newskadaba

ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ, ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 4. ಐ.ಟಿ.ಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಶಿಶಿಕ್ಷು ವೃತ್ತಿಯ ಹೆಸರು- ಪಾಸಾ- ಒಟ್ಟು ಸ್ಥಾನಗಳ ಸಂಖ್ಯೆ-20, […]

ಕೆಎಸ್‍ಆರ್ ಟಿಸಿಯಲ್ಲಿ ತಾಂತ್ರಿಕ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ

ರೆಂಜಿಲಾಡಿ ಶಾಲಾ ದುರಸ್ತಿಗೆ ಸ್ಥಳ ಪರಿಶೀಲನೆ

  (ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.7   ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಡ್ಕ ರೆಂಜಿಲಾಡಿ ಹಿ.ಪ್ರಾ. ಶಾಲೆಯ ದುರಸ್ತಿ ಬಗ್ಗೆ ಬುಧವಾರ ಸ್ಥಳ ಪರಿಶೀಲಿಸಲಾಯಿತು. ಪ್ರಾಕೃತಿಕ ವಿಕೋಪ ನಿಧಿಯಿಂದ ರೆಂಜಿಲಾಡಿ ಶಾಲೆಗೆ ರೂ. ಎರಡುವರೆ ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಶಾಲೆಯ ಮೇಲ್ಚಾವಣಿ ಹಾಗೂ ಹೊರಾಂಗಣ ಜಗಲಿ ಅಭಿವೃದ್ಧಿಗೊಳಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ಕಡಬ ಜಿ.ಪಂ. ಸಹಾಯಕ ಇಂಜಿನೀಯರ್ ಭರತ್ ಶಾಲೆಗೆ ಬೇಟಿ ನೀಡಿ ಕಾಮಗಾರಿ ನಡೆಸಲು ಉದ್ದೇಶಿಸಿರುವ ಸ್ಥಳದ ಪರಿಶೀಲನೆ ನಡೆಸಿದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್,

ರೆಂಜಿಲಾಡಿ ಶಾಲಾ ದುರಸ್ತಿಗೆ ಸ್ಥಳ ಪರಿಶೀಲನೆ Read More »

ಕರಾವಳಿ

ಕಾಜರೊಕ್ಕು- ಶ್ರೀ ರಾಮಕುಂಜೇಶ್ವರ ದೇವಸ್ಥಾನ ಕಾಂಕ್ರಿಟೀಕರಣ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.6   ಕಡಬ ತಾಲೂಕು ರಾಮಕುಂಜ ಗ್ರಾಮದ ಕಾಜರೊಕ್ಕು-ಶ್ರೀ ರಾಮಕುಂಜೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟಿಕರಣಕ್ಕೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಯೋಜನೆ ಸಮರ್ಪಕ ಅನುಷ್ಠಾನವಾಗಬೇಕಾದಲ್ಲಿ ಜನರ ಪಾತ್ರ ಮುಖ್ಯ. ಕಾಮಗಾರಿ ನಡೆಯುವ ಸಂದರ್ಭ ಜನರು ತ್ಯಾಗ ಮನೋಭಾವನೆ ತೋರ್ಪಡಿಸಿ ಅಭಿವೃದ್ದಿಗೆ ಕೈಜೋಡಿಸಬೇಕು. ಅಭಿವೃದ್ದಿ ಕಾಮಗಾರಿಗಳು ನಡೆಯುವಾಗ ಗುಣಮಟ್ಟ ಪರಿಶೀಲನೆ ನಡೆಸುವುದು ಆಯಾ ಭಾಗದ ಜನರ ಕರ್ತವ್ಯವಾಗಬೇಕು. ಈ ಹಿಂದೆ ನಮ್ಮನ್ನಾಳಿದ ಕಾಂಗ್ರೆಸ್ಸ್ ಸರಕಾರ

ಕಾಜರೊಕ್ಕು- ಶ್ರೀ ರಾಮಕುಂಜೇಶ್ವರ ದೇವಸ್ಥಾನ ಕಾಂಕ್ರಿಟೀಕರಣ ಗುದ್ದಲಿಪೂಜೆ Read More »

ಕರಾವಳಿ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಅಕಾಡೆಮಿಕ್ ಆಫ್ ಹೈಯರ್ ಎಜುಕೇಷನ್ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿವೇತನ ಹಾಗೂ ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣಾ ಸಮಾರಂಭ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ

ಡಿ.7- ಆರೋಗ್ಯ ಸುರಕ್ಷಾ ಕಾರ್ಡ್, ಬೋಟ್ ಮಾಲಕರಿಗೆ ಪ್ರೋತ್ಸಾಹಕ ಉಡುಗೊರೆ ವಿತರಣೆ Read More »

ಕರಾವಳಿ

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.6   ಇಂದು ವಿಶ್ವ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಜಾಗತಿಕ ತಾಪಮಾನ. ಪರಿಸರ ಮಾಲಿನ್ಯ ಜಾಗತಿಕ ತಾಪಮಾನಕ್ಕೆ ಮುಖ್ಯ ಕಾರಣ ತಾಪಮಾನದಲ್ಲಿ ಹೆಚ್ಚಳವಾದಂತೆ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತದೆ. ಮಾಲಿನ್ಯ ನಿಯಂತ್ರಿಸಲು ನಾವೆಲ್ಲರೂ ಸಕ್ರಿಯವಾದ ಪಾತ್ರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಯನ್ಸ್ ಕ್ಲಬ್ ವೆಲೆನ್ಸಿಯಾ ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮವನ್ನು

ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ

ಪುತ್ತೂರು: ಮಗನಿಂದಲೇ ತಂದೆಯ ಕೊಲೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಕೆಲಸಕ್ಕೆ ಹೋಗದೇ ಮನೆಯಲ್ಲಿರುತ್ತಿದ್ದುದರಿಂದ ಮಗನಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಅಪ್ಪನನ್ನು ಮಗ ಮಚ್ಚಿನಿಂದ ಕುತ್ತಿಗೆಗೆ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಬೊಳ್ಳಿಂಬಳದ ನಿವಾಸಿಯಾಗಿರುವ ಕೃಷ್ಣ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯಿದಿದ್ದು, ಮಗ ಉದಯ ನಾಯ್ಕ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಪುತ್ತೂರು: ಮಗನಿಂದಲೇ ತಂದೆಯ ಕೊಲೆ Read More »

ಕರಾವಳಿ

ಲಾರಿ ಹಾಗೂ ಬಸ್ಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಬಸ್ಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಬಸ್ಸ್ ಚಾಲಕನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಅಪಘಾತವಾಗಿ ಬಸ್ ಜಖಂಗೊಂಡಿರುವುದಲ್ಲದೇ, ಸುನಿಲ್ ಎಂಬವರಿಗೆ ಬಲ ಭುಜಕ್ಕೆ ಗುದ್ದಿದ ನೋವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ. ಬಸ್ಸಿನಲ್ಲಿದ್ದ ಸಿಬ್ಬಂದಿಗಳಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹಾಗೂ ಬಸ್ಸ್ ನಡುವೆ ಅಪಘಾತ Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  2019-20ನೇ ಸಾಲಿನ ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವು ಪೊಲೀಸ್ ಪೆರೇಡ್ ಮೈದಾನದಲ್ಲಿ ದಿನಾಂಕ 01-12-2019 ರಿಂದ 03-12-2019 ವರೆಗೆ ನಡೆದಿದ್ದು, ಕ್ರೀಡಾಕೂಟದ ಸಮಾರೋಪ ಸಮಾರಂಭವು ನಿನ್ನೆ ಸಂಜೆ 4.00 ಗಂಟೆಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾಕೂಟದ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸನ್ಮಾನ್ಯ ಡಾ|| ಹರ್ಷ ಪಿ.ಎಸ್., ಐ.ಪಿ.ಎಸ್., ಪೊಲೀಸ್

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ Read More »

ಕರಾವಳಿ

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ಜಿಲ್ಲೆಯ ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯಾಗುವ ಆಸ್ಪತ್ರೆ ಮತ್ತು ಕ್ಲ್ಲಿನಿಕ್‍ಗಳಲ್ಲಿ ಗರ್ಭಿಣಿ ದಾಖಲಾತಿಯನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಪ್ರತಿ ತಿಂಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ Read More »

ಕರಾವಳಿ

ಉಚಿತ ಕಂಪ್ಯೂಟರ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4   ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದಿಂದ ಮುಖ್ಯಮಂತ್ರಿ ಕರ್ನಾಟಕ ಕೌಶಲ್ಯ ಯೋಜನೆಯಡಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ನಿರುದ್ಯೋಗಿ ಯುವಕ/ಯುವತಿಯರಿಗೆ ವಿಶೇಷವಾಗಿ ದೈಹಿಕ ವಿಕಲಚೇತನರಿಗೂ ಕೂಡಾ ಉಚಿತವಾಗಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕಂಪ್ಯೂಟರ್ ಹಾರ್ಡ್‍ವೇರ್ ಆ್ಯಂಡ್ ನೆಟ್ವರ್ಕಿಂಗ್ ತರಬೇತಿಗಳನ್ನು ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಮುಗಿಸಿದವರಿಗೆ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗವಕಾಶವನ್ನು ಕಲ್ಪಿಸಿ ಕೊಡಲಾಗುತ್ತದೆ. ಉಚಿತ ತರಬೇತಿಗಳು 90 ದಿವಸಗಳವರೆಗೆ ಇರುತ್ತದೆ. ಕನಿಷ್ಟ 18 ರಿಂದ 35 ವಯಸ್ಸಿನವರು ತರಬೇತಿಗೆ ಅರ್ಹರಾಗಿರುತ್ತಾರೆ.

ಉಚಿತ ಕಂಪ್ಯೂಟರ್ ತರಬೇತಿ Read More »

ಕರಾವಳಿ
Scroll to Top