸಿದೆ.   ಹೌದು ದಕ್ಷಿಣ ಕನ್ನಡ ಜಿಲ್ಲೆಯ

ಶ್ರೀ ಕಾರಿಂಜ ಸನ್ನಿಧಿಯಲ್ಲಿ ಅಪರೂಪದ ದೃಶ್ಯ ➤ ಅಂತರ ಕಾಯ್ದುಕೊಂಡು ನೈವೇದ್ಯ ಸ್ವೀಕರಿಸಿದ ವಾನರ ಸೇನೆ Read More »

ಕರಾವಳಿ, ಕರ್ನಾಟಕ

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದು. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವ ಯುವಕ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ(28) ಎನ್ನಲಾಗಿದೆ. ಈತ ಖಾಸಗಿ ಕಂಪೆನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ರಾತ್ರಿ ಪಾಳಿ ಕೆಲಸ ಮುಗಿಸಿ ಬರುತ್ತಿದ್ದ ಸಂದರ್ಭ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆ ಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೆ ನದಿಯ ಬಳಿ ಪತ್ತೆಗಾಗಿ ಹುಡುಕಾಟ ಕಾರ್ಯಚರಣೆ ಆರಂಭವಾಗಿದೆ.

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ? Read More »

ಕರಾವಳಿ
Scroll to Top