newskadaba

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

(ನ್ಯೂಸ್ ಕಡಬ) newskadaba.com, ಶ್ರೀನಗರ. ನ.01. ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬೋನಿಗಮ್ ಎಂಬ ಗ್ರಾಮದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಗೆ ಆಹುತಿಯಾದ ಒಂದು ವಾಹನ ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದೆ ಎಂದು ತಿಳಿಸಲಾಗಿದೆ. ಮನೆಯ ಹೊರಭಾಗ ಪಾರ್ಕಿಂಗ್ ಮಾಡಿದ್ದ ವೇಳೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಕಾಶ್ಮೀರಿಗರು ಸೇರಿದಂತೆ ಐವರು ಕಾರ್ಮಿಕರನ್ನು […]

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು Read More »

ರಾಷ್ಟ್ರೀಯ ನ್ಯೂಸ್

ಕಳವು ನ್ಯೂಸ್

(ನ್ಯೂಸ್ ಕಡಬ) newskadaba.com  ಬಂಟ್ವಾಳ,  ಅ.31    ಮಗಳ ಹೆರಿಗೆ ಆರೈಕೆಗೆಂದು ಮನೆಗೆ ಬೀಗ ಹಾಕಿ ದೇರಳಕಟ್ಟೆ ಆಸ್ಪತ್ರೆಗೆ ಹೋದವರು ಆರೈಕೆಯ ನಂತರ ಮನೆಗೆ ಬಂದಾಗ ಸುಮಾರು 60,000 ಮೌಲ್ಯದ ಚಿನ್ನಾಭರಣಗಳು ಕಾಣೆಯಾದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ನಡೆದಿದೆ. ಮೋಹಿನಿಯವರು 03.10.2019 ರಂದು ಮನೆಯಿಂದ ತೆರಳಿದ್ದು, 30.10.2019 ರಂದು ಬಂದು ಬೀಗ ತೆಗೆದು ಒಳಗೆ ಹೋಗಿ ನೋಡಿದಾಗ ಹಿಂದಿನ ಬಾಗಿಲು ಸ್ವಲ್ಪ ತೆರೆದಿದ್ದು ನಂತರ ರೂಮಿನ ಒಳಗೆ ಬಂದು ನೋಡಿದಾಗ ಕಪಾಟು ತೆರೆದಿದ್ದು ಬಟ್ಟೆ ಬರೆ

ಕಳವು ನ್ಯೂಸ್ Read More »

ಕರ್ನಾಟಕ

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31

(ನ್ಯೂಸ್ ಕಡಬ) newskadaba.com  ಅ.31  ಪ್ರತಿ ವರ್ಷ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ್ ಅಥವಾ ರಾಷ್ಟ್ರೀಯ ಐಕ್ಯತಾ ದಿನ ಎಂದು ಆಚರಿಸಲಾಗುತ್ತದೆ. ಅಖಂಡ ಭಾರತದ ಒಗ್ಗೂಡುವಿಕೆಗೆ ಕಾರಣೀಭೂತರಾದ ಭಾರತದ ಸ್ವಾತಂತ್ರ್ಯ ಇತಿಹಾಸದ ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭ ಬಾಯ್ ಪಟೇಲ್ ಅವರ ಜನ್ಮ ಶತಾಬ್ದಿಯ ನೆನಪಿಗಾಗಿ ಈ ಆಚರಣೆಯನ್ನು 2014 ರಲ್ಲಿ ಭಾರತ ಸರಕಾರ ಆರಂಭಿಸಿತ್ತು. ಬ್ರಿಟಿಷರನ್ನು ಭಾರತದಿಂದ ಒಡ್ಡೋಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕರ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ಎದ್ದುಕಾಣುವ ಹೆಸರೇ ಸರ್ದಾರ್

ರಾಷ್ಟ್ರೀಯ ಐಕ್ಯತಾ ದಿನ ಅಕ್ಟೋಬರ್ -31 Read More »

ವಿಶೇಷ ಲೇಖನಗಳು

ಅಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ➤ಗಾಯಗೊಂಡ ಬೈಕ್ ಸವಾರ

(ನ್ಯೂಸ್ ಕಡಬ) newskadaba.com  ಪುತ್ತೂರು, ಅ.30  ಅಟೋರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಸವಾರ ಯಾದವ ಪೂಜಾರಿ ಎಂಬವರು ಗಾಯಗೊಂಡ ಘಟನೆ ಮಂಗಳವಾರದಂದು ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಜಂಕ್ಷನ್ ಬಳಿ ನಡೆಯಿತು. ಡಿಕ್ಕಿ ಹೊಡೆದ ಪರಿಣಾಮ, ಮೋಟಾರ್ ಸೈಕಲ್ ಸವಾರ ಯಾದವ ಪೂಜಾರಿ ಎಂಬವರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದುದರಿಂದ, ಅವರಿಗೆ ತಲೆಗೆ ಮತ್ತು ಕೈಗೆ ಗಾಯವಾಗಿರುತ್ತದೆ. ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ

ಅಟೋರಿಕ್ಷಾ ಮತ್ತು ಬೈಕ್ ಡಿಕ್ಕಿ ➤ಗಾಯಗೊಂಡ ಬೈಕ್ ಸವಾರ Read More »

ಕರಾವಳಿ

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ.29  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರಿಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಶರಾದ್ ಅರವಿಂದ್ ಬೊಬ್ಡೆ ಅವರನ್ನು ಮಂಗಳವಾರದಂದು ಅಧಿಕೃತವಾಗಿ ನೇಮಕ ಮಾಡಿದ್ದಾರೆ. ಈಗಿನ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ನ.18ಕ್ಕೆ ಮುಂದಿನ ಸಿಜೆಐ ಆಗಿ ಎಸ್.ಎ.ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಏಪ್ರಿಲ್ 23, 2021ಕ್ಕೆ ನಿವೃತ್ತಿ ಹೊಂದಲಿರುವ ಇವರು ಒಟ್ಟು 18

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ.29  ನಮ್ಮ ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಪ್ರತಿ ಕಾಲೇಜಿಗೆ 325 ಕೋಟಿ ರೂ. ಅನುದಾನ ಪ್ರಕಟಿಸಿದೆ. ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂತನ ಕಾಲೇಜುಗಳು ಸ್ಥಾಪನೆಯಾಗಲಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ವೆಚ್ಚ ಭರಿಸಬೇಕಿದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಬರಲಿವೆ ಮೂರು ಹೊಸ ವೈದ್ಯಕೀಯ ಕಾಲೇಜುಗಳು ➤ಕೇಂದ್ರದಿಂದ 325 ಕೋಟಿ ರೂ. ಅನುದಾನ Read More »

ಕರ್ನಾಟಕ

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ

(ನ್ಯೂಸ್ ಕಡಬ) newskadaba.com ಸಬಳೂರು, ಅ.29  ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ದೀಪಾವಳಿ ಕ್ರೀಡೋತ್ಸವ, ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭೆ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂದಿರ ವಠಾರದಲ್ಲಿ ಭಾನುವಾರದಂದು ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ರಾಮಚಂದ್ರ ನಾಯ್ಕರಿದ್ದರು. ಶ್ರೀ ರಾಮ ಗೆಳೆಯರ ಬಳಗದ ಗೌರವಾಧ್ಯಕ್ಷ ಪ್ರವೀಣ್ ನೀಡೇಲು, ಅಧ್ಯಕ್ಷ ಗುರುಪ್ರಸಾದ್ ಪಟ್ಟೆದಮೂಲೆ ಉಪಸ್ಥಿತರಿದ್ದರು. ಸಾಮೂಹಿಕ ಗೋಪೂಜೆಯನ್ನು

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28.  ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಎಂ ಜಿ ಬಾಸ್ಕರ ಎಂಬವರು ತನ್ನ ಪತ್ನಿ, ಮಗಳು, ಹಾಗೂ ಮೊಮ್ಮಗಳಾದ ಶ್ರಾವ್ಯ ಎಂಬವರೊಂದಿಗೆ ಉಜಿರೆ ಪೇಟೆಯ ಅಮೃತ ಟೆಕ್ಸ್ ಟೈಲ್ಸ್ ಅಂಗಡಿಯ ಮುಂಭಾಗದಲ್ಲಿ ರಸ್ತೆಯನ್ನು ದಾಟಲು ನಿಂತಿದ್ದಾಗ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕೊಂದು ಶ್ರಾವ್ಯ ನಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಬಿದ್ದ ಪರಿಣಾಮ ಹಣೆಗೆ

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಬೈಕ್ ಗಳೆರಡರ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.28.  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬೈಕ್ ಗ ಳೆರಡರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೇರಮುಗೇರು ಗ್ರಾಮದ ದರ್ಬೆ ಎಂಬಲ್ಲಿ ಶನಿವಾರದಂದು ನಡೆದಿದೆ. ರುಕ್ಮಯ್ಯ ಬಿ ಎಂಬವರು ಮುರ ಕಡೆಯಿಂದ ಪೇರಮುಗೇರು ಕಡೆಗೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಮೋಟಾರು ಸೈಕಲ್ ಸವಾರ ಮಹೇಂದ್ರ ಎಂಬವರು ಎದುರಿನಿಂದ ಬರುತ್ತಿದ್ದು ಎರಡೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಇಬ್ಬರೂ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿರುವುದಾಗಿ ಪ್ರಕರಣ

ಬೈಕ್ ಗಳೆರಡರ ನಡುವೆ ಡಿಕ್ಕಿ Read More »

ಕರಾವಳಿ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಪ್ರವಾಹದಿಂದ ಹಾನಿಯಾಗಿರುವ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 30 ಕೋ.ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಾಗೂ ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಶನಿವಾರದಂದು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಪ್ರವಾಹದಿಂದ ಹಾನಿಯಾಗಿರುವ ಪ್ರದೇಶದಲ್ಲಿ ನದಿಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಅವರ ವರದಿಯ ಆಧಾರದಲ್ಲಿ ತಡೆಗೋಡೆಗೆ ಅನುದಾನ ನೀಡುವ ಕಾರ್ಯ

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ Read More »

ಕರಾವಳಿ
Scroll to Top