newskadaba

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆ ಮಾಡಲಾಗಿದ್ದು ಕೊಲ್ಯ ಸಾರಸ್ವತ ಕಾಲೊನಿ ನಿವಾಸಿ ಚೇತನ್ ಆಚಾರ್ಯ (33) ಎಂದು ಗುರುತ್ತಿಸಲಾಗಿದೆ.ಎರಡು ದಿನದ ಹಿಂದೆ ಮನೆಯಿಂದ ಹೊರಟಿದ್ದ ಚೇತನ್ ಬಳಿಕ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ  ಇಂದು ಬೆಳಿಗ್ಗೆ ಚೇತನ್ ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ […]

ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.9: ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಕ್ಯಾಂಪ್ಕ್ಕೊ ಸಂಸ್ಥೆಯು ಬೆಳೆಗಾರರ ಮತ್ತು ನೌಕರರ ಹಿತರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ 2 ಸಾವಿರ ಉದ್ಯೋಗಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ಕಡಿತ ಮಾಡದೆ ವೇತನವನ್ನು ಕ್ಲಪ್ತ ಸಮಯದಲ್ಲಿ ಪಾವತಿಸಿದೆ. 8 ಸಾವಿರ ಕ್ವಿಂಟಾಲ್ ಅಡಿಕೆಯನ್ನು ಬೆಳೆಗಾರರಿಂದ ಖರೀದಿಸಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅವರು ನಗರದ ಪ್ರತಿಕಾಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿ ಮಾತನಾಡುತ್ತಿದ್ದರು.    

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.9: ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11 ಹಾಗೂ 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.   ಜೂ.11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಜೂ.12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನಲ್ಲಿ ಕನಿಷ್ಠ 5 ಸೆಂ.ಮೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ

(ನ್ಯೂಸ್ ಕಡಬ) newskadaba.com.,ಮಂಗಳೂರುಜೂ.9:ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಪಿಲಿಕುಳದ ಡಾ ಶಿವರಾಮ ಕಾರಂತ್ ನಿಸರ್ಗಧಾಮ ಜೂ 10 ರಿಂದ ಪ್ರವಾಸಿಗರಿಗೆ ಮತ್ತೆ ಬಾಗಿಲು ತೆರೆಯಲಿದೆ. ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಸಂಸ್ಕøತಿ ಗ್ರಾಮ, ಆರ್ಬೋರೇಟಮ್, ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು, ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಇನ್ನೂ ಕೆಲದಿನಗಳ ಕಾಲ ಕಾಯಬೇಕಾಗಿದೆ. ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸುವಾಗ 6ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಮಾಸ್ಕ್ ಧಾರಣೆ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ Read More »

ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ,ಜೂ.8: ಕರ್ನಾಟಕ ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.ದೇವಾಲಯಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.   ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಿಗೆ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.      

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.6: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನೀಯ ಘಟನೆ ವರದಿಯಾಗಿದೆ.  ಹಲಸಿನ ಹಣ್ಣಿಗೆ ವಿಷ ಬೇರೆಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.   ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾ ಜೊತೆ ಡೆಂಗ್ಯೂ ಕಾಟ

(ನ್ಯೂಸ್ ಕಡಬ) newskadaba.com.ಕಡಬ,ಜೂ.9:ಕೊರೊನಾ ಕಾಟದ ಮಧ್ಯೆ ಇದೀಗ ಡೆಂಗ್ಯೂ ಜ್ವರ ವಕ್ಕರಿಸಿಕೊಂಡಿದೆ. ಪುತ್ತೂರು ಮತ್ತ ಕಡಬ ತಾಲೂಕಿನಲ್ಲಿ ಜೂನ್ ಮೊದಲ ವಾರದಲ್ಲಿ 53 ಪ್ರಕರಣಗಳು ಕಂಡು ಬಂದಿದೆ. ಕಡಬ ಪ್ರಾ,ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 1, ಕೊಯಿಲ 2. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 8, ಕೊಳ್ತಿಕೆ ಮತ್ತು ಶಿರಾಡಿಯಲ್ಲಿ 1, ಪಾಣಾಜೆ-31 ಸರ್ವೆ ಮತ್ತು ತಿಂಗಳಾಡಿಯಲ್ಲಿ 3 ಪ್ರಕರಣಗಳು ಕಂಡು ಬಂದಿದೆ.ಜನವರಿಯಿಂದ ಜೂನ್ 7ರ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 258 ಡೆಂಗ್ಯೂ

ಕೊರೊನಾ ಜೊತೆ ಡೆಂಗ್ಯೂ ಕಾಟ Read More »

ಕರಾವಳಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.09: ಹರಿಹರ ಪಲ್ಲತಡ್ಕ ಗ್ರಾಮ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರೂ ಒಂದೇ ದಿನ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರು ಒಂದೇ ದಿನ ನಾಪತ್ತೆಯಾಗಿದ್ದು, ಇದರ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದಲ್ಲಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.9:ಕೋವಿಡ್ ಹಿನ್ನೆಲೆಯಲ್ಲಿ ಕುವೈಟ್‍ನಿಂದ ರಾಜ್ಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಮತ್ತೆ ನಿರಾಶೆಯಾಗಿದೆ. ಕುವೈಟ್‍ನಿಂದ ಬೆಂಗಳೂರಿಗೆ ಜೂ. 16ಕ್ಕೆ ನಿಗದಿಯಾಗಿದ್ದ ವಿಮಾನ ಸಂಚಾರ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೋವಿಡ್‍ನಿಂದಾಗಿ ಕುವೈಟ್‍ನಲ್ಲಿ ಸಿಲುಕಿದ್ದ ಕನ್ನಡಿಗರಿಗೆ ವಂದೇ ಭಾರತ್ ಮಿಷನ್‍ನಡಿ ಏರ್‍ಲಿಫ್ಟ್ ಮಾಡಬೇಕೆಂದು ಅಲ್ಲಿನ ಕನ್ನಡಿಗರ ಆಗ್ರಹವಾಗಿತ್ತು.ಇದರಂತೆ ಸಂಕಷ್ಟದಲ್ಲಿದ್ದ ದವರರನ್ನು ಬೆಂಗಳೂರಿಗೆ ಕರೆತರಳು ಜೂ. 16 ಕ್ಕೆ ಗಡುವು ನೀಡಲಾಗಿತ್ತು ಆದರೆ ಇದೀಗ ಮತ್ತೆ ತಾಂತ್ರಿಕ ಸಮಸ್ಯೆಯಿಂದ ಈ ವಿಮಾನ ರದ್ದಾಗಿದೆ ಎಂದು ಕುವೈಟ್‍ನಲ್ಲಿರುವ ಭಾರತೀಯ ರಾಯಭಾರ

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ Read More »

ಕರಾವಳಿ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.   ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top